ಬೆಳೆಗೆ ಸಂಜೀವಿನಿಯಾದ ಕೃಷಿ ಹೊಂಡದ ನೀರು


Team Udayavani, Aug 6, 2018, 11:58 AM IST

MAN_3970.jpg

ಔರಾದ: ತೇವಾಂಶ ಕೊರತೆಯಿಂದ ಒಣಗುತ್ತಿರುವ ಪಟ್ಟಣದ ರೈತರ ಹೊಲದಲ್ಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕೃಷಿ ಹೊಂಡದಲ್ಲಿ ಸಂಗ್ರಹವಾದ ನೀರು ಸಂಜೀವಿನಿಯಾಗಿದೆ. ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಸಕಾಲಕ್ಕೆ ಬಂದಿರುವ ಹಿನ್ನೆಲೆಯಲ್ಲಿ ರೈತರು ಉತ್ಸಾಹದಿಂದ ಬಿತ್ತನೆ ಮಾಡಿದ್ದರು. ಈ ವರ್ಷದ ಬೆಳೆಯಲ್ಲಿ ಉತ್ತಮ ಫಸಲು ತೆಗೆಯಬಹುದು ಎಂದು ನಿರೀಕ್ಷೆಯಲ್ಲಿದ್ದರು. ಆದರೆ 20 ದಿನಗಳಿಂದ ಮಳೆ ಬಾರದೆ ಇರುವ ಹಿನ್ನೆಲೆಯಲ್ಲಿ ಉದ್ದು, ಹೆಸರು ಹಾಗೂ ಸೋಯಾಬಿನ್‌ ಬೆಳೆಗಳು ನಾಶವಾಗುವ ಸ್ಥಿತಿಯಲ್ಲಿದ್ದವು. ಇಂಥ ಸಮಯದಲ್ಲಿ ಕೃಷಿ ಹೊಂಡಗಳು ರೈತರಿಗೆ ಆಶ್ರಯ ನೀಡಿ ಬೆಳೆಗೆ ಸಂಜೀವಿನಿಯಾಗಿ ಪರಿಣಮಿಸಿವೆ. ಔರಾದ ಪಟ್ಟಣದ ಲಕ್ಷ್ಮಣ ತುಗಾಂವೆ ಎನ್ನುವ ರೈತರ ಹೊಲದಲ್ಲಿನ ಸ್ಥಿತಿಗತಿ ಸದ್ಯ ಹೀಗಿದೆ. ಕೃಷಿ ಇಲಾಖೆಯಿಂದ 20-20 ಅಳತೆಯ ಹೊಂಡ ನಿರ್ಮಿಲಾಗಿದೆ. 10 ಅಡಿ ಆಳವಿರುವ ಈ ಹೊಂಡದಲ್ಲಿ ಆರು ಅಡಿ ನೀರು ಸಂಗ್ರಹವಾಗಿದೆ.

ಜನರಿಗೂ ಆಶ್ರಯ: ರೈತರ ಹೊಲದಲ್ಲಿ ನಿರ್ಮಿಸಿದ ಕೃಷಿ ಹೊಂಡದಿಂದ ಸೋಯಾಬಿನ್‌ ಬೆಳೆಗೆ ಯಂತ್ರಗಳ ಮೂಲಕ ನೀರು ಬಿಡಲಾಗುತ್ತಿದೆ. ಅದರಂತೆ ಅಕ್ಕಪಕ್ಕದ ಹೊಲದ ರೈತರು ಬೆಳೆಗಳಿಗೆ ಕ್ರಿಮಿನಾಶಕ ಸಿಂಪರಣೆ ಮಾಡಲು ಹಾಗೂ ಹೊಲದ ಅಂಚಿನಲ್ಲಿರುವ ಎರಡು ತಾಂಡಾ ನಿವಾಸಿಗಳು ನೀರು ಸರಬರಾಜು ಆಗದಿರುವ ದಿನ ಕುಡಿಯಲು ಹಾಗೂ ಮನೆ ಕೆಲಸಕ್ಕೆ ಬಳಸಲು ಸಹ ಈ ಕೃಷಿ ಹೊಂಡದಿಂದಲೇ ನೀರು ತೆಗೆದುಕೊಂಡು ಹೊಗುತ್ತಿದ್ದಾರೆ ಎಂದು ರೈತ ಲಕ್ಷ್ಮಣ ಹೇಳುತ್ತಾರೆ. 

ಉತ್ತಮ ಮಾರ್ಗದರ್ಶನ: ನಮ್ಮ ಹೊಲ ಕಲ್ಲು ಮುಳ್ಳಿನಿಂದ ಕೂಡಿದೆ. ನಾಲ್ಕು ಕೊಳವೆಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ ಎಂದು ತಾಲೂಕು ಕೃಷಿ ಇಲಾಖೆ ಅಧಿಕಾರಿಗಳಿಗೆ ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ತಿಳಿಸಿದೆವು. ಆಗ, ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಸಲ್ಲಿಸಿ ಎಂದು ಮಾರ್ಗದರ್ಶನ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರಿಂದ ಇಂದು ನಮಗೆ ನೀರು ಸಿಕ್ಕಿದೆ. ಇದರಿಂದ ನಾವು ಮತ್ತು ನಮ್ಮ ಹೊಲದ ಸುತ್ತಮುತ್ತಲಿನ ರೈತರೂ
ಸಂತೋಷವಾಗಿದ್ದೇವೆ ಎಂದು ರೈತ ಹರ್ಷ ವ್ಯಕ್ತ ಪಡಿಸಿದ್ದಾರೆ.

ಮುಂಗಾರು ಮಳೆ ಈಚೆಗೆ ಕೈ ಕೊಟ್ಟಿದ್ದರೂ ಕೃಷಿ ಹೊಂಡ ರೈತರ ಕೈ ಹಿಡಿದು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಸರ್ಕಾರ ಪ್ರತಿವರ್ಷ ರೈತರ ಕಲ್ಯಾಣಕ್ಕಾಗಿ ನೂರಾರು ಯೋಜನೆಗಳನ್ನು ರೂಪಿಸುತ್ತಿದೆ. ರೈತರಿಗೆ ಯೋಜನೆಯ ಬಗ್ಗೆ ಅಪೂರ್ಣ ಮಾಹಿತಿ ಹಾಗೂ ಅನಕ್ಷರತೆ ಇರುವ ಹಿನ್ನೆಲೆಯಲ್ಲಿ ಹಲವು ಯೊಜನೆಗಳು ಕೃಷಿ ಇಲಾಖೆ ಕಚೇರಿಯ ಗೋಡೆಗಳಿಗೆ ಸೀಮಿತವಾಗಿ ಉಳಿಯುತ್ತಿವೆ. ಕೃಷಿ ಹೊಂಡದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಇಲಾಖೆಯ ಇನ್ನುಳಿದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರೆ ರೈತರು ಅತಿವೃಷ್ಟಿಯಂತಹ ಸಮಸ್ಯೆಗಳಿಂದ ಶಾಶ್ವತವಾಗಿ ದೂರ ಉಳಿಯುತ್ತಾರೆ ಎನ್ನುವುದು ಇಲ್ಲಿನ ಪ್ರಗತಿಪರ ರೈತರ ಮಾತಾಗಿದೆ.

ಕೃಷಿ ಇಲಾಖೆಯಿಂದ ನಿರ್ಮಿಸಿದ ಕೃಷಿ ಹೊಂಡದಲ್ಲಿ ಉತ್ತಮ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ನಮ್ಮ ಹೊಲದಲ್ಲಿನ ಬೆಳೆಗೆ ನೀರು ಉಣಿಸುವುದರ ಜೊತೆಗೆ ಕೃಷಿ ಹೊಂದದಲ್ಲಿ ಮೀನು ಸಾಕಾಣಿಕೆಯನ್ನೂ ಕೂಡ ಮಾಡುತ್ತಿದೇನೆ. ಮಹಾರಾಷ್ಟ್ರದಿಂದ ಮರಿ ಮೀನುಗಳು ತಂದು ಬಿಡುತ್ತೇನೆ. ಕೃಷಿ ಇಲಾಖೆ ಅಧಿಕಾರಿಗಳ ಸೂಕ್ತ ಮಾರ್ಗದರ್ಶನದಿಂದ ನಮಗೆ ನೀರು ಸಿಕ್ಕಿದೆ.
 ಲಕ್ಷ್ಮಣ ತೆಲಂಗ, ರೈತ

ಸರ್ಕಾದ ಪ್ರತಿಯೊಂದು ಯೋಜನೆಗಳ ಬಗ್ಗೆ ಕಳೆದ ವರ್ಷದಿಂದ ಜನರಲ್ಲಿ ಅರಿವು ಮೂಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಅದರಂತೆ ನಮ್ಮ ಇಲಾಖೆಯ ಅಧಿಕಾರಿಗಳಿಗೂ ರೈತ ಅನುವುಗಾರರಿಗೂ ರೈತರಿಗೆ ಮಾಹಿತಿ ನೀಡುವಂತೆ ಸಭೆ ನಡೆಸಿ ಮಾರ್ಗದರ್ಶನ ನೀಡಿದ್ದೇನೆ. ಇದರಿಂದ ನಮ್ಮ ತಾಲೂಕಿನಲ್ಲಿ ಉತ್ತಮ ಕೆಲಸಗಳು ನಡೆದಿವೆ. ನಿರಂತರವಾಗಿ ನಡೆಯುತ್ತವೆ.
 ಸಂಜೀವಕುಮಾರ ಮಾನಕರೆ, ತಾಲೂಕು ಕೃಷಿ ಅಧಿಕಾರಿ

ಗಡಿ ತಾಲೂಕಿನಲ್ಲಿ ನಮ್ಮ ರೈತರು ಮಳೆ ಮೇಲೆ ಅವಲಂಬಿತರಾದ್ದಾರೆ ಎಂದು ತಿಳಿದು ಗ್ರಾಮದಲ್ಲಿ ಡಂಗುರ ಸಾರುವ ಮೂಲಕ ಕೃಷಿ ಹೊಂಡದ ಬಗ್ಗೆ ಅರಿವು ಮೂಡಿಸಿದ್ದೇನೆ. ಕೆಲವು ರೈತರು ತಾವೇ ಮುಂದೆ ಬಂದು ಕೃಷಿ ಹೊಂಡ ನಿರ್ಮಾಣ ಮಾಡಿಕೊಂಡಿದ್ದಾರೆ. ಇನ್ನೂ ಕೆಲವು ರೈತರ ಬಳಿ ಹಣ ಇಲ್ಲವೆಂದು ತಿಳಿಸಿದ್ದರಿಂದ ಖಾಸಗಿ ಏಜೆನ್ಸಿಗಳಿಂದ ಕೃಷಿ ಹೊಂಡ ನಿರ್ಮಿಸುವ ವ್ಯವಸ್ಥೆ ಮಾಡಲಾಗಿದೆ.
 ಚಂದ್ರಕಾಂತ ಉದ್ದಬ್ಯಾಳೆ, ಔರಾದ ರೈತ ಸಂಪರ್ಕ ಕೆಂದ್ರದ ಅಧಿಕಾರಿ

„ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.