ಜಿಲ್ಲೆಯ ಶೈಕ್ಷಣಿಕ ಸ್ಥಿತಿ ಶೋಚನೀಯ


Team Udayavani, May 1, 2018, 1:29 PM IST

gul-4.jpg

ಬೀದರ: ಯುಪಿಎಸ್‌ಸಿ ಸೇರಿದಂತೆ ವಿವಿಧ ಉನ್ನತ ಪರೀಕ್ಷೆಗಳಲ್ಲಿ ಸಾಧನೆ ಮಾಡುತ್ತಿರುವ ಗಡಿ ಜಿಲ್ಲೆ ಬೀದರ ಪಿಯುಸಿ ಫಲಿತಾಂಶದಲ್ಲಿ ಮಾತ್ರ ಕೊನೆ ಸ್ಥಾನದತ್ತ ಗಿರಕಿ ಹೊಡೆಯುತ್ತಿರುವುದು ಶೋಚನೀಯ ಸಂಗತಿ. ಪ್ರತಿ ವರ್ಷ ಫಲಿತಾಂಶದಲ್ಲಿ ಏರಿಳಿತ ಕಾಣುತ್ತಿರುವ ಬೀದರ ಈ ಬಾರಿ ಶೇ.52.63ರಷ್ಟು ಫಲಿತಾಂಶ ಪಡೆದು 32ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ.

ಕಳೆದ ಬಾರಿಗಿಂತ ಈ ವರ್ಷ ಪಿಯುಸಿ ಪರೀಕ್ಷೆಯಲ್ಲಿ ಕೊಂಚ ಸುಧಾರಣೆ ಕಂಡಿರುವುದರಿಂದ ತೃಪ್ತಿಪಡಬೇಕಷ್ಟೆ. 2016ರಲ್ಲಿ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ದಾಪುಗಾಲು ಇಟ್ಟು 27ನೇ ಸ್ಥಾನಕ್ಕೆ ಮೇಲೇರಿತ್ತು.  ನಂತರ ಜಿಲ್ಲೆ 2017ರಲ್ಲಿ ಶೇ. 42.05ರಷ್ಟು ಫಲಿತಾಂಶದೊಂದಿಗೆ ಕೊನೆ ಸ್ಥಾನಕ್ಕೆ ತಳ್ಳಲ್ಪಟ್ಟಿತ್ತು. ಈ ಬಾರಿಯ ಫಲಿತಾಂಶದಲ್ಲಿ ಶೇ. 10.58ರಷ್ಟು ಹೆಚ್ಚಳವಾಗಿರುವುದು ಸಮಾಧಾನಕರ. ಇತ್ತೀಚೆಗೆ ಪ್ರಕಟಗೊಂಡಿರುವ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಬೀದರನ ಪ್ರತಿಭೆ ರಾಜ್ಯಕ್ಕೆ ಮೊದಲ ರ್‍ಯಾಂಕ್‌ ಗಳಿಸಿದ್ದರೆ, ಕೆಪಿಎಸ್‌ಸಿ ಪರೀಕ್ಷೆಯಲ್ಲೂ ಜಿಲ್ಲೆಯ ಅನೇಕ ಪ್ರತಿಭೆಗಳು ಸಾಧನೆ ಮಾಡಿದ್ದಾರೆ. 

ಪಿಯುಸಿಯಲ್ಲೂ ರ್‍ಯಾಂಕ್‌ ಗಳಿಕೆಯಲ್ಲಿ ಜಿಲ್ಲೆ ಹಿಂದುಳಿದಿಲ್ಲ. ಆದರೆ, ರಾಜ್ಯಕ್ಕೆ ಹೋಲಿಸಿದರೆ ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ಮಾತ್ರ ಹಿನ್ನಡೆಯಾಗುತ್ತಿದೆ. ಖಾಸಗಿ ಕಾಲೇಜುಗಳ ಸಾಧನೆ ಅತ್ಯುತ್ತಮ ಆಗಿದ್ದರೆ ಸರ್ಕಾರಿ- ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳು ನಿರೀಕ್ಷಿತ ಅಂಕ ಪಡೆಯುತ್ತಿಲ್ಲ. 

ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಫಲಿತಾಂಶ ಹಿನ್ನಡೆಗೆ ಪ್ರಮುಖ ಕಾರಣ ಎಂದೆನ್ನಲಾಗುತ್ತಿದೆ. ಉಪನ್ಯಾಸಕರ ಖಾಲಿ ಸ್ಥಾನಗಳನ್ನು ತುಂಬಲು ಜಿಲ್ಲಾಡಳಿತ ಪ್ರತಿ ವರ್ಷ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳುತ್ತಿದೆ. ಆದರೆ, ಶೈಕ್ಷಣಿಕ ವರ್ಷ ಆರಂಭಗೊಂಡ ಎರಡೂಮೂರು ತಿಂಗಳು ಬಳಿಕ. ಇದರಿಂದ ಪಾಠ ಬೋಧನೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಇದೆಲ್ಲದರಿಂದ ಮಕ್ಕಳ ಬೋಧನೆ ಮೇಲೆ ಪರಿಣಾಮ ಉಂಟಾಗಿ ಫಲಿತಾಂಶ ಕುಸಿತ ಆಗುತ್ತಿದೆ.
 
ಜಿಲ್ಲೆಯಲ್ಲಿ ಕಳೆದ 10 ವರ್ಷಗಳ ಪಿಯು ಫಲಿತಾಂಶದ ಮೇಲೆ ಬೆಳಕು ಚಲ್ಲಿದಾಗ ಸಾಕಷ್ಟು ಏರಿಳಿತ ಕಾಣಬಹುದು. 2000-01ನೇ ಸಾಲಿನಿಂದ 2003ರ ವರೆಗೆ ತೀವ್ರ ಹಿನ್ನಡೆ ಸಾಧಿಸುತ್ತಿದ್ದ ಜಿಲ್ಲೆ ನಂತರ ಎರಡು ವರ್ಷ ಉತ್ತಮ ಫಲಿತಾಂಶ ಪಡೆದಿತ್ತು.

ಆದರೆ, 2005-06ರಿಂದ ಮತ್ತೆ ಮೊದಲಿನಂತೆ ಕೊನೆ ಸ್ಥಾನಕ್ಕೆ ತಲುಪಿತ್ತು. 2008-09ರಲ್ಲಿ ಕೊನೆ ಸ್ಥಾನದಲ್ಲಿದ್ದರೂ ಉತ್ತಮ ರೀತಿಯಲ್ಲಿ ಶೇಕಡವಾರು ಫಲಿತಾಂಶ ಪಡೆದಿತ್ತು. ತದನಂತರ ಶೇ.49.71ರಷ್ಟು ಫಲಿತಾಂಶ ಗಿಟ್ಟಿಸಿಕೊಂಡು ಗಮನಾರ್ಹ ಎನಿಸಿಕೊಂಡಿತ್ತು. 2009-10ರಿಂದ ಈಚೆಗೆ ಫಲಿತಾಂಶ ಕುಸಿತ ಕಾಣುತ್ತಿದ್ದರೂ 2016ರಲ್ಲಿ ಹೊಸ ಭರವಸೆ ಹುಟ್ಟಿಸಿತ್ತು.
 
ಜಿಲ್ಲೆಯಲ್ಲಿ ಫಲಿತಾಂಶದ ಏರಿಳಿತ: ಬೀದರ ಜಿಲ್ಲೆ 2000-01ರಲ್ಲಿ 21.83ರಷ್ಟು ಮತ್ತು ಫಲಿತಾಂಶ ಪಡೆದಿತ್ತು. ನಂತರ 2001-02ರಲ್ಲಿ 22.09ರಷ್ಟು, 2002-03ರಲ್ಲಿ 25.33 ರಷ್ಟು, 2003-04ರಲ್ಲಿ 37.24ರಷ್ಟು, 2004-05ರಲ್ಲಿ 41.16ರಷ್ಟು, 2005-06ರಲ್ಲಿ 20.32ರಷ್ಟು, 2006-07ರಲ್ಲಿ 20.20ರಷ್ಟು 2007-08ರಲ್ಲಿ 16.57ರಷ್ಟು, 2008-09ರಲ್ಲಿ ಶೇ. 34ರಷ್ಟು, 2009-10ರಲ್ಲಿ ಶೇ. 49.71ರಷ್ಟು, 2010-11ರಲ್ಲಿ ಶೇ. 45ರಷ್ಟು, 2011-12ರಲ್ಲಿ ಶೇ. 40.32ರಷ್ಟು, 2012- 13ರಲ್ಲಿ ಶೇ. 44.24ರಷ್ಟು, 2013-14ರಲ್ಲಿ ಶೇ. 44.95ರಷ್ಟು, 2015ರಲ್ಲಿ ಶೇ. 54.4 ಮತ್ತು 2016ರಲ್ಲಿ ಶೇ. 52.07ರಷ್ಟು ಅಂಕ ಪಡೆದಿತ್ತು. 2017ರಲ್ಲಿ ಶೇ. 42.05ರಷ್ಟು ಅಂಕ ಪಡೆದು ಮತ್ತೆ ಕುಸಿತ ಕಂಡಿತು.

ಉಪನ್ಯಾಸಕರ ಕೊರತೆ ಕಾರಣ ಪಿಯುಸಿಯಲ್ಲಿ ಕಳೆದ ಬಾರಿ ಶೇ.10ರಷ್ಟು ಫಲಿತಾಂಶ ಹೆಚ್ಚಿಸಿಕೊಂಡರೂ ತೃಪ್ತಿಕರವಾಗಿಲ್ಲ. ಬೀದರ ಜಿಲ್ಲೆ ಶೇ. 52.63ರಷ್ಟು ಫಲಿತಾಂಶ ಪಡೆದು 31ನೇ ಸ್ಥಾನದಲ್ಲಿದೆ. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಉಪನ್ಯಾಸಕ ಕೊರತೆ ಫಲಿತಾಂಶ ಹಿನ್ನಡೆಗೆ ಪ್ರಮುಖ ಕಾರಣ ಆಗುತ್ತಿದೆ. ಅತಿಥಿ ಉಪನ್ಯಾಸಕರ ನೇಮಕಾತಿಯೂ ಸಮಯಕ್ಕೆ ಮಾಡುತ್ತಿಲ್ಲ. ಮುಂದಿನ ವರ್ಷ ಸುಧಾರಣೆಗೆ ಅಗತ್ಯ ಕ್ರಮ ವಹಿಸಲಾಗುವುದು. ಶೀಘ್ರದಲ್ಲಿ ಉಪನ್ಯಾಸಕರ ನೇಮಕಾತಿಗೆ ಮನವಿ ಮಾಡಲಾಗುವುದು. ಪ್ರತಿ ಯೂನಿಟ್‌ ಪರೀಕ್ಷೆ ಹಾಗೂ ಪರಿಹಾರ ಬೋಧನೆಯ ಮೂಲಕ ಶಿಕ್ಷಣದ ಗುಣಮಟ್ಟ ಸುಧಾರಿಸಲಾಗುವುದು.
 ಮಲ್ಲಿಕಾರ್ಜುನ ಎಸ್‌ ಡಿಡಿಪಿಯು, ಬೀದರ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.