ಪರಿಶುದ್ಧ ನಗುವೇ ದಿವ್ಯೌಷಧ


Team Udayavani, Mar 4, 2018, 12:41 PM IST

bid-3.jpg

ಬೀದರ: ಪರಿಶುದ್ಧ ನಗುವೆ ದಿವ್ಯ ಔಷಧ. ನಗುವುದರಿಂದ ಶ್ವಾಸಕೋಶಗಳು ತೆರೆದುಕೊಂಡು ಹೆಚ್ಚು ಆಮ್ಲಜನಕ ಹೀರಿಕೊಳ್ಳುತ್ತವೆ. ನಗುವಿನಿಂದ ರೋಗ ನಿರೋಧಕ ಶಕ್ತಿ ಹೆಚ್ಚಿ ಆರೋಗ್ಯ ಮತ್ತು ಆಯುಷ್ಯ ವೃದ್ಧಿಯಾಗುತ್ತದೆ ಎಂದು ಬಸವ ಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣತಾಯಿ ಹೇಳಿದರು.

ನಗರದ ಶರಣ ಉದ್ಯಾನದಲ್ಲಿ ಹೋಳಿ ಹಬ್ಬದ ನಿಮಿತ್ತ ಆಯೋಜಿಸಿದ್ದ ನಗೆಮಾರಿ ತಂದೆಗಳ ಸ್ಮರಣೋತ್ಸವ ಮತ್ತು ನಗೆ ಹಬ್ಬ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಆದ್ದರಿಂದ ಪ್ರತಿಯೊಬ್ಬರೂ ಹಾಸ್ಯ ಪ್ರಜ್ಞೆ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಮನುಷ್ಯರಿಗೆ ನಗುವು ಒಂದು ವಿಟಾಮಿನ್‌. ಆದರೆ ನಗಿಸುವುದು ಅಸಾಮಾನ್ಯ ಕಲೆ. ನಗುವ ಸಾಮರ್ಥ್ಯ ಇರುವುದು ಮನುಷ್ಯರಿಗೆ ಮಾತ್ರ. ಅದಕ್ಕೆ ಬಿಗುಮಾನ ಅಹಂಕಾರ ಬಿಟ್ಟು ನಗಬೇಕು. ಮನಪೂರ್ತಿ ನಗುವುದರಿಂದ ಒತ್ತಡ ನಿವಾರಣೆಯಾಗಿ ಆನಂದ ಲಭಿಸುತ್ತದೆ ಎಂದರು. ಹನ್ನೆರಡನೇ ಶತಮಾನದ ಶರಣರು ನಗಿಸುವುದನ್ನು ಒಂದು ಕಾಯಕವಾಗಿ ಗೌರವಿಸಿದರು. 

ಬಹುರೂಪಿ ಚೌಡಯ್ಯನವರು ಮತ್ತು ನಗೆಮಾರಿ ತಂದೆಗಳು ಜನರಿಗೆ ನಗಿಸುತ್ತಲೆ ಸುಂದರ ಬದುಕಿನ ತತ್ವ ಸಾರುವುದನ್ನು
ಕಾಯಕವಾಗಿಸಿಕೊಂಡಿದ್ದರು ಎಂದು ಬಣ್ಣಿಸಿ, ನಗುವನ್ನೇ ಜೀವನವಾಗಿಸಿಕೊಳ್ಳಬೇಕು ಎಂದು ಕರೆಯಿತ್ತರು. ಈ ಸಂದರ್ಭದಲ್ಲಿ ಔರಾದನ ರಾಮದಾಸ ಬಿರಾದಾರ ಅವರು ಶರಣರ ತತ್ವಗಳನ್ನು ಕೀರ್ತನ ಶೈಲಿಯಲ್ಲಿ ಬಣ್ಣಿಸುತ್ತಾ ಶರಣರ ಸಂಗಕ್ಕಿಂತ ಭಾಗ್ಯ ಮತ್ತೂಂದಿಲ್ಲ. ಶರಣರ ನೆನೆದರೆ ಪುಣ್ಯ ಎಂದು ವಿವರಿಸಿದರು. 

ನಗೆಗಡಲಲ್ಲಿ ತೇಲಿದ ಸಭಿಕರು: ಟಿವಿ9 ಕಲಾವಿದರಾದ ಚಿಂಚೋಳಿಯ ರಾಚಯ್ಯಸ್ವಾಮಿ, ಆಕಾಶವಾಣಿ ಮತ್ತು ಚಂದನವಾಹಿನಿ ಕಲಾವಿದ ರೇವಣಸಿದ್ಧಯ್ಯ ಸ್ವಾಮಿ ಮತ್ತು ಹಾಸ್ಯಕಲಾವಿದ ಮಲ್ಲಿಕಾರ್ಜುನ ಟಂಕಸಾಲಿ ಅವರು ದಿನನಿತ್ಯ ಗಂಡ ಹೆಂಡತಿ ಮಧ್ಯದಲ್ಲಿ ಸಂಭವಿಸುವ ಹಾಸ್ಯ ಪ್ರಸಂಗಗಳು, ಗೆಳೆಯರ ಮಧ್ಯ ಮತ್ತು ಶಾಲೆಯಲ್ಲಿ ಶಿಕ್ಷಕರ-ವಿದ್ಯಾರ್ಥಿಗಳ ಮಧ್ಯ ಘಟಿಸುವ ಹಾಸ್ಯ ಪ್ರಸಂಗಗಳನ್ನು ಹೇಳಿ 2 ಗಂಟೆಗೂ ಅ ಧಿಕ ಸಮಯ ಸಭಿಕರನ್ನು ನಗೆಗಡಲಲ್ಲಿ ತೇಲಿಸಿದರು. ಮಿಮಿಕ್ರಿಗಳ ಮೂಲಕವೂ ಜನರನ್ನು ರಂಜಿಸಿದರು. ಡಾ| ಗಂಗಾಂಬಿಕೆ ಅಕ್ಕ ನೇತೃತ್ವ ವಹಿಸಿದ್ದರು.

ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್‌.ಕೆ. ಪಾಟೀಲರು ಪರಿಸರ ಸ್ನೇಹಿ, ಹೊಗೆರಹಿತ ಪಟಾಕಿ ಸಿಡಿಸಿ ನಗೆಹಬ್ಬ ಉದ್ಘಾಟಿಸಿದರು. ಅಗ್ನಿಶಾಮಕದಳದ ನಿವೃತ್ತ ಅಧಿಕಾರಿ ಅಮೃತ ಚಿಮಕೋಡ ಅವರು ಧ್ವಜಾರೋಹಣ ನೆರವೇರಿಸಿದರು.

ಎಸ್‌. ಪಾಟೀಲ ಅಧ್ಯಕ್ಷತೆ ವಹಿಸಿ ವಚನ ವಾಚನ ಮಾಡಿಸಿದರು. ಪ್ರಭಾವತಿ ಗೋರನಾಳೆ ಗುರು ಪೂಜೆ ಮಾಡಿದರು. ಯುಕೆಜಿ ವಿದ್ಯಾರ್ಥಿನಿ ಭಕ್ತಿ ಪಾಟೀಲ ಕಿತ್ತೂರ ರಾಣಿ ಚನ್ನಮ್ಮನ ಛದ್ಮವೇಷದಲ್ಲಿ ಸಭಿಕರನ್ನು ರಂಜಿಸಿದರು. ಮಾಣಿಕಪ್ಪ ಗೋರನಾಳೆ ಸ್ವಾಗತಿಸಿದರು. ರಮೇಶ ಮಠಪತಿ ನಿರೂಪಿಸಿದರು. 

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.