ಮೃತ್ಯುಕೂಪವಾದ ಮಾವಿನಹಳ್ಳಿ ಬ್ರಿಡ್ಜ್!
Team Udayavani, Nov 8, 2021, 1:17 PM IST
ಭಾಲ್ಕಿ: ತಾಲೂಕು ಕೇಂದ್ರದಿಂದ ಸುಮಾರು 15 ಕಿ.ಮೀ ಅಂತರದಲ್ಲಿರುವ ಮಾವಿನಹಳ್ಳಿ ಗ್ರಾಮದ ಹಳ್ಳದ ಮೇಲೆ ನಿರ್ಮಿಸಲಾದ ಬ್ರಿಡ್ಜ್ ಅಕ್ಷರಶಃ ಮೃತ್ಯುಕೂಪವಾಗಿ ಮಾರ್ಪಟ್ಟಿದೆ.
ಭಾಲ್ಕಿಯಿಂದ ಘೊರವಾಡಿ ಮಾರ್ಗವಾಗಿ ಹುಮನಾಬಾದಗೆ ತೆರಳುವ ಮುಖ್ಯ ರಸ್ತೆ ಇದಾಗಿದೆ. ಈ ರಸ್ತೆ ಮೇಲೆ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಾಹನಗಳು, ಗೂಡ್ಸ್ ವಾಹನಗಳು, ಬೈಕ್, ಕಾರುಗಳು ಸೇರಿದಂತೆ ಸಾಕಷ್ಟು ವಾಹನಗಳಿಗೆ ಈ ರಸ್ತೆಯೇ ಮುಖ್ಯವಾಗಿದೆ.
ವಾಹನಗಳು ಮೇಲಿನಿಂದ ಸಂಚರಿಸುತ್ತಲಿದ್ದರೂ, ಸುಮಾರು ಮೂರು ತಿಂಗಳಿನಿಂದ ರಸ್ತೆಯ ಮೇಲಿನ ಬ್ರಿಡ್ಜ್ ಮಾತ್ರ ದುರಸ್ತಿ ಕಾಣದಿರುವುದು ವಿಪರ್ಯಾಸದ ಸಂಗತಿ. ಈ ರಸ್ತೆಯಿಂದ ಪ್ರತಿ ರವಿವಾರ ಮತ್ತು ಗುರುವಾರ ಹುಮನಾಬಾದ ತಾಲೂಕಿನ ಘೊರವಾಡಿ ಗ್ರಾಮದಲ್ಲಿಯ ಮುಸ್ಲಿಂ ದೇವರಿಗೆ ಪೂಜೆ ಸಲ್ಲಿಸಲು ಸಾವಿರಾರು ಭಕ್ತರು ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಿಂದ ಆಗಮಿಸುತ್ತಾರೆ. ಎಚ್ಚರ ತಪ್ಪಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದು ಈ ರಸ್ತೆ ಮೂಲಕ ಓಡಾಡುವ ಎಲ್ಲರಿಗೂ ತಿಳಿದ ವಿಷಯ.
ಆದರೆ ತುಂಬ ದಿನಗಳಿಂದ ರಸ್ತೆ ಮಾತ್ರ ದುರಸ್ತಿ ಕಾಣದಾಗಿದ್ದು, ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಬ್ರಿಡ್ಜ್ ಹತ್ತಿರದ ಅರ್ಧ ರಸ್ತೆಯಲ್ಲಿಯೇ ವಾಹನಗಳು ಸಂಚರಿಸುತ್ತಿದ್ದು, ರಾತ್ರಿ ಸಮಯದಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತದೆ. ಅಪರಿಚಿತ ವಾಹನಗಳು ಈ ರಸ್ತೆ ಮೇಲಿನಿಂದ ಓಡಾಡಿದರೆ ಹಳ್ಳಕ್ಕೆ ಬೀಳುವುದದಂತು ಗ್ಯಾರೆಂಟಿ ಎನ್ನುವಂತಾಗಿದೆ.
ಇದನ್ನೂ ಓದಿ: ಕುಂಜೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಕಳೆದ ತಿಂಗಳಲ್ಲಿ ಶಾಸಕ ಈಶ್ವರ ಖಂಡ್ರೆ ಈ ರಸ್ತೆ ಮಾರ್ಗವಾಗಿ ಓಡಾಡುವಾಗ ಅವಸ್ಥೆ ಕಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ, ಸಂಬಂಧ ಪಟ್ಟವರು ರಸ್ತೆ ಮೇಲೆ ಮಣ್ಣು ಸುರಿದು ತೇಪೆ ಹಾಕಿದರು. ಆದರೆ ಕೆಲವೇ ದಿನಗಳಲ್ಲಿ ಆ ಮಣ್ಣೆಲ್ಲ ಕೊಚ್ಚಿ ಹೋಗಿ ಮತ್ತೆ ಅದೇ ಅವಸ್ಥೆ ಈ ರಸ್ತೆಗಾಗಿದೆ ಎನ್ನುತ್ತಾರೆ ಸ್ಥಳೀಯರು.
ರಸ್ತೆ ದುರಸ್ತಿಗಾಗಿ ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಆದರೆ ಯಾರೊಬ್ಬರು ಇತ್ತ ನೋಡುತ್ತಿಲ್ಲ. ಯಾವುದಾದರೂ ಅನಾಹುತವಾದರೆ ಮಾತ್ರ ಅಧಿಕಾರಿಗಳು ಇತ್ತ ಗಮನ ಹರಿಸುವರೇ ನೋಡಬೇಕು. ಅಲ್ಲಿಯವರೆಗೆ ಇದರ ಅವಸ್ಥೆ ಇಷ್ಟೇ. -ಸುಭಾಷ ಹುಲಸೂರೆ, ಸ್ಥಳೀಯರು
ಪ್ರತಿವರ್ಷ ಮಳೆಯಾದರೆ ಹಳ್ಳ ತುಂಬಿ ಹರಿಯುತ್ತದೆ. ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗುತ್ತದೆ. ಈ ಕುರಿತು ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಬ್ರಿಡ್ಜ್ ಎತ್ತರ ಹೆಚ್ಚಿಸುವುದು ಸೇರಿದಂತೆ ಇದರ ದುರಸ್ತಿಗಾಗಿ ಸಾಕಷ್ಟು ಬಾರಿ ಒತ್ತಾಯಿಸಿದ್ದರೂ ಪ್ರಯೋಜನವಾಗಿಲ್ಲ. -ಗೋವಿಂದರಾವ್ ಬಿರಾದಾರ ಮಾವಿನಹಳ್ಳಿ, ಜೆಡಿಎಸ್ ಮಾಜಿ ತಾಲೂಕು ಅಧ್ಯಕ್ಷ, ಭಾಲ್ಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ