ಕಾರಂಜಾ ಸಂತ್ರಸ್ತರಿಂದ ಉಗ್ರ ಹೋರಾಟಕ್ಕೆ ನಿರ್ಧಾರ


Team Udayavani, Sep 21, 2018, 11:54 AM IST

bid-2.jpg

ಬೀದರ: ಜಿಲ್ಲಾಧಿಕಾರಿಗಳ ಕಚೇರಿ ಎದುರು 43 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸದಿರುವುದರಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಯಲಿದೆ.

ಇದರಿಂದ ಮುಂದಾಗುವ ಅನಾಹುತಗಳಿಗೆ ರಾಜ್ಯ ಮತ್ತು ಕೇಂದ್ರ ಸರಕಾರವೇ ಹೊಣೆಯಾಗಿತ್ತದೆ ಎಂದು ಕಾರಂಜಾ
ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೊಚ್ಚಕನಳ್ಳಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತ್ರಸ್ತರು ಕಪ್ಪು ಬಟ್ಟೆ ಧರಿಸಿ ಧರಣಿಯಲ್ಲಿ ಭಾಗವಹಿಸುವರು. ಪಂಜಿನ ಮೇರವಣಿಗೆ ನಡೆಸುವರು. ಜನ ಪ್ರತಿನಿಧಿಗಳ ಮನೆ ಎದುರು ಅರೆಬೆತ್ತಲೆ ಮೆರವಣಿಗೆ, ಧರಣಿ ಸ್ಥಳದಲ್ಲಿ ಕೇಶ ಮುಂಡನ ಮಾಡಿಕೊಳ್ಳವುದು ಸೇರಿದಂತೆ ವಿವಿಧ ಮಾದರಿಯಲ್ಲಿ ಹೊರಾಟ ಮಾಡಲಾಗುವುದು. ಬೀದರ ನಗರದಲ್ಲಿ ರಸ್ತೆ ತಡೆ ಚಳವಳಿ, ರೈಲ್ವೆ ನಿಲ್ದಾಣದಲ್ಲಿ ರೈಲು ರೋಖೋ ಆಂದೋಲನ, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-65 ರಸ್ತೆ ತಡೆ ಚಳವಳಿ, ಜೈಲ್‌ ಭರೋ ಆಂದೋಲನ ಹಂತಹಂತವಾಗಿ ನಡೆಸಲಾಗುವುದು. ಹೋರಾಟದ
ಸಂದರ್ಭದಲ್ಲಿ ಯಾವುದೇ ಅಹಿತರಕ ಘಟನೆಗಳು ನಡೆದರೆ ಅದಕ್ಕೆ ನೇರವಾಗಿ ಸರ್ಕಾರವೆ ಹೊಣೆಯಾಗುತ್ತದೆ ಎಂದರು.

1972ರಲ್ಲಿ ಕೇವಲ 9 ಕೋಟಿ ವೆಚ್ಚದ ಕಾರಂಜಾ ಜಲಾಶಯ ಯೋಜನೆ ಇತ್ತು. ಆದರೆ, ಈ ವರೆಗೆ ಕೋಟ್ಯಂತರ ರೂಪಾಯಿ ಖರ್ಚಾಗಿದೆ. ಮುಳುಗಡೆಯಾದ ಬೀದರ ದಕ್ಷಿಣ ಭಾಗದ 14 ಹಳ್ಳಿಗಳು, ಹುಮನಾಬಾದ ತಾಲೂಕಿನ 8 ಹಳ್ಳಿಗಳು, ಭಾಲ್ಕಿ ತಾಲೂಕಿನ 6 ಹಳ್ಳಿಗಳ ಭೂಮಿ ಭಾಗಶಃ ಜಲಾವೃತವಾಗಿದ್ದು, ಈ ಜಲಾಶಯದಲ್ಲಿ 14,550 ಎಕರೆ ಭೂಮಿ ಅಲ್ಲದೆ ಹೆಚ್ಚುವರಿಯಾಗಿ 1200 ಎಕರೆ ಭೂಮಿ ಮುಳುಗಡೆ ಪ್ರದೇಶದಲ್ಲಿ ಸೇರಿರುತ್ತದೆ. ಭೂ ಸ್ವಾ ಧೀನ ಮಾಡಿಕೊಂಡ ಸರಕಾರ ಎಲ್ಲ ಸಂತ್ರಸ್ತ ರೈತರಿಗೆ ಸಮಾನವಾಗಿ ಪರಿಹಾರ ಧನ ನೀಡದೆ ತಾರತಮ್ಯ ಮಾಡಿ ಅನ್ಯಾಯ ಮಾಡಿದೆ. 28 ಹಳ್ಳಿಗಳ 14,550 ಎಕರೆ ಕೃಷಿ ಯೋಗ್ಯಭೂಮಿ ಮತ್ತು 8ರಿಂದ 9 ಹಳ್ಳಿಗಳು ಸಂಪೂರ್ಣ ಮುಳುಗಡೆಯಾಗಿವೆ ಎಂದರು.

5000 ಕುಟುಂಬಗಳು 18,500ಎಕರೆ ಭೂಮಿ ಸಂತ್ರಸ್ತರಿಗೆ ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಿ ಪರಿಹಾರ
ನೀಡಬೇಕಾಗಿತ್ತು. ಬೆರಳೆಣಿಕೆಯಷ್ಟು ಜನ ನ್ಯಾಯಾಲಯದ ಮೊರೆ ಹೋದಾಗ ಬಡ್ಡಿ ಸೇರಿಸಿ 12 ಲಕ್ಷ ರೂ. ಪಾವತಿಸುವಂತೆ ಸೂಚಿಸಿದೆ. ಅದೇ ಮಾದರಿಯಲ್ಲಿ ಇನ್ನುಳಿ ಬಡ ರೈತರಿಗೂ ನ್ಯಾಯ ಸಿಗಬೇಕಾಗಿದೆ. ಕಾರಂಜಾ ಸಂತ್ರಸ್ತರ ಮಾದರಿಯಲ್ಲಿಯೇ ಪರಿಹಾರ ಧನ ವಿತರಣೆ ಆಗಬೇಕು ಎಂದು ಆಗ್ರಹಿಸಿದರು.

ಸಮಿತಿ ಕಾರ್ಯಾಧ್ಯಕ್ಷ ಜಿಲಾನಿ ಪಟೇಲ, ಪ್ರಧಾನ ಕಾರ್ಯದರ್ಶಿ ನಾಗಶೆಟ್ಟೆಪ್ಪಾ ಹಚ್ಚಿ, ಜಂಟಿ ಕಾರ್ಯದರ್ಶಿ ದತ್ತಾತ್ರೆಯರಾವ್‌ ಕುಲಕರ್ಣಿ, ಸಲಹೆಗಾರ ವೀರಭದ್ರಪ್ಪ ಉಪ್ಪಿನ, ಜಾಕೀರ ಪಟೇಲ, ಬಸವರಾಜ ಮೂಲಗೆ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.