ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ ನೆಲ ಕಲ್ಯಾಣ
Team Udayavani, Oct 16, 2021, 11:04 AM IST
ಬಸವಕಲ್ಯಾಣ: ಜಗತ್ತಿನಲ್ಲೆ ಪ್ರಥಮ ಬಾರಿಗೆ ಪ್ರಜಾಪ್ರಭುತ್ವ ಕಲ್ಪನೆಗೆ ಅಡಿಪಾಯ ಹಾಕಿದ ನೆಲ ಬಸವಕಲ್ಯಾಣ ನಾಡು ಎಂದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಪ್ರೊ| ಸತ್ಯ ನಾರಾಯಣ ಬಟ್ಟು ಹೇಳಿದರು.
ನಗರದ ಹರಳಯನ್ನವರ ಗವಿಯಲ್ಲಿ ಹಮ್ಮಿಕೊಂಡ ಶರಣ ವಿಜಯೋತ್ಸವ ನಾಡಹಬ್ಬ ಹಾಗೂ 42ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲ ಸಂಸತ್ತು ಎಂದು ಕರೆಯುವ ಅನುಭವ ಮಂಟಪ ಇಲ್ಲಿತ್ತು. ಈ ಪುಣ್ಯ ಭೂಮಿಯಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಚಾಲನೆ ಸಿಕ್ಕಿದ್ದು, 12ನೇ ಶತಮಾನದ ಗತವೈಭವ ಮರುಕಳಿಸಲಿದೆ ಎಂದರು.
ಸಾನ್ನಿಧ್ಯ ವಹಿಸಿದ್ದ ಹುಲಸೂರು ಗುರುಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ, ನೇತೃತ್ವ ವಹಿಸಿದ್ದ ಹರಳಯ್ಯ ಗವಿಯ ಡಾ| ಗಂಗಾಂಬಿಕೆ ಅಕ್ಕ ಆಶೀರ್ವಚನ ನೀಡಿದರು. ನಂತರ ಅಂತಾರಾಷ್ಟ್ರೀಯ ವಚನ ಸಾಹಿತ್ಯ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ| ಮೀನಾಕ್ಷಿ ಬಾಳಿ ಮಾತನಾಡಿದರು. ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಅನುಭಾವ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಕುಲಸಚಿವ ಪ್ರೊ| ಬಸವರಾಜ ಡೊಣೂರ, ಬಸವರಾಜ ಸ್ವಾಮಿ, ಸೂರ್ಯಕಾಂತ ಕಾಂಬ್ಳೆ, ಸೇರಿ ದಂತೆ ಮತ್ತಿತರರು ಇದ್ದರು. ಹರಳಯ್ಯ ಸಮಾಜದ ಕಲಬುರಗಿ ಅಧ್ಯಕ್ಷ ಕಾಶಿರಾಮ ನಂದೂರಕರ್ ಷಟಸ್ಥಲ ಧ್ವಜಾರೋಹಣ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ