ಜಾತಿಯಿಂದ ವ್ಯಕ್ತಿ ಅಳೆಯುವುದು ಸಲ್ಲ: ಬಿರಾದಾರ


Team Udayavani, Jan 22, 2018, 12:41 PM IST

bid-3.jpg

ಔರಾದ: ಇಂದಿನ ದಿನಮಾನದಲ್ಲಿ ಜಾತಿ ವ್ಯವಸ್ಥೆ ಎಲ್ಲ ರಂಗ ಆಕ್ರಮಿಸುತ್ತಿದೆ. ಇದರಿಂದ ಹಲವು ಸಾಮಾಜಿಕ ಕಂದಕಗಳು ಸೃಷ್ಟಿಯಾಗುತ್ತಿವೆ. ಆದ್ದರಿಂದ ಒಬ್ಬ ವ್ಯಕ್ತಿಯನ್ನು ಜಾತಿಯಿಂದ ಅಳೆಯದೆ ಅವನಲ್ಲಿರುವ ಒಳ್ಳೆಯ ನಡೆ-ನುಡಿ, ಆಚಾರ-ವಿಚಾರಗಳಿಂದ ಅಳೆಯಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಮಹೇಶ ಬಿರಾದಾರ ಹೇಳಿದರು.

ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ನಿಜಶರಣ ಅಂಬಿಗರ
ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ನೇರ ಹಾಗೂ ದಿಟ್ಟ ನುಡಿಗಳಿಂದ ಹೆಸರು ವಾಸಿಯಾಗಿದ್ದ ಅಂಬಿಗರ ಚೌಡಯ್ಯ ಓರೆ ಕೋರೆಗಳನ್ನು ಯಾರ ಹಂಗಿಲ್ಲದೆ ನಿರ್ಭಯವಾಗಿ ಖಂಡಿಸುತ್ತಿದ್ದರು. ಈಗ ನಮ್ಮ ನಡುವೆ ಓಲೆ„ಕೆ ರಾಜಕಾರಣ ಮಾಡುವ ನಾಯಕರು ತುಂಬಿ ತುಳುಕುತ್ತಿದ್ದು,ಅಂಥವರು ಅಂಬಿಗರ ಚೌಡಯ್ಯನವರ ತತ್ವಾದರ್ಶಗಳನ್ನು ಜೀವನದಲ್ಲಿ ಅನುಕರಣೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಅಸಂಘಟಿತ ಸಮಾಜಗಳ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತಿ ವರ್ಷ ಹಲವಾರು ಯೋಜನೆ ಜಾರಿಗೆ ತಂದಿವೆ. ರಾಜ್ಯದಲ್ಲಿ ಬಹುಸಂಖ್ಯಾತರಾಗಿರುವ ಗಂಗಾಮತಸ್ಥರು ಸಂಘಟಿತರಾಗಿ ಸರ್ಕಾರದಿಂದ ಸಿಗುವ ಪ್ರತಿಯೊಂದು ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಲು ಮುಂದಾಗಬೇಕು ಎಂದು ಹೇಳಿದರು. 

ಶಾಸಕ ಪ್ರಭು ಚವ್ಹಾಣ ಮಾತನಾಡಿ, ದೇಶದ ಅಖಂಡತೆಗೆ ಪ್ರತಿಯೊಬ್ಬರು ಶ್ರಮಿಸಲು ಮುಂದಾಗಬೇಕು. ಇಂದಿನ
ಯುಗದಲ್ಲಿನ ಯುವಕರು ಪಾಶ್ಚಾತೀಕರಣ ಸಂಸ್ಕೃತಿಗೆ ಮಾರು ಹೋಗದೆ ಸ್ವದೇಶಿ ಸಂಸ್ಕೃತಿಯನ್ನು ಅನುಕರಣೆ ಮಾಡಿಕೊಂಡು ದೇಶದ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಶ್ರೀಮಂತಗೋಳಿಸಲು ಮುಂದಾಗಬೇಕು ಎಂದು ಹೇಳಿದರು. 

ಇದಕ್ಕೂ ಮುನ್ನ ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಿಜ ಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ತಹಶೀಲ್ದಾರ ಎಂ. ಚಂದ್ರಶೇಖರ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಶಾಲೆ ಕಾಲೇಜಿನ ವಿದ್ಯಾರ್ಥಿಗಳು,
ಪಟ್ಟಣ ವಿವಿಧ ಕಲಾ ತಂಡದ ಯುವಕರು ಹಾಗೂ ಮುಖಂಡರು ಮತ್ತು ಜನ ನಾಯಕರು ಭಾಗವಹಿಸಿದ್ದರು.

ಜಿಪಂ ಸದಸ್ಯ ಮಾರುತಿ ಚವ್ಹಾಣ, ಶಿಕ್ಷಣಾಧಿಕಾರಿ ಚವ್ಹಾಣಶೆಟ್ಟಿ, ಸಿಪಿಐ ರಮೇಶಕುಮಾರ ಮೈಲುರಕರ್‌
ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಶಾಲೆ ಕಾಲೇಜಿನ ಮಕ್ಕಳು ಹಾಗೂ ಪಟ್ಟಣದ ಮುಖಂಡರು
ಕಾರ್ಯಕ್ರಮದಲ್ಲಿ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.