ಉಜ್ವಲ ಯೋಜನೆ ಸ್ಟೌವ್ ಕಳಪೆ: ಮಹಿಳೆಯರ ಆಕ್ರೋಶ
Team Udayavani, Mar 3, 2019, 7:33 AM IST
ಹುಮನಾಬಾದ: ಕೇಂದ್ರ ಸರ್ಕಾರ ಉಜ್ವಲ ಯೋಜನೆಯಡಿ ವಿತರಿಸಿದ ಗ್ಯಾಸ್ ಸಿಲಿಂಡರ್ ಕಿಟ್ನಲ್ಲಿ ಕಳಪೆ ಸ್ಟೌವ್ ವಿತರಿಸಿದೆ ಎಂದು ಆರೋಪಿಸಿ, ಗುಣಮಟ್ಟದ ಸ್ಟೌವ್ ವಿತರಿಸಲು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಚಿಟಗುಪ್ಪ ತಾಲೂಕು ಘಟಕದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿ ಚಿಟಗುಪ್ಪ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ದೇಶದ 8 ಕೋಟಿ ಜನತೆಗೆ ಉಚಿತ ಗ್ಯಾಸ್ ವಿತರಿಸಲಾಗಿದೆ ಎಂದು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕರ ದೊಡ್ಡದಾಗಿ ಜಾಹೀರಾತು ಪ್ರಕಟಿಸಿ, ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ. ಆದರೆ ದೇಶದ ಅಸಂಖ್ಯಾತ ಮಹಿಳೆಯರ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡುತ್ತಿದೆ ಎಂದು
ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ಎಸ್.ಲಕ್ಷ್ಮೀ ಆರೋಪಿಸಿದರು.
ಚಿಟಗುಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ 9 ಜನ ವೈದ್ಯರ ನೇಮಕಕ್ಕೆ ಮಂಜೂರಾತಿ ದೊರೆತಿದ್ದು, 5 ಜನ ಲಭ್ಯವಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ನಿತ್ಯ 3 ಜನ ಸಹ ಆಸ್ಪತ್ರೆಯಲ್ಲಿ ಸೇವೆ ಒದಗಿಸುವುದಿಲ್ಲ. ಜೊತೆಗೆ ಕೊರತೆ ಇರುವಂತಹ ಅವಶ್ಯಕ ಪರಿಕರಗಳನ್ನು ಶೀಘ್ರ ಕಲ್ಪಿಸಬೇಕು ಎಂದು ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಕಾರ್ಯದರ್ಶಿ ರೇಮಾ ಹಂಸರಾಜ ಆಗ್ರಹಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷೆ ಇಸ್ಸಾ ಬೇಗಂ, ಮಂಗಲಾ, ಮಂಜುಳಾ, ಶೋಭಾ, ಮಹೆಬೂಬಾ ಬೇಗಂ, ಈಶ್ವರಮ್ಮ, ಮುಮತಾಜ, ಸತ್ಯಭಾಮಾ, ಉರ್ಮಿಳಾ, ರೇಖಾ ಹಮೀಲಪೂರ, ರುಕ್ಮಿಣಿ, ಸುನಿತಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…