ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಸ್ಸಿದ್ಧ


Team Udayavani, Aug 14, 2017, 10:53 AM IST

170813kpn76 copy.JPG

ಬೀದರ: ಅಮಿತ್‌ ಶಾ ರಾಜ್ಯದಲ್ಲೇ ಠಿಕಾಣಿ ಹೂಡಿದರೂ, ಬಿಜೆಪಿಯವರು ಎಷ್ಟೇ ತಿಪ್ಪರಲಾಗಾ ಹಾಕಿದರೂ 2018ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರಲಿದೆ. ನಾಡಿನ ಜನರ ನಾಡಿಮಿಡಿತ ಅರ್ಥ ಮಾಡಿಕೊಂಡಿದ್ದೇನೆ ಮತ್ತು ಆತ್ಮಸ್ಥೈರ್ಯವೂ ನನಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ರವಿವಾರ ಹಮ್ಮಿಕೊಂಡಿದ್ದ
ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯ ಮಾತುಗಳ ಮೂಲಕ ಟೀಕಿಸಿದರು. ಕಾಂಗ್ರೆಸ್‌ ಮೇಲೆ ಮತದಾರರು ನಂಬಿಕೆ ಹೊಂದಿದ್ದು, ಮತ್ತೂಂದು ಅವಧಿಗೆ ಪಕ್ಷಕ್ಕೆ ಆಶೀರ್ವಾದ ಮಾಡುವರು. ಇದನ್ನು ಯಾರಿಂದಲೂ ತಪ್ಪಿಸಲು ಅಸಾಧ್ಯ ಎಂದರು. ಜೆಡಿಎಸ್‌ ಅಪ್ಪನಾಣೆಗೂ ಅಧಿಕಾರಕ್ಕೆ ಬರುವುದಿಲ್ಲ. ಇನ್ನೂ ಬಿಜೆಪಿ ಹಗಲು ಕನಸು ಕಾಣುತ್ತಿದೆ. ಯಾರು ಅನ್ನ, ನೀರು ಕೊಡುತ್ತಾರೆ ಅಂಥವರನ್ನು ರಾಜ್ಯದ ಜನ ಎಂದಿಗೂ ಮರೆಯುವುದಿಲ್ಲ. ಬಸವ, ಕುವೆಂಪು ಅವರ ಈ ನಾಡಿನಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ಒಡೆದಾಳುವ ಮೂಲಕ ಅಧಿಕಾರ ಗಿಟ್ಟಿಸಿಕೊಳ್ಳುವುದು ಅಸಾಧ್ಯ. ಇಲ್ಲಿನ ಜನರು ರಾಜಕೀಯವಾಗಿ ಪ್ರಬುದ್ಧರಾಗಿದ್ದಾರೆ. ಹಾಗಾಗಿ ಬಿಜೆಪಿಯವರ ಕನಸು ನನಸಾಗುವುದಿಲ್ಲ ಎಂದರು. ಬಿಎಸ್‌ವೈ ಢೋಂಗಿ ರಾಜಕಾರಣಿ: ಮಾಜಿ ಸಿಎಂ ಯಡಿಯೂರಪ್ಪ ಅವರಂಥ ಢೋಂಗಿ ರಾಜಕಾರಣಿ ಇನ್ನೊಬ್ಬರು ಸಿಗುವುದಿಲ್ಲ. ರೈತನ ಮಗ ಎಂದು ಹೇಳಿಕೊಳ್ಳುವ ಬಿಎಸ್‌ವೈ ಎಂದಾದರೂ ಜಮೀನು ಬಿತ್ತನೆ ಮಾಡಿದ್ದಾರಾ ಎಂದು ಪ್ರಶ್ನಿಸಿದ ಸಿದ್ಧರಾಮಯ್ಯ, ಸಾಲ ಮನ್ನಾ ಮಾಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದ ಬಿಎಸ್‌ವೈ 2011ರಲ್ಲಿ ರೈತರ ಸಾಲದ ಬಗ್ಗೆ ಕಾಂಗ್ರೆಸ್‌ ಒತ್ತಾಯಿಸಿದಾಗ ನಾನೇನು ನೋಟು ಮುದ್ರಿಸುವ ಯಂತ್ರ ಇಟ್ಟಿಕೊಂಡಿದ್ದಾನಾ ಎಂದು ಹೇಳಿ ಅವಮಾನಿಸಿದ್ದರು ಎಂದು ತಿಳಿಸಿದರು. ರಾಜ್ಯದ ರೈತರ ಮೇಲೆ 52 ಸಾವಿರ ಕೋಟಿ ರೂ. ಬೆಳೆ ಸಾಲ ಇದ್ದು, ಇದರಲ್ಲಿ ರಾಜ್ಯ ಸಹಕಾರ ಬ್ಯಾಂಕಿನ 8,156 ಕೋಟಿ ರೂ. ಮನ್ನಾ ಮಾಡಿದೆ. ಇನ್ನುಳಿದ 41 ಸಾವಿರ ಕೋಟಿ ರೂ. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲವನ್ನು ಕೇಂದ್ರ ಮನ್ನಾ ಮಾಡಬೇಕಿದೆ. ಆದರೆ, ರಾಜ್ಯದ ಯಾರೊಬ್ಬ ಬಿಜೆಪಿ ಸಂಸದರು ಈ ವಿಷಯದಲ್ಲಿ ಧ್ವನಿ ಎತ್ತುತ್ತಿಲ್ಲ. ಬಿಜೆಪಿ ನಾಯಕರು ಈಗಲಾದರೂ ಸಾಲ ಮನ್ನಾ ಮಾಡಲು ಪ್ರಧಾನಿಗಳ ಮೇಲೆ ಒತ್ತಡ ಹಾಕದಿದ್ದರೆ ಜನರಿಂದ ರೈತ
ವಿರೋಧಿ  ಪಟ್ಟ ಕಟ್ಟಿಕೊಳ್ಳುತ್ತೀರಿ ಎಂದು ಎಚ್ಚರಿಸಿದರು. ರೈತರ ಬಗ್ಗೆ ಮೊಸಳೆ ಕಣ್ಣೀರು: ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ವರ್ಷಗಳೇ ಕಳೆದರೂ ಪ್ರಧಾನಿ ಹೇಳಿದ ಒಳ್ಳೆಯ ದಿನಗಳು ಬರಲೇ ಇಲ್ಲ. ಇದು ಬಾಯಿ ಬಡಾಯಿ ಸರ್ಕಾರ ಆಗಿದ್ದು, ಅಭಿವೃದ್ಧಿ ಮಾತ್ರ ಶೂನ್ಯ. 100 ದಿನದಲ್ಲೇ ಕಪ್ಪು ಹಣ ತಂದು ಪ್ರತಿ ಜನರ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ ಎಂದು ಹೇಳಿ ಅ ಧಿಕಾರಕ್ಕೆ ಬಂದು ಈಗ ಖಾತೆಗೆ 15 ರೂ. ಸಹ ಹಾಕಲಿಲ್ಲ. ರೇಡಿಯೋ ಮನ್‌ ಕಿ ಬಾತ್‌ನಲ್ಲಿ ರೈತರ ಬಗ್ಗೆ ಪ್ರಧಾನಿ ಮೊಸಳೆ ಕಣ್ಣೀರು ಸುರಿಸುತ್ತಾರೆ ಹೊರತು ಅನ್ನದಾತರ ನೆರವಿಗೆ ಬರುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಕಿಡಿಕಾರಿದರು.

ಟಾಪ್ ನ್ಯೂಸ್

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.