ಏಕಾಏಕಿ ಗುಡಿಸಲು ತೆರವು: ರಸ್ತೆಯಲ್ಲೇ ಸಂತ್ರಸ್ತೆಗೆ ಹೆರಿಗೆ
Team Udayavani, Nov 23, 2017, 6:15 AM IST
ಬೀದರ: ಸರ್ಕಾರಿ ಜಾಗದಲ್ಲಿ ಹಲವು ವರ್ಷಗಳಿಂದ ಆಶ್ರಯ ಪಡೆದಿದ್ದ 80ಕ್ಕೂ ಹೆಚ್ಚು ಅಲೆಮಾರಿ ಸಮುದಾಯದ ಕುಟುಂಬಗಳ ಗುಡಿಸಲುಗಳನ್ನು ಮಂಗಳವಾರ ರಾತ್ರಿ ಏಕಾಏಕಿ ತೆರವುಗೊಳಿಸಲಾಗಿದ್ದು, ಈ ವೇಳೆ ಮನೆ ಕಳೆದುಕೊಂಡು ರಸ್ತೆಯಲ್ಲಿದ್ದ ಗರ್ಭಿಣಿಗೆ ರಸ್ತೆಯಲ್ಲೇ ಹೆರಿಗೆಯಾಗಿರುವ ಕರುಣಾಜನಕ ಘಟನೆ ನಡೆದಿದೆ.
ನಗರದ ನೌಬಾದ್ ಆಟೋನಗರ ಹತ್ತಿರ ಕೆಐಎಡಿಬಿ ಅಧಿಕಾರಿಗಳು ರಾತ್ರಿಯಿಡಿ ಪೊಲೀಸರ ಪಹರೆಯಲ್ಲಿ ಕಾರ್ಯಾಚರಣೆ ನಡೆಸಿ ಗುಡಿಸಲುಗಳನ್ನು ತೆರವುಗೊಳಿಸಿದರು. ವಿವಿಧ ವೃತ್ತಿಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅಲೆಮಾರಿ ಸಮುದಾಯ ಗುಡಿಸಲು ದಿಢೀರ್ ತೆರವುಗೊಳಿಸಿದ್ದರಿಂದ ಬೀದಿಗೆ ಬಿದ್ದಿದ್ದಾರೆ. ರಾತ್ರಿಯಿಡೀ ಮಹಿಳೆ, ಮಕ್ಕಳು, ವಯೋವೃದಟಛಿರು ಮೈಕೊರೆವ ಚಳಿಯಲ್ಲೇ ರಸ್ತೆ ಪಕ್ಕ ಜಾಗರಣೆ ಮಾಡುವಂಥ ಸ್ಥಿತಿ ನಿರ್ಮಾಣವಾಗಿತ್ತು. ತೆರವು ಕಾರ್ಯಾಚರಣೆ ಸಂದರ್ಭದಲ್ಲೇ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂದ ಬಳಲಲು ಆರಂಭಿಸಿದ್ದಳು.
ಆದರೆ, ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಶೀಘ್ರ ಆಗದ ಕಾರಣ ಗರ್ಭಿಣಿಗೆ ರಸ್ತೆ ಪಕ್ಕದಲ್ಲೇ ಹೆರಿಗೆ ಆಗಿದೆ. ಗುಡಿಸಲು ತೆರವುಗೊಳಿ ಸಿದ್ದರಿಂದ ಗರ್ಭಿಣಿ ಸೇರಿದಂತೆ ನಿವಾಸಿಗಳು ಆಶ್ರಯವಿಲ್ಲದೇ ನರಳಾಡಿದರೂ ಯಾರೊಬ್ಬ ಅ ಧಿಕಾರಿಗಳು ಸ್ಥಳಕ್ಕೆ ಭೇಟಿ ಅವರ ಕಣ್ಣೀರೊರೆಸುವ ಯತ್ನ ಮಾಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ