ಸೌರ ವಿದ್ಯುತ್‌ ಘಟಕದಿಂದ ಪ್ರಾಣಿಗಳಿಗೆ ಸಂಕಷ್ಟ


Team Udayavani, Jan 9, 2018, 12:03 PM IST

bid-2.jpg

ಹುಮನಾಬಾದ: ವಿವಿಧ ಇಲಾಖೆಗಳ ಅಧಿಕಾರಿಗಳ ನಿಲಕ್ಷ್ಯಕ್ಕೆ ಅರಣ್ಯ ಪ್ರದೇಶದ ಸುತ್ತ ನಡೆಯುತ್ತಿರುವ ಚಟುವಟಿಕೆಗಳಿಂದ ಕಾಡುಪ್ರಾಣಿಗಳ ಜೀವಕ್ಕೆ ಸಂಕಷ್ಟ ಎದುರಾಗಿದ್ದು, ಮೂರು ಕೃಷ್ಣ ಮೃಗಗಳು ಪ್ರಾಣ ಕಳೆದುಕೊಂಡಿವೆ.

ನಿರ್ಣಾ ಗ್ರಾಮದ ಹೊರವಲಯದಲ್ಲಿ ಸುಮಾರು 124 ಎಕರೆ ಪ್ರದೇಶದಲ್ಲಿ ಸೌರ ವಿದ್ಯುತ್‌ ತಯಾರಿಕಾ ಘಟಕ ಸ್ಥಾಪನೆಗೊಳ್ಳುತ್ತಿದೆ. ಪಕ್ಕದಲ್ಲಿ ಅರಣ್ಯ ಪ್ರದೇಶದ ಭೂಮಿ ಇದೆ. ಇಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಪರವಾನಗಿ ಇಲ್ಲದೇ ಕಾನೂನು ಮೀರಿ ಅರಣ್ಯ ಪ್ರದೇಶದ ಭೂಮಿಗೆ ತಂತಿ ಬೇಲಿ ಎಳೆಯಲಾಗಿದೆ. ಇದರಿಂದ ಪ್ರಾಣಿಗಳ ಜೀವಕ್ಕೆ ಆತಂಕ ಎದುರಾಗಿದ್ದು, ಮೂಕ ಪ್ರಾಣಿಗಳು ಪ್ರಾಣ ಕಳೆದುಕೊಳ್ಳುತ್ತಿವೆ.

ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷಕ್ಕೆ ಅರಣ್ಯದ ಸುತ್ತ ನಡೆಯುವ ಚಟುವಟಿಕೆಗಳೇ ಕಾರಣವಾಗಿವೆ. ರಸ್ತೆ ಕಾಮಗಾರಿ, ವಿವಿಧ ಘಟಕಗಳ ಸ್ಥಾಪನೆಯಿಂದ ಪ್ರಾಣಿಗಳು ನಸಿಸುತ್ತಿವೆ. ನಿರ್ಣಾ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಪ್ರಕಾರ 50ಕ್ಕೂ ಅಧಿಕ ರಾಜ್ಯದ ಅಪರೂಪದ ಕೃಷ್ಣ ಮೃಗಗಳು ಇಲ್ಲಿವೆ. ಅಳಿವಿನಂಚಿನಲ್ಲಿರುವ ಇಂತಹ ಕೃಷ್ಣಮೃಗ ಸಂತತಿ ಉಳಿವಿಗಾಗಿ ಸಮುದಾಯದಲ್ಲಿ ಜಾಗೃತಿ ಮೂಡಬೇಕಾಗಿದೆ. ಪ್ರಾಣಿಗಳ ವಾಸ ಸ್ಥಳದ ಸುತ್ತಲಿನ ಪ್ರದೇಶದಲ್ಲಿ ಯಾವುದೇ ಘಟಕಗಳು, ಬೇಲಿ ಹಾಕಲು ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಕೂಡ ಇಲ್ಲಿ ಬೇಲಿ ಹಾಕಲಾಗಿದೆ. 

ಪರವಾನಗಿ ಇಲ್ಲ: ಸ್ಥಳೀಯ ನಿರ್ಣಾ ಗ್ರಾಮ ಪಂಚಾಯತ ಗ್ರಾಮ ಸಭೆಯಲ್ಲಿ ಎರಡು ಬಾರಿ ಹೊಸ ಸೋಲಾರ್‌ ಕಂಪನಿಗೆ ಪರವಾನಗಿ ನೀಡದಂತೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ಮಧ್ಯದಲ್ಲಿ ಅಂದಿನ ಪಿಡಿಒ ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡಿದ ಹಿನ್ನೆಲೆಯಲ್ಲಿ ಗ್ರಾಪಂ ಆಡಳಿತ ಮಂಡಳಿ ಸದಸ್ಯರು ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಪಿಡಿಒ ಬದಲಾವಣೆ ಮಾಡಿ ಆದೇಶ ಹೊರಡಿಸಿದರೆ ಹೊರೆತು ಸೋಲಾರ್‌ ಘಟಕ ಸ್ಥಗಿತಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂಬುದು ಗ್ರಾಪಂ ಸದಸ್ಯರ ಮಾತು. ಕೃಷಿ ಚಟುವಟಿಕೆಗೆ ಮೀಸಲಾದ ಭೂಮಿಯಲ್ಲಿ ಭೂ ಪರಿರ್ವತನೆ ಮಾಡದೇ 124 ಎಕರೆ ಪ್ರದೇಶದಲ್ಲಿ ಘಟಕ ಸ್ಥಾಪನೆ ಮಾಡಿರುವುದರಿಂದ ಪಂಚಾಯಿತಿಗೆ ತೆರಿಗೆ ಆಧಾರದಲ್ಲಿ ಬರಬೇಕಾಗಿದ್ದ ಕೋಟಿಗೂ ಅಧಿಕ ಅನುದಾನ ಬಾರದಾಗಿದೆ. ಗ್ರಾಮದಲ್ಲಿ ಮೂರು ಸೋಲಾರ್‌ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ.

ಅಧಿಕಾರಿಗಳ ಮೌನ: ಪರವಾನಗಿ ರಹಿತ ಹಾಗೂ ಎನ್‌ಎ ಆಗದ ಭೂಮಿಯಲ್ಲಿ ಸೋಲಾರ್‌ ಘಟಕಗಳನ್ನು ಸ್ಥಾಪನೆ ಮಾಡಿರುವುದ ರಿಂದ ಪಂಚಾಯಿತಿ ಆದಾಯಕ್ಕೆ ಕತ್ತರಿ ಬಿದ್ದಿದೆ. ಈ ಕುರಿತು ಡಿಸಿ, ಸಹಾಯಕ ಆಯುಕ್ತರು, ತಾಪಂ ಇಒ ಸೇರಿದಂತೆ ತಾಲೂಕು, ಜಿಲ್ಲಾಮಟ್ಟದ ಅಧಿಕಾಗಳಿಗೆ ದೂರು ನೀಡಿದರೂ ಯಾರೂ ಕ್ರಮಕ್ಕೆ ಮುಂದಾಗುತ್ತಿಲ್ಲ. ಯಾವ ಕಾರಣಕ್ಕೆ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ತಾಪಂ ಮಾಜಿ ಅಧ್ಯಕ್ಷ ಸಂಜುರೆಡ್ಡಿ ನಿರ್ಣಾ ಪ್ರಶ್ನಿಸಿದ್ದಾರೆ.

ನಿರ್ಣಾ ಗ್ರಾಮದ ರೇನಿವ್‌ ಪವರ್‌ ಘಟಕದಲ್ಲಿ ಜ.3ರಂದು ಎರಡು, ಜ.4ರಂದು ಒಂದು ಕೃಷ್ಣ ಮೃಗ ಮೃತಪಟ್ಟಿವೆ. ಅರಣ್ಯ ಪ್ರದೇಶದ ಎನ್‌ಒಸಿ ಪಡೆಯದೇ ಹಾಗೂ ಇಲಾಖೆಯ ಗಮನಕ್ಕೆ ತರದೇ ಸುತ್ತು ಬೇಲಿ ಹಾಕಿರುವುದು ಪ್ರಾಣಿಗಳ ಜೀವಕ್ಕೆ ಕಂಟಕವಾಗಿದೆ. ಮೃತಪ್ರಾಣಿಗಳ ಶವ ಪರೀಕ್ಷೆ ನಡೆಸಲಾಗಿದೆ. ಬೇಟೆ ಆಡಿ ಅಥವಾ ಬೇಲಿಯಿಂದ ಮೃತಪಟ್ಟಿವೆ ಎಂಬುದು ಅಧಿಕೃತ ವರದಿಯಿಂದ ಗೊತ್ತಾಗುತ್ತದೆ. ಈ ಕುರಿತು ಸೋಲಾರ್‌ ಕಂಪನಿ ಹಾಗೂ ಕಂಪನಿ ನಿರ್ವಹಣೆ ಮಾಡುವ ಅಮೀತ ಸಿಂಗ್‌, ಪ್ರತೀಕ ಎಂಬುವರ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1972ರ 9, 39, 51ರಡಿ ಪ್ರಕರಣ ದಾಖಲಿಸಲಾಗಿದೆ. ಇದು ಜಾಮೀನು ರಹಿತ ಪ್ರಕರಣವಾಗಿದೆ. ಸಣ್ಣ ಶಬ್ಧಕ್ಕೂ ತೀವ್ರ ರೀತಿಯಲ್ಲಿ ಸ್ಪಂದಿಸುವ ಸೂಕ್ಷ್ಮ ಗ್ರಹಣಾ ಶಕ್ತಿ ಹೊಂದಿರುವ ಕೃಷ್ಣಮಗಗಳ ಸಂತತಿ ಉಳಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕೆಲಸ ಮಾಡುತ್ತಿದೆ. ಅಳಿವಿನಂಚಿನಲ್ಲಿರುವ ಕೃಷ್ಣ ಮೃಗ ಸಂತತಿ ಉಳಿವಿಗಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಯಬೇಕಾಗಿದೆ.
 ಬಸವರಾಜ ದಂಡೆ, ಅರಣ್ಯ ಇಲಾಖೆ ಅಧಿಕಾರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.