ಸಾಧನೆ ಸತತ ಪರಿಶ್ರಮವಾದಿಗಳ ಸ್ವತ್ತು
Team Udayavani, Apr 23, 2019, 5:12 PM IST
ಹುಮನಾಬಾದ: ಸಾಧನೆ ಎಂಬುದು ಸತತ ಪರಿಶ್ರಮವಾದಿಗಳ ಸ್ವತ್ತು ಎಂದು ಶಾಹಿನ್ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಕಾಲೇಜು ಆಡಳಿತಾಧಿಕಾರಿ ಇರ್ಪತ್ ಇಮ್ರಾನ್ ಹೇಳಿದರು.
ಪಟ್ಟಣದ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ 2019ನೇ ಸಾಲಿನ ಪಿಯುಸಿ ದ್ವಿತೀಯ ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ಶೇ.93 ಅಂಕ ಪಡೆದ ಬಿಬಿ ಸುರಾ, ಶೇ.91 ಅಂಕ ಪಡೆದ ರಕಾ ಮತ್ತು ಶೇ.87 ಅಂಕ ಪಡೆದ ಕಾವೇರಿ ಮಹಾವಿದ್ಯಾಲಯದ ಭಾವಿ ವಿದ್ಯಾರ್ಥಿಗಳೆಲ್ಲರಿಗೂ ಆದರ್ಶರಾಗಿದ್ದಾರೆ ಎಂದರು.
ಪ್ರಾಚಾರ್ಯ ಡಾ|ಶಾಂತಕುಮಾರ ಪತ್ರಿ ಮಾತನಾಡಿ, ಮನುಷ್ಯನ ಭವಿಷ್ಯಕ್ಕೆ ಶಿಕ್ಷಣ ಅವಶ್ಯ ಮಾತ್ರವಲ್ಲದೇ ಅನಿವಾರ್ಯ ಕೂಡ. ಶಿಕ್ಷಣದಿಂದಲೇ ಮನುಷ್ಯನ ಸರ್ವಾಂಗೀಣ ಪ್ರಗತಿ ಸಾಧ್ಯ ಎಂದರು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಈ ಎರಡು ವರ್ಷ ಕಠಿಣ ಪರಿಶ್ರಮಪಟ್ಟರೆ ಭವಿಜ್ಯ ಉಜ್ವಲಗೊಳ್ಳುತ್ತದೆ. ಈಗ ಸೋಮಾರಿಗಳಾದರೆ ಭವಿಷ್ಯವಿಡಿ ಅಲೆಮಾರಿಗಳಾಗಿ ಬದುಕಬೇಕಾಗುತ್ತದೆ ಎಂದರು. ಉಪನ್ಯಾಸಕ ಡಾ|ಪ್ರದೀಪ ಖಜೂರೆ, ಸುನೀಲ ಜಾಧವ್, ಮಹ್ಮದಲಿ, ರಾಜೇಂದ್ರ, ಶಿಲ್ಪಾ, ಪ್ರಿಯಾಂಕಾ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ