ಭಾಲ್ಕಿ ತಾಲೂಕಿನಲ್ಲಿ ಹಿಂಗಾರು ಬೆಳೆ ನಿರೀಕ್ಷೆಯೂ ಹುಸಿ


Team Udayavani, Nov 13, 2018, 12:05 PM IST

bid-2.jpg

ಭಾಲ್ಕಿ: ಮುಂಗಾರು ಮಳೆ ಕೊರತೆಯಿಂದ ಕಂಗಾಲಾಗಿದ್ದ ತಾಲೂಕಿನ ರೈತರಿಗೆ, ಹಿಂಗಾರು ಬೆಳೆಯನ್ನಾದರೂ ಬೆಳೆಯಬಹುದು ಎನ್ನುವ ನಿರೀಕ್ಷೆಯೂ ಹುಸಿಯಾಗಿದ್ದು, ದಿಕ್ಕು ತೋಚದ ಸ್ಥಿತಿ ಎದುರಾಗಿದೆ.

ತಾಲೂಕಿನ ಬಹುತೇಕ ಕಡೆ ಹಿಂಗಾರು ಬೆಳೆಗೆ ಬೇಕಾಗುವಷ್ಟು ಮಳೆ ಬಾರದೇ ಭೂಮಿ ತೇವಗೊಂಡಿಲ್ಲ. ಖಟಕಚಿಂಚೋಳಿ ಹೋಬಳಿ ವ್ಯಾಪ್ತಿಯ ಏಣಕೂರ, ಡಾವರಗಾಂವ, ಬರದಾಪೂರ, ಭಾಗ್ಯನಗರ, ಕುರುಬಖೇಳಗಿ, ನಾವದಗಿ. ಭಾತಂಬ್ರಾ ಹೋಬಳಿಯ ಸಾಯಗಾಂವ, ಲಖಣಗಾಂವ, ಕಾಕನಾಳ, ಶಿವಣಿ, ಕಾಸರತೂಗಾಂವ, ಹಲಬರ್ಗಾ ಹೋಬಳಿಯ ಕೋಣ ಮೆಳಕುಂದಾ, ಧನ್ನೂರ(ಎಸ್‌), ನಿಟ್ಟೂರ(ಬಿ) ಸೇರಿದಂತೆ ತಾಲೂಕಿನ ಸುಮಾರು ಗ್ರಾಮಗಳಲ್ಲಿ ಕಪ್ಪು ಮಣ್ಣಿನ ಹೊಲಗಳಿದ್ದು, ಈ ಹೊಲಗಳಿಗೆ
ವಾರಕ್ಕೊಮ್ಮೆಯಾದರೂ ನೀರಿನ ಅವಶ್ಯಕತೆ ಇದೆ.

ಬಹುದಿನಗಳಿಂದ ಮಳೆ ಬೀಳದಿರುವುದರಿಂದ ಬಿತ್ತಿದ ಬಿಳಿಜೋಳ ಮೊಳಕೆ ಒಡೆದಿಲ್ಲ. ಮತ್ತು ಬೆಳೆದು ನಿಂತ ಕಡಲೆ ಬೆಳೆ ಹಳದಿ ಬಣ್ಣಕ್ಕೆ ತಿರುಗುತ್ತಿದೆ. ಅಲ್ಲದೇ ಮುಂಗಾರಿನಲ್ಲಿ ಬಿತ್ತಿದ ತೊಗರಿ ಬೆಳೆ ಸಂಪೂರ್ಣ ಒಣಗುತ್ತಿದೆ. ಮಳೆ ಇಲ್ಲದ ಕಾರಣ ನಮಗೆ ತುಂಬಾ ತೊಂದರೆಯಾಗಿದೆ. ದಿಕ್ಕು ತೋಚದಂತಹ ಸ್ಥಿತಿಯಲ್ಲಿದ್ದೇವೆ. ಏನು ಮಾಡಬೇಕೆಂದು ತಿಳಿಯುತ್ತಿಲ್ಲ. ಕೃಷಿ ಕೆಲಸಕ್ಕೆಂದೇ ರೈತರು ಬೇರೆ, ಬೇರೆ ಕಡೆ ಸಾಲ ಮಾಡಿರುತ್ತಾರೆ. ಇಂತಿಷ್ಟು ಅವಧಿಯಲ್ಲಿ ತೀರಿಸಬೇಕಾದ ಜವಾಬ್ದಾರಿ ಇರುತ್ತದೆ.

ಆದರೆ ಸಕಾಲಕ್ಕೆ ಮಳೆಯಾಗಿ ಬೆಳೆ ಬಂದರೆ ಆರ್ಥಿಕ ಸಮಸ್ಯೆ ಇರುವುದಿಲ್ಲ. ಬೇರೆ ಸಂಕಷ್ಟಗಳನ್ನು ನಿವಾರಿಸಿಕೊಳ್ಳಬಹುದು ಎನ್ನುತ್ತಾರೆ ಪ್ರಗತಿಪರ ರೈತ ಅಂಬೆಸಾಂಗವಿ ಗ್ರಾಮದ ಸುನೀಲ ಮಾನಕಾರಿ. ಕೆಲವು ರೈತರು ತಮ್ಮ ಹೊಲದಲ್ಲಿರುವ ಕೊಳವೆ ಬಾವಿ ಮತ್ತು ತೆರೆದ ಬಾವಿಯಲ್ಲಿರುವ ನೀರು ಬಿಳಿಜೋಳ, ತೊಗರಿ ಮತ್ತು ಕಡಲೆಗೆ ಹರಿಸಿ ಅಲ್ಪಸ್ವಲ್ಪ ಬೆಳೆ ಬೆಳೆಯುತ್ತಿದ್ದಾರೆ. ಆದರೆ ಬಾವಿ ಇಲ್ಲದ ರೈತರ ಸ್ಥಿತಿ ಹೇಳತೀರದಂತಾಗಿದೆ ಎನ್ನುತ್ತಾರೆ ನಾವದಗಿ ಗ್ರಾಮದ ರೈತ ರಾಜಪ ಬೆಲೂರೆ. 

ಪಸಕ್ತ ಸಾಲಿನ ಹಿಂಗಾರು ಹಂಗಾಮಿನ ಬಿತ್ತನೆ ಗುರಿ 31,950 ಹೆಕ್ಟೇರ್‌ ಆಗಿದ್ದು, ಇದುವರೆಗೆ 7,500 ಹೆಕ್ಟೇರ್‌ ಮಾತ್ರ ಬಿತ್ತನೆಯಾಗಿದೆ. ಹಿಂಗಾರು ಹಂಗಾಮಿನ ಮಳೆ ಕೊರತೆಯಿಂದ ಶೇ.20 ಬಿತ್ತನೆ ಮಾತ್ರ ಮಾಡಲಾಗಿದೆ. ಇದರಲ್ಲಿ ಬಿಳಿಜೋಳ 500 ಹೆಕ್ಟೇರ್‌, ಕಡಲೆ ಮತ್ತು ಕುಸುಬಿ 5,500 ಹೆಕ್ಟೇರ್‌ ಬಿತ್ತನೆ ಮಾತ್ರ ನಡೆದಿದೆ. ಹಿಂಗಾರು ಹಂಗಾಮಿನ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ನಿರ್ಧಿಷ್ಠ ಗುರಿಯಂತೆ 272 ಎಂ.ಎಂ. ಮಳೆಯಾಗಬೇಕಿತ್ತು. ಆದರೆ ಬರೀ 39 ಎಂ.ಎಂ. ಮಳೆ ಮಾತ್ರ ಆಗಿದೆ. ಒಟ್ಟು ಶೇ. 86 ಮಳೆ ಕೊರತೆಯಾಗಿದೆ. ಹೀಗಾಗಿ ಬಿತ್ತನೆ ಗುರಿ ಕ್ಷೀಣಿಸಿದೆ ಎನ್ನುವುದು ಕೃಷಿ ಇಲಾಖೆಯ ಮಾಹಿತಿ.

ಜಿಲ್ಲೆಯ ಐದು ತಾಲೂಕುಗಳಲ್ಲಿ ಭಾಲ್ಕಿ ತಾಲೂಕಿನಲ್ಲಿಯೇ ಹೆಚ್ಚಿನ ಮಳೆ ಕೊರತೆ ಇದೆ. ಆದರೆ ಜಿಲ್ಲಾಡಳಿತ ಮತ್ತು ಇಲ್ಲಿಯ ಜನಪ್ರತಿನಿಧಿಗಳು ಭಾಲ್ಕಿ ತಾಲೂಕನ್ನು ಬರ ಪಟ್ಟಿಗೆ ಸೇರಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎನ್ನುತ್ತಾರೆ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ.

„ಜಯರಾಜ ದಾಬಶೆಟ್ಟಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.