ಸಾರ್ವಜನಿಕ ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ
Team Udayavani, Oct 8, 2018, 12:40 PM IST
ಹುಮನಾಬಾದ: ಒಂದೇ ಕಡೆ 100 ಜನ ಅಥವಾ ಒಂದು ದಿನದಲ್ಲಿ 500 ಜನ ಭೇಟಿ ನೀಡುವ ಸಾರ್ವಜನಿಕ ಸ್ಥಳಗಳಲ್ಲಿ ಸಂಬಂಧಪಟ್ಟವರು ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಬೇಕು. ಈ ನಿಟ್ಟಿನಲ್ಲಿ ಜನರು ಈಗಿನಿಂದಲೇ ಕಟ್ಟೆಚ್ಚರ ವಹಿಸಬೇಕು ಎಂದು ಪಿಎಸ್ಐ ಎಲ್.ಟಿ. ಸಂತೋಷ ಹೇಳಿದರು.
ಪಟ್ಟಣದ ಸ್ಟಾರ್ ಕಲ್ಯಾಣ ಮಂಟಪದಲ್ಲಿ ರವಿವಾರ ಪೊಲೀಸ್ ಇಲಾಖೆ ಸಾರ್ವಜನಿಕ ಸುರಕ್ಷತೆ ಉದ್ದೇಶದಿಂದ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾರ್ಗದರ್ಶನ ನೀಡಿದ ಅವರು, ಸಾರ್ವಜನಿಕ ಆಗಮನ ಮತ್ತು ನಿರ್ಗಮನ ಸ್ಥಳಗಳಲ್ಲಿ 30 ದಿನಗಳ ವಿಡಿಯೋ ಚಿತ್ರೀಕರಣ ಸಂಗ್ರಹ ಸಾಮರ್ಥ್ಯ ಹೊಂದಿರುವ ಕ್ಯಾಮರಾಗಳನ್ನೇ ಅಳವಡಿಸಬೇಕು.
ಪ್ರತಿಯೊಂದು ಸಂಸ್ಥೆಯು ಇಲಾಖೆ ನೀಡಿರುವ ಫಾರ್ಮ್-1 ಮತ್ತು 15ರಲ್ಲಿ ಕಡ್ಡಾಯವಾಗಿ ಇಲಾಖೆಗೆ ಮಾಹಿತಿ ಸಲ್ಲಿಸಬೇಕು ಎಂದು ತಿಳಿಸಿದರು.
ಪಿಎಸ್ಐಗಳಾದ ಜಿ.ಎಂ.ಪಾಟೀಲ, ಮಹಾಂತೇಶ ಲುಂಬಿ ಕಾಮರಾ ಅಳವಡಿಕೆಯ ಉದ್ದೇಶ ಕುರಿತು ವಿವರಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರು ವಿವಿಧ ಸಮಸ್ಯೆಗಳ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆ ಬಗೆಹರಿಸಿಕೊಂಡರು.
ಗಣ್ಯರಾದ ಡಾ| ಜಯಕುಮಾರ ಸಿಂಧೆ, ಶಾಂತವೀರ ಯಲಾಲ್, ನರೇಂದ್ರ ಪಾಟೀಲ, ವಿಶ್ವನಾಥ ಸಾತಾ, ರಿಜ್ವಾನ್, ಜ್ಞಾನದೇವ ಭೋಸ್ಲೆ, ಕಿಶೋರ ಕುಲಕರ್ಣಿ ಅಲ್ಲದೇ ತಾಲೂಕಿನ ವಿವಿಧ ಶಾಲಾ, ಕಾಲೇಜು, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಮತ್ತು ವ್ಯಾಪಾರಿಗಳು ಸೇರಿ 500ಕ್ಕೂ ಅಧಿಕ ಜನ ಭಾಗವಹಿಸಿದ್ದರು.
ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಸ್ಥಳಗಳು, ಕ್ರೀಡಾ ಸಂಕಿರ್ಣಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ ಒಂದೇ ಕಡೆ ಏಕ ಕಾಲಕ್ಕೆ 100 ಜನ ಸೇರುವ ಅಥವಾ ಬೆಳಗ್ಗೆಯಿಂದ ಸಂಜೆ ವರೆಗೆ 500 ಜನ ಭೇಟಿ ನೀಡುವ ಯಾವುದೇ ಸ್ಥಳದಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಬೇಕು. ಇಲಾಖೆ ನಿಯಮ ಪಾಲಿಸದ ಸಂಸ್ಥೆಗೆ ಮೊದಲ ತಿಂಗಳು 5 ಸಾವಿರ ರೂ. ಎರಡನೇ ತಿಂಗಳಲ್ಲಿ 10 ಸಾವಿರ ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಪಾಲಿಸದೇ ಇದ್ದಲ್ಲಿ ಆ ಸಂಸ್ಥೆಗೆ ಬೀಗಮುದ್ರೆ ಹಾಕಲಾಗುವುದು.
ಎಲ್.ಟಿ.ಸಂತೋಷ, ಪಿಎಸ್ಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ