ಅಡಕತ್ತರಿಯಲ್ಲಿ ಕೇಂದ್ರೀಯ ವಿದ್ಯಾಲಯ ಮಕ್ಕಳ ಭವಿಷ್ಯ!


Team Udayavani, Oct 27, 2021, 11:30 AM IST

7school

ರಾಯಚೂರು: ಕೇಂದ್ರ ಸರ್ಕಾರ ನಡೆಸಿದ ವರ್ಗಾವಣೆ ಪ್ರಕ್ರಿಯೆಯಿಂದ ಕೇಂದ್ರೀಯ ವಿದ್ಯಾಲಯಗಳು ಶಿಕ್ಷಕರ ಕೊರತೆ ಎದುರಿಸುವಂತಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಅಡಕತ್ತರಿಗೆ ಸಿಲುಕಿದಂತಾಗಿದೆ.

ಈಚೆಗೆ ದೇಶಾದ್ಯಂತ ಸಾವಿರಾರು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆದಿದ್ದು, ಅದರಲ್ಲಿ ರಾಯಚೂರು ಕೇಂದ್ರೀಯ ವಿದ್ಯಾಲಯದ 15ರಲ್ಲಿ 13 ಶಿಕ್ಷಕರು, ಹಟ್ಟಿ ಚಿನ್ನದ ಗಣಿ ಶಾಲೆಯಲ್ಲಿ 11ರಲ್ಲಿ ಆರು ಶಿಕ್ಷಕರು ವರ್ಗಾವಣೆಗೊಂಡಿದ್ದಾರೆ.

ಇಲ್ಲಿ ಮಾತ್ರವಲ್ಲದೇ ರಾಜ್ಯದ ಬಹುತೇಕ ಕೇಂದ್ರೀಯ ವಿದ್ಯಾಲಯಗಳಲ್ಲೂ ಇದೇ ರೀತಿಯಾಗಿದ್ದು, ಶಿಕ್ಷಕರಿಲ್ಲದೇ ಶಾಲೆಗಳು ಖಾಲಿಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿಬಿಎಸ್‌ಸಿ ಪಠ್ಯಾಧಾರಿತ ಈ ಶಾಲೆಗಳಲ್ಲಿ ದೇಶಾದ್ಯಂತ ಏಕರೂಪದ ಶಿಕ್ಷಣವಿರುತ್ತದೆ. ಅಲ್ಲದೇ, ಮಕ್ಕಳಿಗೆ ಪಠ್ಯೇತರ ಚಟುವಟಿಕೆ, ಸ್ಮಾರ್ಟ್‌ ಕ್ಲಾಸ್‌ಗಳು, ಕ್ರೀಡೆ, ಸಂಗೀತ, ಚಿತ್ರಕಲೆ ಹೀಗೆ ಪ್ರತಿಯೊಂದನ್ನೂ ಕಲಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸೌಲಭ್ಯ ನೀಡಲಾಗಿರುತ್ತದೆ. ಆದರೆ, ಮುಖ್ಯವಾಗಿ ಇದನ್ನೆಲ್ಲ ಕಲಿಸಲು ಬೇಕಾದ ಶಿಕ್ಷಕರೇ ಶಾಲೆಗಳಲಿಲ್ಲ ಎನ್ನುವುದು ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದೆ.

ಜಿಲ್ಲೆಗೊಂದರಂತೆ ರಾಜ್ಯದ ಬಹುತೇಕ ಕಡೆ ಕೇಂದ್ರೀಯ ವಿದ್ಯಾಲಯ ತೆರೆಯಲಾಗಿದೆ. ಕೆಲವೆಡೆ ಹೆಚ್ಚುವರಿ ಶಾಲೆಗಳನ್ನು ತೆರೆದಿದ್ದರೆ ಇನ್ನೂ ಅನೇಕ ಕಡೆ ಪ್ರಸ್ತಾವನೆಗಳಿವೆ. ಆದರೆ, ಇಲ್ಲಿಗೆ ಕೇಂದ್ರ ಸರ್ಕಾರವೇ ಕಾಯಂ ಶಿಕ್ಷಕರನ್ನು ನೇಮಕ ಮಾಡುತ್ತಿದ್ದು, ಬಹುತೇಕ ಉತ್ತರ ಭಾರತ ಭಾಗದವರನ್ನೇ ನಿಯೋಜಿಸಲಾಗಿದೆ. ಆ ಭಾಗದವರು ಹೆಚ್ಚು ದಿನ ಇರಲಾರದೇ ವರ್ಗಾವಣೆಗಾಗಿ ಕಾದು ಕೂಡುತ್ತಿದ್ದಾರೆ. ಈ ಪೈಕಿ ಬಹುತೇಕರು ವರ್ಗಾವಣೆ ಪಡೆದು ಹೋಗಿದ್ದಾರೆ. ಮಾಹಿತಿ ಪ್ರಕಾರ ರಾಜ್ಯದ ವಿಜಯಪುರ, ಬಳ್ಳಾರಿ, ಹುಬ್ಬಳ್ಳಿ, ತುಮಕೂರು ಹೀಗೆ ನಾನಾ ಜಿಲ್ಲೆಗಳಲ್ಲೂ ಸಮಸ್ಯೆಯಾಗಿದೆ.

ಜ್ಯೇಷ್ಠತಾ ಆಧಾರದಡಿ ವರ್ಗ

ಕೇಂದ್ರ ಸರ್ಕಾರ ವರ್ಗಾವಣೆ ಪ್ರಕ್ರಿಯೆ ಸಂಪೂರ್ಣ ಆನ್‌ ಲೈನ್‌ ಮೂಲಕವೇ ನಡೆಸುತ್ತದೆ. ವರ್ಗಾವಣೆ ಬೇಕಾದವರು ತಮಗೆ ಬೇಕಾದ ರಾಜ್ಯ-ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಅರ್ಜಿ ಹಾಕಿದರೆ ಜ್ಯೇಷ್ಠತಾ ಆಧಾರದಡಿ ಅರ್ಹತೆ ಇದ್ದರೆ ನೇರವಾಗಿ ವರ್ಗಾವಣೆ ಆದೇಶ ಸಿಕ್ಕು ಬಿಡುತ್ತದೆ. ಇದಾದ ಕೂಡಲೇ ತಮ್ಮ ಊರುಗಳತ್ತ ಮುಖ ಮಾಡುವ ಶಿಕ್ಷಕರು, ತಾವಿದ್ದ ಶಾಲೆ ಪರಿಸ್ಥಿತಿ ಏನು ಎತ್ತ ಎಂಬ ಬಗ್ಗೆ ಹೇಳುವವರು ಕೇಳುವವರೇ ಇಲ್ಲದಾಗಿದೆ.

ಇದನ್ನೂ ಓದಿ: ವ್ಯಕ್ತಿಗೆ ಪೊಲೀಸರಿಂದ ಥಳಿತ-ಆರೋಪ

ಮಕ್ಕಳ ಕಲಿಕೆಗೆ ಕಂಟಕ

ರಾಯಚೂರಿನ ಕೇಂದ್ರೀಯ ವಿದ್ಯಾಲಯದಲ್ಲಿ 435 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಪ್ರಧಾನ ವಿಷಯಗಳಾಗಿ ಹಿಂದಿ, ಇಂಗ್ಲಿಷ್‌, ಸಂಸ್ಕೃತ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಕಲಿಯಬೇಕಿದೆ. ಅದರ ಜತೆಗೆ ಕಂಪ್ಯೂಟರ್‌, ಸಂಗೀತ, ಚಿತ್ರಕಲೆ ಸೇರಿದಂತೆ ಕೆಲವೊಂದು ಪಠ್ಯೇತರ ಚಟುವಟಿಕೆಗಳ ಕಲಿಕೆ ಕೂಡ ಕಡ್ಡಾಯ. ಈಗ ಕೇವಲ ಮೂವರು ಅತಿಥಿ ಶಿಕ್ಷಕ ಮೇಲೆ ಬೋಧನೆ ನಡೆಯುತ್ತಿದೆ. ಚಿತ್ರಕಲೆ ಶಿಕ್ಷಕರಿಗೆ ಅರ್ಹತೆ ಆಧಾರದ ಮೇಲೆ ಪ್ರಾಚಾರ್ಯ ಹುದ್ದೆ ನೀಡಲಾಗಿದೆ. ವಿಪರ್ಯಾಸವೆಂದರೆ ಕಳೆದ ಮೂರ್‍ನಾಲ್ಕು ವರ್ಷಗಳಿಂದ ಈ ಶಾಲೆಗೆ ಕಾಯಂ ಪ್ರಾಚಾರ್ಯರು ಕೂಡ ಇಲ್ಲ.

ಮೇಲಿಂದಲೇ ನಿಯಂತ್ರಣ

ಶಂಖದಿಂದ ಬಂದರೆ ತೀರ್ಥ ಎನ್ನುವಂತೆ ಸಣ್ಣ ವಿಚಾರ ನಿರ್ಧರಿಸಬೇಕಾದರೂ ಈ ಶಾಲೆಗಳು ಕೇಂದ್ರ ಕಚೇರಿಯನ್ನೇ ಸಂಪರ್ಕಿಸಬೇಕು. ಈಗ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಕೂಡ ಸಂಸ್ಥೆ ಮುಖ್ಯಸ್ಥರಾದ ಡಿಸಿಯವರು ಅನುಮತಿ ಪಡೆಯಲೇಬೇಕು. ಆದರೆ, ಅವರು ಕೇಂದ್ರೀಯ ವಿದ್ಯಾಲಯಗಳ ನಿಯಮಾನುಸಾರ ಅತಿಥಿ ಶಿಕ್ಷಕರನ್ನು ಪರೀಕ್ಷೆಗೆ ಒಳಪಡಿಸಿಯೇ ಆಯ್ಕೆ ಮಾಡುವಂತೆ ಸೂಚಿಸುತ್ತಾರೆ. ಇದರಿಂದ ಸಾಕಷ್ಟು ಶಿಕ್ಷಕರು ಅರ್ಹತೆ ಪಡೆಯುವಲ್ಲಿ ವಿಫಲ ಹೊಂದುತ್ತಾರೆ. ಒಟ್ಟಾರೆ ಮಕ್ಕಳ ಭವಿಷ್ಯ ರೂಪಿಸಲು ಮಹತ್ವ ಪಾತ್ರ ವಹಿಸಬೇಕಾದ ಕೇಂದ್ರೀಯ ವಿದ್ಯಾಲಯಗಳು ಮಕ್ಕಳಿಗೆ ಭವಿಷ್ಯಕ್ಕೆ ಮಾರಕವಾಗಿರುವುದು ವಿಪರ್ಯಾಸ.

ಕೇಂದ್ರ ಸರ್ಕಾರ ನಡೆಸಿದ ವರ್ಗಾವಣೆ ಪ್ರಕ್ರಿಯೆಯಿಂದ ರಾಯಚೂರು ಹಾಗೂ ಹಟ್ಟಿ ಕೇಂದ್ರೀಯ ವಿದ್ಯಾಲಯಗಳು ಖಾಲಿಯಾಗಿವೆ. ಈ ಸಮಸ್ಯೆ ಕೂಡಲೇ ಗಮನಕ್ಕೆ ತರುವಂತೆ ಸಂಸದರಿಗೂ ಮನವಿ ಮಾಡಿದ್ದು, ಸಂಬಂಧಿಸಿದ ಇಲಾಖೆಗೂ ಪತ್ರ ಬರೆಯಲಾಗುವುದು. ಒಂದು ವಾರದೊಳಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅನುಮತಿ ನೀಡಲಾಗಿದೆ. ಈಗಿರುವ ಪ್ರಾಚಾರ್ಯರ ವರ್ಗಾವಣೆಯಾಗಿದ್ದು, ಅವರನ್ನು ಬಿಡುಗಡೆ ಮಾಡದೆ ತಡೆ ಹಿಡಿಯಲಾಗಿದೆ. -ಸಂತೋಷ್‌ ಕಾಮಗೌಡ, ಶಾಲೆ ಪ್ರಭಾರ ಮುಖ್ಯಸ್ಥ

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.