Bidar; ಸರ್ಕಾರದಿಂದ ಕನ್ನಡ ಸಂಘಟನೆಗಳ ಹೋರಾಟ ಹತ್ತಿಕ್ಕುವ ಯತ್ನ: ಹೊರಟ್ಟಿ
Team Udayavani, Dec 30, 2023, 2:05 PM IST
ಬೀದರ್: ಕನ್ನಡ ನಾಮಫಲಕ ವಿಷಯದಲ್ಲಿ ಸರ್ಕಾರ ಕನ್ನಡ ಪರ ಸಂಘಟನೆಗಳ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಮಾತೃ ಭಾಷೆ ಕಡ್ಡಾಯ ಮಾಡಿದ್ದರೆ ಹೋರಾಟ ಯಾಕೆ ಮಾಡುತ್ತಿದ್ದರು ಎಂದು ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ.
ನಗರದಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡವೇ ಅಂದರೆ ಹೇಗೆ. ಬೆಂಗಳೂರಿನಲ್ಲಿ ಬೇರೆ ರಾಜ್ಯದವರು ಬಂದು ಕನ್ನಡ ನಾಮಫಲಕ ಹಾಕದೆ ಇಂಗ್ಲಿಷ್ ನಲ್ಲಿ ಹಾಕುತ್ತಾರೆ. ಅವರ ರಾಜ್ಯದಲ್ಲಿ ಅವರು ಅನ್ಯ ಭಾಷೆಯ ಫಲಕಗಳನ್ನು ಹಾಕುತ್ತಾರಾ? ಹೂಡಿಕೆದಾರರು ಆಂಗ್ಲ ಭಾಷೆ ಬೋರ್ಡ್ ನೋಡಿ ರಾಜ್ಯಕ್ಕೆ ಬರುತ್ತಾರಾ ಎಂದು ಕಿಡಿಕಾರಿದರು.
ನಾಮ ಫಲಕದಲ್ಲಿ 60:40 ಅನುಪಾತ ಯಾಕೆ ಬೇಕು. ನೂರಕ್ಕೆ ನೂರು ರಾಜ್ಯದಲ್ಲಿ ಕನ್ನಡ ಫಲಕ ಇರಬೇಕು. ಕರ್ನಾಟಕದಲ್ಲಿ ಕನ್ನಡ ಕಾವಲು ಸಮಿತಿ ಇಟ್ಟಿದ್ದು ವಿಚಿತ್ರ ಎಂದು ಬೇಸರ ವ್ಯಕ್ತಪಡಿಸಿದರು.
ದೇವಸ್ಥಾನದಲ್ಲಿ ರಾಜಕೀಯ ಬರಬಾರದು. ರಾಮ ಮಂದಿರ ಉದ್ಘಾಟನೆಗಾಗಿ ಅಯೋಧ್ಯೆಗೆ ಹೋಗುವುದು ಬಿಡುವುದು ಅವರವರ ಇಷ್ಟ. ದೇವರಿಗೆ ಜಾತಿ, ಧರ್ಮವೆಂದು ಬರಬಾರದು. ದೇವರು ಎಲ್ಲರಿಗೂ ಅಷ್ಟೇ, ಅವರವರ ನಂಬಿಕೆ ಮೇಲೆ ಇರುತ್ತಾನೆ ಎಂದು ಹೇಳುವ ಮೂಲಕ ವಿಪಕ್ಷಗಳ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಇಂದು ಸದನದ ಮಹತ್ವ ಕಳೆದುಕೊಂಡಿದೆ. ರಾಜಕೀಯ ಪಕ್ಷಗಳು ಒಬ್ಬರಿಗೊಬ್ಬರು ಬೈಯುವುದೇ ಆಗಿದ್ದು, ಇಂದಿನ ರಾಜಕೀಯ ನಡೆ ಸಮಧಾನಕರವಾಗಿಲ್ಲ ಎಂದು ಹೊರಟ್ಟಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ