ರುದನೂರಗೆ ಕಾಡುತ್ತಿದೆ ರಸ್ತೆ-ನೀರಿನ ಸಮಸ್ಯೆ

•ಮಳೆಗಾಲದಲ್ಲೂ ಸಿಗುತ್ತಿಲ್ಲ ಕುಡಿವ ನೀರು •ಸ್ವಲ್ಪ ಮಳೆ ಬಿದ್ದರೂ ಸಂಚರಿಸಲಾಗದ ರಸ್ತೆ

Team Udayavani, Aug 4, 2019, 5:23 PM IST

bidar-tdy-3

ಭಾಲ್ಕಿ: ರುದನೂರ ಗ್ರಾಮಕ್ಕೆ ಖಾನಾಪೂರ ರೈಲ್ವೆ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದೆ.

ಭಾಲ್ಕಿ: ಸುಮಾರು 15 ದಿನಗಳಿಂದ ತಾಲೂಕು ಆಡಳಿತ ನೀರು ಪೂರೈಕೆ ಟ್ಯಾಂಕರ್‌ ಸ್ಥಗಿತಗೊಳಿಸಿರುವುದರಿಂದ ಮಳೆಗಾಲದಲ್ಲೂ ಇಲ್ಲಿ ಸಮಪರ್ಮಕ ಕುಡಿಯುವ ನೀರು ಸಿಗುತ್ತಿಲ್ಲ. ಸ್ವಲ್ಪವೇ ಮಳೆ ಬಿದ್ದರೂ ಇಲ್ಲಿಂದ ಪಕ್ಕದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಹರಸಾಹಸ ಪಡಬೇಕಾಗುತ್ತದೆ… ಇದು ತಾಲೂಕು ಕೇಂದ್ರದಿಂದ ಸುಮಾರು 20 ಕಿ.ಮೀ. ಅಂತರದಲ್ಲಿರುವ ರುದನೂರ ಗ್ರಾಮದ ಕಥೆ ವ್ಯಥೆ.

ಕಳೆದ ಬೇಸಿಗೆಯಿಂದ ತಾಲೂಕು ಆಡಳಿತ ಈ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡುತ್ತಲಿತ್ತು. ಆದರೆ ಸಮರ್ಪಕ ನೀರು ಸರಬರಾಜು ಇಲ್ಲದೇ ಒಂದು ಕುಟುಂಬದವರು 5 ಕೊಡ ನೀರು ತುಂಬಿಕೊಳ್ಳುತ್ತಲಿದ್ದರು. ಜೂನ್‌ ತಿಂಗಳಲ್ಲಿ ಮಳೆಗಾಲ ಪ್ರಾರಂಭವಾಗಿ ಮಳೆ ಬಿದ್ದರೆ ನೀರಿನ ಸಮಸ್ಯೆ ನೀಗಬಹುದು ಎನ್ನುವುದು ಎಲ್ಲರ ಆಶೆಯವಾಗಿತ್ತು. ಆದರೆ ಜೂನ್‌, ಜುಲೈ ಕಳೆದು ಆಗಸ್ಟ್‌ ತಿಂಗಳು ಬಂದರೂ ಇಲ್ಲಿ ಕುಡಿಯಲು ನೀರು ಸಿಗದಂತಗಾಗಿದೆ. ಅಂತರ್ಜಲ ಕುಸಿದ ಕಾರಣ ಗ್ರಾಮದಲ್ಲಿರುವ ತೆರೆದ ಬಾವಿಗಳು ಸಂಪೂರ್ಣ ಬತ್ತಿದ್ದು, ಗ್ರಾಮದ ಎಲ್ಲಾ ಕೊಳವೆಬಾವಿಗಳೂ ಕೈಕೊಟ್ಟಿವೆ. ಕಾರಣ ಗ್ರಾಮದ ಹೊರವಲಯದ ಖಾಸಗಿ ಹೊಲಗಳಲ್ಲಿನ ನೀರು ತರುವಂತಾಗಿದೆ. ಹೀಗಾಗಿ ವೃದ್ಧರೂ ಮತ್ತು ಮಕ್ಕಳು ಪ್ರತಿನಿತ್ಯ ನೀರಿಗಾಗಿ ಅಲೆದಾಡುವಂತಾಗಿದೆ ಎನ್ನುತ್ತಾರೆ ಗ್ರಾಮದ ನಿವಾಸಿ ರವೀಂದ್ರ ಪಾಟೀಲ. ಗ್ರಾಮದಲ್ಲಿ ಮೊದಲಿನಿಂದಲೂ ನೀರಿನ ಸಮಸ್ಯೆ ಕಾಡುತ್ತಿದೆ. ಆದರೆ ಬೇಸಿಗೆಯಲ್ಲಿ ಹೆಚ್ಚಾಗಿ ಕಾಡುವ ನೀರಿನ ಸಮಸ್ಯೆ ಈ ವರ್ಷ ಮಳೆಗಾಲದಲ್ಲೂ ಕಾಡುತ್ತಿರುವುದು ಗ್ರಾಮಸ್ಥರಿಗೆ ದೊಡ್ಡ ಸಮಸ್ಯೆಯಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ರುದನೂರ ಗ್ರಾಮದ ನೀರಿನ ಸಮಸ್ಯೆ ನಿವಾರಣೆಗೆ ಮತ್ತು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸುಧಾರಣೆಗೆ ಮುಂದಾಗಬೇಕು ಎನ್ನುವುದು ಗ್ರಾಮದ ನಿವಾಸಿ ಬಸವರಾಜ ಕಾರಬಾರಿ ಅವರ ಅಳಲು.

ರುದನೂರ ಗ್ರಾಮಕ್ಕೆ ಪಕ್ಕದ ಖಾನಾಪೂರ ರೈಲ್ವೆ ರಸ್ತೆಯಿಂದ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿ 2 ವರ್ಷಗಳಿಂದ ಕುಂಟುತ್ತಾ ಸಾಗಿದೆ. ಹೀಗಾಗಿ ಗ್ರಾಮಸ್ಥರು ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಿಗೆ ಸಂಚರಿಸಲು ಹರಸಾಹಸ ಪಡಬೇಕಾಗುತ್ತಿದೆ. ಸ್ವಲ್ಪವೇ ಮಳೆ ಬಿದ್ದರೂ ಗ್ರಾಮಸ್ಥರಿಗೆ ನಡುಗಡ್ಡೆಯಲ್ಲಿ ವಾಸವಾಗಿರುವಂತೆ ಅನುಭವವಾಗುತ್ತಲಿದೆ. ಬೇರೆ ಊರಿಂದ ಬರುವ ನೆಂಟರಿಷ್ಟರೂ ಗ್ರಾಮಕ್ಕೆ ಬರದಂತಾಗಿದೆ. ಕಾರಣ ತಕ್ಷಣವೇ ಈ ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮದ ಪ್ರಮುಖ ನಾಗಯ್ನಾ ಸ್ವಾಮಿ ಒತ್ತಾಯಿಸಿದ್ದಾರೆ.

ನೀರು ಸರಬರಾಜು ಮಾಡುವ ಟ್ಯಾಂಕರ್‌ ಬಂದ್‌ ಮಾಡಿರುವುದರಿಂದ ತೊಂದರೆಯಾಗುತ್ತಿದೆ. ಆದರೂ ಕಷ್ಟಪಟ್ಟು ಪಕ್ಕದ ಹೊಲಗಳಿಂದ ಸೈಕಲ್ಗಳ ಮೇಲೆ ನೀರು ತರಬಹುದು. ಆದರೆ ಈ ಜಿಟಿಜಿಟಿ ಮಳೆಯಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಕೆಸರಿನಿಂದ ಕೂಡಿದೆ. ಸುಮಾರು 2 ವರ್ಷಗಳಿಂದ ಈ ರಸ್ತೆ ದುರಸ್ತಿ ಕುಂಟುತ್ತಾ ಸಾಗಿದೆ. ಹೀಗಾಗಿ ಪಕ್ಕದ ಹೊಲಗಳಿಂದಲೂ ನೀರು ತರಲು ಸಾಧ್ಯವಿಲ್ಲದಂತಾಗಿದೆ.• ಮಲ್ಲಿಕಾರ್ಜುನ ತಾಂಬೊಳೆ,ಗ್ರಾಮದ ಯುವಕ

 

•ಜಯರಾಜ ದಾಬಶೆಟ್ಟಿ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

Lok Sabha Election 2024: ಉತ್ತರ ಕರ್ನಾಟಕದತ್ತ ಸುಳಿಯದ ಸ್ಟಾರ್‌ ಪ್ರಚಾರಕರು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.