ವಚನ ಸಾಹಿತ್ಯ ಸಂರಕ್ಷಣೆಯಲ್ಲಿಮಾಚಿದೇವರ ಪಾತ್ರ ಅಮೋಘ


Team Udayavani, Feb 2, 2018, 1:55 PM IST

bid-6.jpg

ಬೀದರ: ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಾಹಿತ್ಯವೆನಿಸಿದ ವಚನ ಸಾಹಿತ್ಯ ಸಂರಕ್ಷಿಸುವಲ್ಲಿ ಶರಣ ಮಡಿವಾಳ ಮಾಚಿದೇವರ ಪಾತ್ರ ಅಮೋಘವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಹೇಳಿದರು. ನಗರದ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗುರುವಾರ ನಡೆದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತಿನ ಮೊದಲ ಸಂಸತ್ತು ಎನಿಸಿದ ಬಸವಕಲ್ಯಾಣದ ಅನುಭವ ಮಂಟಪ ನಿರ್ಮಿಸುವಲ್ಲಿಯೂ ಮಡಿವಾಳ ಮಾಚಿದೇವರ ಪಾತ್ರ ಹೆಚ್ಚಿದೆ. ಅವರು ಶರಣರ ಬಟ್ಟೆಗಳನ್ನು ಶುಚಿಗೊಳಿಸುವ ಕಾಯಕದ ಜೊತೆಗೆ ಸಮಾಜದಲ್ಲಿರುವ ಓರೆ-ಕೋರೆಗಳನ್ನು ನಿವಾರಿಸಲು ಪ್ರಯತ್ನಿಸಿದ್ದರು. ಅವರು ತೋರಿಸಿದ ಮಾರ್ಗವನ್ನು ಎಲ್ಲರೂ ಅನುಸರಿಸಬೇಕಿದೆ ಎಂದು ಹೇಳಿದರು.

ಶಾಸಕರು ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಮ್‌ ಖಾನ್‌ ಮಾತನಾಡಿ, ಮಡಿವಾಳ ಸಮಾಜದವರು ಶ್ರಮಜೀವಿಗಳು. ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ ಉತ್ತಮ ಹುದ್ದೆಗಳನ್ನು ಪಡೆಯಲು ಉತ್ತೇಜನ ನೀಡಬೇಕು. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಪ್ರಗತಿ ಕಾಣಲು ಯತ್ನಿಸಬೇಕು ಎಂದು ಕರೆ ನೀಡಿದರು. 

ವಿಧಾನ ಪರಿಷತ್‌ ಸದಸ್ಯ ರಘುನಾಥ ಮಲ್ಕಾಪುರೆ ಮಾತನಾಡಿ, ಮಡಿವಾಳ ಸಮಾಜದವರ ಅನುಕೂಲಕ್ಕಾಗಿ ಶುಕ್ಲತೀರ್ಥದ ಬಳಿ ಸುಮಾರು 8.5 ಲಕ್ಷ ರೂ. ವೆಚ್ಚದಲ್ಲಿ ಧೋಬಿ ಘಾಟ್‌ ನಿರ್ಮಿಸಲಾಗಿದೆ. ಸಭೆ, ಸಮಾರಂಭಗಳನ್ನು ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಮಡಿವಾಳ ಸಮಾಜ ಭವನ ನಿರ್ಮಾಣಕ್ಕೆ ತಮ್ಮ ಅನುದಾನದಲ್ಲಿ 10 ಲಕ್ಷ ರೂ.ಗಳ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ| ಹುಗ್ಗಿ ಪಾಟೀಲ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ ಮಾತನಾಡಿದರು. ನಗರ ಸಭೆ ಅಧ್ಯಕ್ಷೆ ಶಾಲಿನಿ ರಾಜು ಚಿಂತಾಮಣಿ, ಜಿಪಂ ಸದಸ್ಯೆ ಗೀತಾ ಪಂಡಿತರಾವ್‌ ಚಿದ್ರಿ, ಜಿಲ್ಲಾಧಿಕಾರಿ ಡಾ| ಎಚ್‌.ಆರ್‌.ಮಹಾದೇವ, ಮಡಿವಾಳ ಸಮಾಜದ ಮುಖಂಡರಾದ ಬಾಬುರಾವ್‌ ಮಡಿವಾಳ, ಧನರಾಜ ಮಡಿವಾಳ, ಶಿವಕುಮಾರ ಕಂದಗುಳೆ, ಸುಭಾಷ ಮಡಿವಾಳ, ಸಿದ್ರಾಮಪ್ಪ ಮಡಿವಾಳ, ದಶರಥ, ರಾಜು ಮಡಿವಾಳ, ಲಿಂಗಪ್ಪ ಮಡಿವಾಳ, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. 

ರಾಕಾ ಮಲ್ಕಾಪುರೆ ತಂಡದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ
ರಾಜಶೇಖರ ವಟಗೆ ಸ್ವಾಗತಿಸಿದರು. ಪ್ರಾಂಶುಪಾಲ ಚನ್ನಬಸವ ಹೇಡೆ ನಿರೂಪಿಸಿದರು.

ಜೀವನ ತತ್ವ ಅನುಷ್ಠಾನಕ್ಕೆ ತನ್ನಿ ಹನ್ನೆರಡನೇ ಶತಮಾನದಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವೆನಿಸಿದ ಸಾಮಾಜಿಕ ಕ್ರಾಂತಿ
ಬಸವಕಲ್ಯಾಣದಲ್ಲಿ ನಡೆದಿತ್ತು. ಸಮಾನತೆ, ಜಾತೀಯತೆ ನಿರ್ಮೂಲನೆ, ಸ್ತ್ರೀಯರಿಗೆ ಸ್ವಾತಂತ್ರ್ಯ ಕಲ್ಪಿಸಲು ಯತ್ನಿಸಲಾಗಿತ್ತು. ವಚನಗಳ ಸಂರಕ್ಷಣೆಗೆ ಮಡಿವಾಳ ಮಾಚಿದೇವರು ಮಹಾ ತ್ಯಾಗ ಮಾಡಿದ್ದರು. ಅವರ ಜೀವನ ತತ್ವಗಳನ್ನು ಅನುಷ್ಠಾನಕ್ಕೆ ತರಲು ಪ್ರತಿಯೊಬ್ಬರು ಯತ್ನಿಸಬೇಕಿದೆ.
●ಪ್ರೊ| ಹುಗ್ಗಿ ಪಾಟೀಲ‌, ಉಪನ್ಯಾಸಕ
 

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.