ನಿಜಾಮುದ್ದೀನ್ ಜಮಾತ್ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬೀದರ್ ನ 26 ಜನರ ಗಂಟಲು ದ್ರವ ಪರೀಕ್ಷೆ
Team Udayavani, Mar 31, 2020, 2:49 PM IST
ಬೀದರ್: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಇತ್ತೀಚೆಗೆ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿ ವಾಪಸ್ಸಾಗಿರುವ ಬೀದರನ 26 ಜನರನ್ನು ಗುರುತಿಸಲಾಗಿದ್ದು, ಅವರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಮಹಾದೇವ್ ತಿಳಿಸಿದ್ದಾರೆ
‘ಉದಯವಾಣಿ’ ಜತೆ ಮಾತನಾಡಿರುವ ಅವರು, ಈ 26 ಜನರಲ್ಲಿ ಕೋವಿಡ್-19 ಸೋಂಕಿನ ಲಕ್ಷಣಗಳು ಇಲ್ಲ. ಆದರೆ ದೆಹಲಿಯ ಪ್ರಾರ್ಥನಾ ಕೂಟದಲ್ಲಿ ದೇಶದ ಬೇರೆ ಕಡೆಯಿಂದ ಭಾಗವಹಿಸಿದ್ದ ಕೆಲವರಲ್ಲಿ ಸೊಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ಕೂಟದಲ್ಲಿ ಪಾಲ್ಗೊಂಡಿದ್ದ ಎಲ್ಲರ ಪರೀಕ್ಷೆ ನಡೆಸಲು ಸರ್ಕಾರ ನಿರ್ದೇಶನ ನೀಡಿದ್ದು, ಈ 26 ಜನರ ಮಾದರಿಯ ಪರೀಕ್ಷೆಗಾಗಿ ಮಂಗಳವಾರ ಸಂಜೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಈ ಹಿಂದೆ ದೆಹಲಿಯಿಂದ ವಾಪಸ್ಸಾಗಿ ಬ್ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಸೊಂಕಿತ ವ್ಯಕ್ತಿಯ ಮಾದರಿಯನ್ನು ಎರಡು ಬಾರಿ ಪರೀಕ್ಷೆ ನಡೆಸಲಾಗಿದ್ದು, ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ