ವ್ಯಕ್ತಿತ್ವ ನಿರ್ಮಾಣ ಶಿಕ್ಷಣ ಉದ್ದೇಶ
Team Udayavani, Jan 6, 2022, 3:01 PM IST
ಬೀದರ: ಶಿಕ್ಷಣದ ಉದ್ದೇಶ ಆದರ್ಶ ವ್ಯಕ್ತಿತ್ವ ನಿರ್ಮಾಣ ಆಗಿದೆಯೇ ಹೊರತು ಅಧಿಕ ಅಂಕ ಗಳಿಕೆ ಅಲ್ಲ ಎಂದು ಬಿಇಒ ಕಚೇರಿಯ ವಿಜ್ಞಾನ ವಿಷಯ ಪರಿವೀಕ್ಷಕ ಸಚ್ಚಿದಾನಂದ ಹೇಳಿದರು.
ನಗರದ ಜೀಜಾಮಾತಾ ಕನ್ಯಾ ಪ್ರೌಢಶಾಲೆಯಲ್ಲಿ ನಡೆದ ಬಿಲಾಲ್ ಶಿಕ್ಷಣ ಮಹಾದ್ಯಾಲಯದ ಪ್ರಶಿಕ್ಷಣಾರ್ಥಿಗಳ ಪ್ರಾಯೋಗಿಕ ಪಾಠಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳನ್ನು ನೈತಿಕತೆ, ಮಾನವೀಯ ಮೌಲ್ಯಗಳೊಂದಿಗೆ ಬೆಳೆಸುವ ಶಿಕ್ಷಣ ಅಗತ್ಯವಾಗಿದೆ. ಜೀವನದಲ್ಲಿ ಏನನ್ನಾದರೂ ಸಾಧಿಸಲು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಅಧ್ಯಯನ ಮಾಡಬೇಕು ಎಂದು ಸಲಹೆ ಮಾಡಿದರು.
ಮುಖ್ಯಶಿಕ್ಷಕ ಪರಮೇಶ್ವರ ಬಿರಾದಾರ ಮಾತನಾಡಿ, ಶಿಕ್ಷಕ ವೃತ್ತಿ ಪವಿತ್ರವಾಗಿದೆ. ಅದರ ಘನತೆ, ಗೌರವ ಕಾಪಾಡಿಕೊಂಡು ಹೋಗಬೇಕಿದೆ. ಭಾವಿ ಶಿಕ್ಷಕರು ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸಬೇಕು. ಪ್ರಶಿಕ್ಷಣಾರ್ಥಿಗಳು ಮಕ್ಕಳ ಜ್ಞಾನ ವೃದ್ಧಿಗೆ ಪೂರಕವಾಗಿ ಉತ್ತಮ ಪಾಠ ಬೋಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಾಚಾರ್ಯ ಮಹಮ್ಮದ್ ಸಮೀರ್ ಉಲ್ಲಾ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ವ್ಯಕ್ತಿಗಳಾಗಲು ಪ್ರಯತ್ನಿಸಬೇಕು ಎಂದರು. ಮುಖ್ಯ ಶಿಕ್ಷಕರಾದ ಮಲ್ಲಿಕಾರ್ಜುನ ಬೆಂಬುಳಗೆ, ವಾಸುದೇವ ರಾಠೊಡ್, ಶಿಕ್ಷಕರಾದ ಮೋಹನ್ ಜೋಶಿ, ರಾಜಕುಮಾರ ಗಾದಗೆ, ಅನಿಲಕುಮಾರ ಟೆಕೋಳೆ, ನಾಗರತ್ನ ಟಿ, ಆನಂದ ಕೆ. ಜಾಧವ, ಆರತಿ ಹಣಮಂತ, ಶಗುಫ್ತಾ ಬೇಗಂ, ತೇಜಸ್ವಿನಿ ಸತೀಶಕುಮಾರ, ಪ್ರಿಯಂಕಾ, ರಾಚಪ್ಪ, ಶ್ರುತಿ ಚಂದ್ರಕಾಂತ, ತಂಗೆಮ್ಮ ಶರಣಪ್ಪ ಇದ್ದರು. ಕಾವೇರಿ ಶಿವರಾಜ ಸ್ವಾಗತಿಸಿದರು. ಅಶ್ವಿನಿ ಪ್ರಭುರಾವ್ ನಿರೂಪಿಸಿ ಮೀನಾಕ್ಷಿ ಮಚ್ಚೇಂದ್ರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…