ಕಾನೂನು ಗೌರವಿಸುವುದು ಕರ್ತವ್ಯ: ನ್ಯಾ| ಕನುಮಯ್ಯ
Team Udayavani, Nov 11, 2018, 12:25 PM IST
ಹುಮನಾಬಾದ: ನಾವು ಕಾನೂನನ್ನು ಗೌರವಿಸಿದರೆ ಅದು ನಮ್ಮನ್ನು ಗೌರವಿಸುತ್ತದೆ. ಈ ನಿಟ್ಟಿನಲ್ಲಿ ಈ ದೇಶದ ಪ್ರತಿಯೊಬ್ಬ ಪ್ರಜೆ ಹಕ್ಕುಗಳ ಕುರಿತು ಮಾತನಾಡುವುದರ ಜೊತೆಗೆ ಕರ್ತವ್ಯವನ್ನು ಮರೆಯಬಾರದು ಎಂದು ಬಸವಕಲ್ಯಾಣ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ನ್ಯಾಯಾಧೀಶ ಎಂ.ಕನುಮಯ್ಯ ಹೇಳಿದರು.
ಪಟ್ಟಣದ ವಕೀಲರ ಸಂಘದ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಕಾನೂನು ಸೇವಾ ಪ್ರಾಧಿಕಾರ ಹಮ್ಮಿಕೊಂಡಿದ್ದ
ಕಾನೂನು ಸೇವಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ವರಿಗೂ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ನ್ಯಾಯಾಲಯ, ಅನ್ಯಾಯಕ್ಕೊಳಗಾದ ಆರ್ಥಿಕವಾಗಿ ದುರ್ಬಲರಾದವರಿಗೂ ನ್ಯಾಯ ನೀಡುವುದಕ್ಕಾಗಿ ಉಚಿತ ಕಾನೂನು ನೆರವಿನ ವ್ಯವಸ್ಥೆ ಕಲ್ಪಿಸಿದೆ. ಅರ್ಹರು ಇದರ
ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಪ್ರಧಾನ ಸಿವಿಲ್ ನ್ಯಾಯಾಧಿಧೀಶ ಆಶೆಪ್ಪ ಬಿ.ಸಣ್ಮನಿ ಅವರು, ಕಾನೂನು ದಿನಾಚರಣೆ ಮಹತ್ವ ಕುರಿತು ಆ ವ್ಯವಸ್ಥೆಯಿಂದ ಜನಸಾಮಾನ್ಯರು, ಆರ್ಥಿಕ ದುರ್ಬಲರಿಗೆ ಆಗುವ ಲಾಭಗಳ ಕುರಿತು ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ವಕೀಲರ ಸಂಘದ ತಾಲೂಕು ಘಟಕ ಅಧ್ಯಕ್ಷ ಶಂಭುಲಿಂಗ ಧುಮ್ಮನಸೂರೆ ಮಾತನಾಡಿ,
ಪ್ರತಿಯೊಬ್ಬರೂ ಕಾನೂನು ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಂಘದ ಉಪಾಧ್ಯಕ್ಷ ಈಶ್ವರ ಸೋನಕೇರಾ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಜೋತಗೊಂಡ, ಕಲ್ಯಾಣರಾವ್ ಪರಶಟ್ಟಿ, ದತ್ತಾರೆಡ್ಡಿ, ಮನೋಜಕುಮಾರ ಹಾಗೂ ನೂರಕ್ಕೂ ಅಧಿಕ ಜನ ಹಿರಿಯ ಮತ್ತು ಕಿರಿಯ ವಕೀಲರು ಇದ್ದರು. ಭೀಮರಾವ್ ಓತಗಿ
ನಿರೂಪಿಸಿದರು. ಕೆ.ಶ್ರೀಮಂತ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ