ಅರಿಯಬೇಕಿದೆ ದೇಶದ ನೈಜ ಇತಿಹಾಸ; ವಿಶಾಲ ಸ್ವಾಮಿ

ಇಂದಿನ ದಿನಗಳಲ್ಲಿ ಯುವಕರು ಆಧುನಿಕ ಉಪಕರಣಗಳಿಗೆ ಅಂಟಿಕೊಂಡು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ

Team Udayavani, May 23, 2022, 5:52 PM IST

ಅರಿಯಬೇಕಿದೆ ದೇಶದ ನೈಜ ಇತಿಹಾಸ; ವಿಶಾಲ ಸ್ವಾಮಿ

ಹುಮನಾಬಾದ: ಸನಾತನ ಸಂಸ್ಕೃತಿ ಉಳಿಸಿಕೊಂಡು ದೇಶ ಮುನ್ನಡೆಯುತ್ತಿರುವುದರಿಂದ ದೇಶದ ಅಖಂಡತೆ ಇಂದಿಗೂ ಉಳಿದುಕೊಂಡು ಬಂದಿದೆ. ಅನೇಕ ಇತಿಹಾಸಕಾರರು ಸತ್ಯವನ್ನು ಮುಚ್ಚಿಟ್ಟ ಪರಿಣಾಮ ಇಂದಿನ ಯುವ ಜನತೆಗೆ ಭಾರತದ ಇತಿಹಾಸದ ಸತ್ಯವೇ ಗೊತ್ತಿಲ್ಲದಂತಾಗಿದೆ ಎಂದು ವಿಶಾಲ ಸ್ವಾಮಿ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಎದುರಿಗೆ ಭಾನುವಾರ ಮುಂಜಾನೆ ಕ್ರೀಡಾ ಭಾರತಿ ಕರ್ನಾಟಕ ವತಿಯಿಂದ ಏರ್ಪಡಿಸಿದ್ದ ಸ್ವರಾಜ್ಯ-75ರ ಭಾರತ ಪ್ರದಕ್ಷಣೆ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಹಿಂದಿನ ಕಾಲದಿಂದಲೂ ಭಾರತ ವಿಶ್ವಗುರುವಾಗಿ ಗುರುತಿಸಿಕೊಂಡಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಭಾರತ ಹಿರಿಮೆ ಪಡೆದುಕೊಂಡಿತ್ತು. ಕಾರಣ ಅನೇಕರು ಭಾರತದ ಮೇಲೆ ದಾಳಿ ನಡೆಸಿ ಆಳ್ವಿಕೆ ಮಾಡಿದರು. ಸ್ವರಾಜ್ಯದ ಹೆಸರಿನಲ್ಲಿ ಹೋರಾಟಗಳು ನಡೆಸಿ ಮತ್ತೆ ಭಾರತ ಸ್ವಾಂತಂತ್ರ್ಯ ಪಡೆದುಕೊಂಡರು ಕೂಡ ನಾವುಗಳು ಮಾತ್ರ ಭಾರತದ ಇತಿಹಾಸದ ಸತ್ಯ ಘಟನೆಗಳು ತಿಳಿದುಕೊಂಡಿಲ್ಲ. ದೇಶದ ಹಾಗೂ ವಿದೇಶದ ಲೇಖಕರು ಬರೆದ ಇತಿಹಾಸವನ್ನೇ ಇಂದಿಗೂ ನಾವುಗಳು ಅದನ್ನೆ ಸತ್ಯ ಎಂದು ತಿಳಿದುಕೊಂಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಇಂದಿನ ಯುವ ಶಕ್ತಿ ಭಾರತದ ನೈಜ ಇತಿಹಾಸದ ಕುರಿತು ತಿಳಿದುಕೊಂಡು ಮುಂದಿನ ಪಿಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ ಎಂದರು.

ಕ್ರೀಡಾ ಭಾರತಿ ಉತ್ತರ ಪ್ರಾಂತ ಸಂಯೋಜಕ ಅಶೋಕ ಕೊಡಗನೂರ ಮಾತನಾಡಿ, ಇಂದಿನ ದಿನಗಳಲ್ಲಿ ಯುವಕರು ಆಧುನಿಕ ಉಪಕರಣಗಳಿಗೆ ಅಂಟಿಕೊಂಡು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕಾರಣ ಯುವಕರು ದೈಹಿಕ ಚುಟವಟಿಕೆಗಳಲ್ಲಿ ಭಾಗವಹಿಸಬೇಕು. ಆಟದ ಮೈದಾನ, ಕ್ರೀಡಾಂಗಣಗಳ ಕಡೆಗೆ ಯುವಕರು ಆಸಕ್ತಿ ಬೆಳೆಸಿಕೊಳ್ಳಬೇಕು. ಯುವಕರು ದೈಹಿಕವಾಗಿ ಸದೃಢರಾಗಬೇಕು ಎಂಬ ನಿಟ್ಟಿನಲ್ಲಿ ಈ ಬೈಕ್‌ ರ್ಯಾಲಿ ನಡೆಯಲ್ಲಿದೆ. ದೇಶ 570
ಜಿಲ್ಲೆಗಳಲ್ಲಿ ಬೈಕ್‌ ರ್ಯಾಲಿ ನಡೆಯಲ್ಲಿದೆ ಎಂದು ತಿಳಿಸಿದರು.

ಬಿಜೆಪಿ ಹಿರಿಯ ಮುಖಂಡ ವಿನಾಯಕ ಮಂಡಾ ರಾಷ್ಟ್ರಧ್ವಜಾರೋಹಣ ಮಾಡಿದರು. ಪುರಸಭೆ ಸದಸ್ಯ ಸುನೀಲ್‌ ಪಾಟೀಲ್‌ ಸೇರಿದಂತೆ ಅನೇಕರು ಭಾರತ ಮಾತೆ ಹಾಗೂ ಹನುಮಂತನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ವೀರಭದ್ರೇಶ್ವರ ದೇವಸ್ಥಾನದಿಂದ ಬಸವೇಶ್ವರ ವೃತ್ತ, ಬಾಲಾಜಿ ಮಂದಿರ, ಸರದಾರ ಪಟೇಲ್‌ ವೃತ್ತ, ಅಂಬೇಡ್ಕರ್‌ ವೃತ್ತದ ಮೂಲಕ ಬೈಕ್‌ ರ್ಯಾಲಿ ಕಲಬುರಗಿ ಜಿಲ್ಲೆ ಕಡೆಗೆ ಸಾಗಿತು. ಶ್ರೀನಿವಾಸ ದಸಪಳ್ಳಿ, ಬಸವ ಹಿರೇಮಠ, ಗೋಪಾಲಕೃಷ್ಣ ಮೋಹಳೆ, ಅಭಿಷೇಕ, ಜ್ಯೋತಿಬಾ ಸಾಟೆ, ದಿನೇಶರೆಡ್ಡಿ, ಶೈಲೇಶ ಚವ್ಹಾಣ, ಆದಿತ್ಯ ಖಮಿತ್ಕರ್‌, ಡಿ.ಎನ್‌. ಪತ್ರಿ, ಅನಿಲ ಪಲ್ಲೆರಿ, ಶಿವಕುಮಾರ ಧುಮ್ಮನಸೂರ, ಲಕ್ಷ್ಮೀಕಾಂತ ಹಿಂದೊಡ್ಡಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.