ಸಮ್ಮೇಳನದಿಂದ ಭಾಷೆ ಬೆಳವಣಿಗೆ ; ಜನಪರ ಸಾಹಿತ್ಯ ರಚನೆ ಅವಶ್ಯ; ಸಾಹಿತಿ ಕಾವ್ಯಶ್ರೀ


Team Udayavani, Jan 22, 2021, 4:08 PM IST

ಸಮ್ಮೇಳನದಿಂದ ಭಾಷೆ ಬೆಳವಣಿಗೆ ; ಜನಪರ ಸಾಹಿತ್ಯ ರಚನೆ ಅವಶ್ಯ; ಸಾಹಿತಿ ಕಾವ್ಯಶ್ರೀ

ಬೀದರ: ಸಾಹಿತಿ ಮತ್ತು ಬರಹಾರರಿಂದ ಜೀವಪರ ಹಾಗೂ ಜನಪರ ಸಾಹಿತ್ಯ ರಚನೆಯ ಅಗತ್ಯವಿದೆ ಎಂದು ಕಲಬುರ್ಗಿಯ ಸಾಹಿತಿ ಕಾವ್ಯಶ್ರೀ  ಮಹಾಗಾಂವಕರ್‌ ಅಭಿಪ್ರಾಯಪಟ್ಟರು. ನಗರದಲ್ಲಿ ತಾಲೂಕು ಕಸಾಪ ಗುರುವಾರ ಹಮ್ಮಿಕೊಂಡಿದ್ದ ತಾಲೂಕು 2ನೇ ಯುವ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನಗಳು ಕಲೆ, ಸಾಹಿತ್ಯ, ಸಂಸ್ಕೃತಿಯ ಪ್ರತೀಕವಾಗಿವೆ. ಯಾವ ದೇಶದಲ್ಲಿ ಬಡತನ, ಹಸಿವು, ಹೋರಾಟ, ಸಂಘರ್ಷವಿದೆಯೋ? ಆ ದೇಶದಲ್ಲಿ ಗಟ್ಟಿ ಸಾಹಿತ್ಯ ಹುಟ್ಟುತ್ತದೆ ಎಂದು ಹಿರಿಯ ಆಂಗ್ಲ ಸಾಹಿತಿಗಳ ಅನಿಸಿಕೆಯಾಗಿದೆ.

ಯುವಕರು ಬಸವಾದಿ ಶರಣರನ್ನು ಆದರ್ಶವಾಗಿ ಇಟ್ಟುಕೊಂಡು ಬದುಕು ಸಾಗಿಸಬೇಕು ಎಂದು ಕರೆ ನೀಡಿದರು. ಕಸಾಪ ಸಂಘ ಸಂಸ್ಥೆಗಳ ಪ್ರತಿನಿಧಿ  ಪ್ರೊ| ಸಿದ್ರಾಮಪ್ಪ ಮಾಸಿಮಾಡೆ ಮಾತನಾಡಿ, ಯುವ ಸಾಹಿತ್ಯದ ಜತೆಗೆ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಸುವುದು ಅಗತ್ಯವಾಗಿದೆ. ಕನ್ನಡ ಭಾಷಾ ಬೆಳವಣಿಗೆಗೆ ಕನ್ನಡ ಸಾಹಿತ್ಯ  ಸಮ್ಮೇಳನಗಳು ಬಹಳ ಸಹಕಾರಿಯಾಗಿವೆ ಎಂದರು.

ಸಮ್ಮೇಳನಾಧ್ಯಕ್ಷ ಡಾ| ನಿಜಲಿಂಗ ರಗಟೆ ಮಾತನಾಡಿ, ಇಂದಿನ ಯುವ ಸಮುದಾಯವು ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಗೂ ತನ್ನ ಕರ್ತವ್ಯಗಳನ್ನು ಮರೆತು ಕೇವಲ ಮೊಬೈಲ್‌ ಬಳಕೆಯಲ್ಲಿ ತೊಡಗಿ ಸಂಪೂರ್ಣ ನಿರುತ್ಸಾಹಿಗಳಾಗಿ ಜೀವನವನ್ನು ನಡೆಸುತ್ತಿರುವುದು ಸೋಜಿಗದ ಸಂಗತಿ ಎಂದರು.

ಮಯೂರಿ ಬಸವರಾಜ ಬಳ್ಳಾರಿ ಅವರ ಕುಚಪುಡಿ ನೃತ್ಯ ಮತ್ತು ಆಕಾಂಕ್ಷಿ ನರೇಶ ಅವರ ಭರತನಾಟ್ಯ ಗಮನ ಸೆಳೆಯಿತು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.
ಬಸವರಾಜ ಬಲ್ಲೂರ ಅವರು ಸಮ್ಮೇಳನಾಧ್ಯಕ್ಷ ಡಾ| ನಿಜಲಿಂಗ ರಗಟೆ ಅವರಿಗೆ ಧ್ವಜ ಹಸ್ತಾಂತರ ಮಾಡಿದರು. ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ವಿರೂಪಾಕ್ಷ ಗಾದಗಿ ಅಧ್ಯಕ್ಷತೆ ವಹಿಸಿದ್ದರು. ವಿಜಯಕುಮಾರ ಸೋನಾರೆ, ಶ್ರೀಮಂತ ಸಪಾಟೆ, ಎಂ.ಪಿ. ಮುದಾಳೆ, ರಾಜು ಸಾಗರ, ವಿಜಯಕುಮಾರ ಗೌರೆ, ಕಸ್ತೂರಿ ಪಟಪಳ್ಳಿ, ಪ್ರಕಾಶ ಮಠಪತಿ, ವೀರಶೆಟ್ಟಿ ಪಟೆ° ಇದ್ದರು. ಎಂ.ಎಸ್‌ ಮನೊಹರ ಸ್ವಾಗತಿಸಿದರು.

ವಿದ್ಯಾವತಿ ಮಠಪತಿ ನಿರೂಪಿಸಿದರು. ಸಮಾರಂಭಕ್ಕೂ ಮುನ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಅವರು ರಾಷ್ಟ್ರಧ್ವಜ, ಕಸಾಪದ ಟಿ.ಎಂ. ಮಚ್ಛೆ ನಾಡಧ್ವಜ ಹಾಗೂ ಎಂ.ಎಸ್‌. ಮನೋಹರ ಅವರು ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.