ಬೀದರ: ಟೆಕ್ಲ್ಯಾಬ್, ವರ್ಕ್ಶಾಪ್ ಲೋಕಾರ್ಪಣೆ
Team Udayavani, Jun 21, 2022, 1:49 PM IST
ಬೀದರ: ಕಲಿಕೆ ಜೀವನ ಪರ್ಯಂತ ಇದ್ದಾಗ ಮಾತ್ರ ನಮ್ಮ ಕೌಶಲ ಕಾಲಕ್ಕೆ ತಕ್ಕಂತೆ ಬದಲಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.
ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಟಾಟಾ ಟೆಕ್ಲ್ಯಾಬ್ ಮತ್ತು ಟಾಟಾ ವರ್ಕ್ಶಾಪ್ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಬೀದರ ಐಟಿಐ ಕಾಲೇಜಿಗೆ 30 ಕೋಟಿ ವೆಚ್ಚದಲ್ಲಿ ಟಾಟಾ ಸಂಸ್ಥೆಯವರು ಉತ್ತಮ ಉಪಕರಣಗಳನ್ನು ನೀಡಿ ಮಕ್ಕಳ ಕಲಿಕೆಗೆ ಅನುಕೂಲ ಮಾಡಿದ್ದಾರೆ. ಇಂದು ತಮಗೆ ಹಲವಾರು ಅವಕಾಶಗಳು ಇವೆ. ನಾವು ಇಂಜಿನಿಯರ್ ಕಲಿಯುವ ಆ ದಿನಗಳಲ್ಲಿ ಸಣ್ಣ-ಸಣ್ಣ ಮಶೀನ್ಗಳು ಇರುತ್ತಿದ್ದವು. ಇಂದು ತಾಂತ್ರಿಕತೆಯಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಹಾಗಾಗಿಯೇ ಜಗತ್ತು ವೇಗದಲ್ಲಿ ಅಭಿವೃದ್ಧಿಯಾಗುತ್ತಿದೆ ಎಂದರು.
ಇಡೀ ಕರ್ನಾಟಕದಾದ್ಯಂತ ಪ್ರಧಾನಮಂತ್ರಿಗಳು 135 ಕಾಲೇಜುಗಳಿಗೆ ಈ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ಉದ್ಘಾಟನೆ ಮಾಡಿದ್ದಾರೆ. ತಮ್ಮ ಶಿಕ್ಷಣ ಪದವಿಗಳಿಗೆ ಸೀಮಿತವಾಗದೆ ಅದು ನಿರಂತರವಾಗಿ ಇರಬೇಕು. ಯಾವಾಗಲೂ ನಮ್ಮ ಗುರಿ ದೊಡ್ಡದಾಗಿರಬೇಕು. ಸಣ್ಣ ಗುರಿ ಇದ್ದರೆ ನಾವು ಉನ್ನತ ಹಂತಕ್ಕೆ ತಲುಪಲು ಆಗುವುದಿಲ್ಲ. ಕಾಲೇಜು ಮುಗಿದ ನಂತರ ತಾವು ಉನ್ನತ ಶಿಕ್ಷಣ ಪಡೆಯುವ ಮೂಲಕ ಇನ್ನು ಎತ್ತರಕ್ಕೆ ಬೆಳೆಯಬೇಕು ಮತ್ತು ತಮ್ಮ ಮುಂದಿನ ಉಜ್ವಲ ಭವಿಷ್ಯಕ್ಕೆ ಶುಭವಾಗಲಿ ಎಂದು ಶುಭ ಹಾರೈಸಿದರು.
ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪೂರೆ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಬಾಬು ವಾಲಿ ಮತ್ತು ಐಟಿಐ ಕಾಲೇಜಿನ ಪ್ರಾಂಶುಪಾಲ ಶಿವಶಂಕರ ಟೋಕರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ