ನೊಂದ ಕುಟುಂಬಗಳಿಗೆ ನೆರವು
Team Udayavani, Jan 3, 2022, 12:44 PM IST
ಕಮಲನಗರ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಶನಿವಾರ ಕಮಲನಗರ ತಾಲೂಕಿನ ಎಂ.ಪಿ. ಡೋಣಗಾಂವ ಗ್ರಾಮಕ್ಕೆ ಭೇಟಿ ನೀಡಿ ಸಂಕಷ್ಟದಲ್ಲಿರುವ ಜನರಿಗೆ ಧನಸಹಾಯ ಮಾಡಿದರು.
ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಶಿವರಾಜ ಸಂಗನಾಳ ಹಾಗೂ ವಿದ್ಯುತ್ ಅವಘಡದಿಂದ ಮೃತಪಟ್ಟ ಸೂರ್ಯಕಾಂತ ಲಕ್ಷ್ಮಣ ಡೋಂಗ್ರೆ ಅವರ ಮನೆಗೆ ತೆರಳಿದ ಸಚಿವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಅವರ ಸಮಸ್ಯೆಗಳನ್ನು ಆಲಿಸಿ, ವೈಯಕ್ತಿಕವಾಗಿ ಸಹಾಯ ಮಾಡಿದರು. ನೊಂದ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ ಸಚಿವರು, ಸಾರ್ವಜನಿಕರ ಸೇವೆಗೆ ನಾನು ಸದಾ ಸಿದ್ಧನಿದ್ದೇನೆ. ಯಾವುದೇ ರೀತಿಯ ಸಮಸ್ಯೆಗಳು ಎದುರಾದಲ್ಲಿ ತಮ್ಮನ್ನು ನೇರವಾಗಿ ಭೇಟಿ ಮಾಡಿ ಪರಿಹಾರ ಕಂಡುಕೊಳ್ಳಬಹುದೆಂದು ಧೈರ್ಯ ನೀಡಿದರು.
ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಎಪಿಎಂಸಿ ಅಧ್ಯಕ್ಷ ರಂಗರಾವ್ ಜಾಧವ, ಗ್ರಾಪಂ ಅಧ್ಯಕ್ಷ ಶಿವಕುಮಾರ ಜುಲೆ, ಮುಖಂಡರಾದ ಶಿವಾನಂದ ವಡ್ಡೆ, ಮಾಧವರಾವ್ ಚಾನಗುಣಿ, ಬಸವರಾಜ ಪಾಟೀಲ, ಗಿರೀಶ ಒಡೆಯರ್, ನಾಗೇಶ ಪತ್ರೆ, ಬಾಲಾಜಿ ತೇಲಂಗ ಇತರರಿದ್ದರು.
ಸಚಿವ ಪ್ರಭು ಚವ್ಹಾಣ್ ಅವರು ಜ. 1ರಂದು ಕಮಲನಗರದಲ್ಲಿ ಏರ್ಪಡಿಸಲಾದ ಅಖಂಡ ಹರಿನಾಮ ಸಪ್ತಾಹದಲ್ಲಿ ಭಾಗವಹಿಸಿದರು. ವ್ಯವಸ್ಥಿತವಾಗಿ ನಡೆಯುತ್ತಿರುವ ಹರಿನಾಮ ಸಪ್ತಾಹ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್