ಆರಂಭಕ್ಕೂ ಮುನ್ನ ಪಾಳುಬಿದ್ದ ಎಸ್‌ಟಿಪಿ ಘಟಕ

2013ರಿಂದ ಈವರೆಗೆ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮವಹಿಸಬೇಕು.

Team Udayavani, Feb 15, 2021, 5:49 PM IST

ಆರಂಭಕ್ಕೂ ಮುನ್ನ ಪಾಳುಬಿದ್ದ ಎಸ್‌ಟಿಪಿ ಘಟಕ

ಹುಮನಾಬಾದ: ಬಹು ಕೋಟಿ ವೆಚ್ಚದಲ್ಲಿ ತಾಲೂಕಿನ ಧುಮ್ಮನಸೂರ್‌ ವಲಯದಲ್ಲಿ ನಿರ್ಮಾಣಗೊಂಡ ಯುಜಿಡಿ ಕಾಮಗಾರಿಯ ಎಸ್‌ಟಿಪಿ ಪ್ರಾರಂಭಕ್ಕೂ
ಮುನ್ನವೇ ಪಾಳು ಬಿದ್ದಿದೆ. ಪಟ್ಟಣದ 27 ವಾರ್ಡ್‌ಗಳ ತ್ಯಾಜ್ಯ ನೀರು ಸಂಸ್ಕರಿಸಿ ಪುನರ್‌ ಬಳಕೆಗೆ ಅನುವಾಗುವಂತೆ ಮಾಡುವ ಉದ್ದೇಶದಿಂದ ಸ್ಥಾಪನೆಗೊಂಡಿರುವ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ)ವು ನಿರ್ವಹಣೆ ಕೊರತೆ ಹಾಗೂ ತ್ಯಾಜ್ಯ ನೀರಿನ ಕೊರತೆಯಿಂದ
ನಲಗುವಂತಾಗಿದೆ.

ಈ ಘಟಕ ಪ್ರತಿ ದಿನ 6 ಎಂಎಲ್‌ಡಿ ನೀರಿನ ಸಂಸ್ಕರಣಾ ಸಾಮರ್ಥ್ಯ ಹೊಂದಿದ್ದು, ಈ ವರೆಗೆ ಪಟ್ಟಣದ ಯಾವ ಬಡಾವಣೆಯಿಂದ ಹನಿ ಕೊಳಚೆ ನೀರು ಈ ಘಟಕಕ್ಕೆ ಬಿದ್ದಿಲ್ಲ. ಕಾರಣ ಇಂದಿಗೂ ವಾಡ್‌ವಾರು ಪ್ರಾಯೋಗಿಕ ಪರೀಕ್ಷೆಯೇ ನಡೆದಿಲ್ಲ. ಪಟ್ಟಣದ ಎಲ್ಲ ಕಡೆಗಳಲ್ಲಿ ರಸ್ತೆ ಅಗೆದು ಒಳಚರಂಡಿಗಾಗಿ ಪೈಪ್‌ಲೈನ್‌ ಮಾಡಲಾಗಿದೆ. ಆ ಪೈಪ್‌ ಲೈನ್‌ಗೆ ಪುರಸಭೆ ವತಿಯಿಂದ ಸಂಪರ್ಕ ಕಲ್ಪಿಸುವ ಕೆಲಸ ಇಂದಿಗೂ ಬಾಕಿ ಇದೆ. ಎಲ್ಲ ಕಡೆಗಳಿಂದ ಬರುವ ಕೊಳಚೆ ನೀರು ಜೇರಪೇಟ್‌ ಹೊರ ಪ್ರದೇಶದಲ್ಲಿ ಹಾಗೂ ಎಂಪಿ ಬಡಾವಣೆ ಹೊರ ಪ್ರದೇಶದಲ್ಲಿಸೇರುವಂತೆ ಮಾಡಿದ್ದು, ಅಲ್ಲಿಂದ ಪಂಪಿಂಗ್‌ ಮಾಡಿ ಎಸ್‌ಟಿಪಿಗೆ ಸೇರಬೇಕು. ಗುತ್ತಿಗೆದಾರ ಮೋಹನ ಅವರ ಪ್ರಕಾರ ಈಗಾಗಲೇ ಅಧಿಕಾರಿಗಳ ಎದುರಿಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ತೋರಿಸಲಾಗಿದೆ, ಸಂಬಂ  ಧಿಸಿದ ಎಲ್ಲ ದಾಖಲೆಗಳು ಇವೆ ಎಂದು ಹೇಳುತ್ತಿದ್ದಾರೆ. ಆದರೆ ಪ್ರಾಯೋಗಿಕ ಪರೀಕ್ಷೆ ನಡೆಸಿದರೆ ಎಸ್‌ಟಿಪಿ ಘಟಕದಲ್ಲಿ ಗಿಡ-ಮರಗಳು ಏಕೆ ಬೆಳೆದು ನಿಂತಿವೆ?
ಎಂದು ಪುರಸಭೆ ಸದಸ್ಯರು ಪ್ರಶ್ನಿಸುತ್ತಿದ್ದಾರೆ.

7 ವರ್ಷಗಳ ಕಾಲ ನಡೆದ ಯುಜಿಡಿ ಕಾಮಗಾರಿ ಪೂರ್ಣಗೊಂಡಿಲ್ಲ. ವಿವಿಧೆಡೆ ಕಾಮಗಾರಿ ಕಳಪೆಯಾಗಿದೆ. ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳುತ್ತಿರುವ ಗುತ್ತಿಗೆದಾರರು ಪುರಸಭೆಗೆ ಏಕೆ ದಾಖಲೆ ಸಲ್ಲಿಸಿ ಹಸ್ತಾಂತರಿಸಿಲ್ಲ. ಯಾವ ಕಾರಣಕ್ಕೆ ಬೆಂಗಳೂರಿನ ಕೆಯುಐಡಿಎಫ್‌ಸಿ ಅ ಧಿಕಾರಿಗಳಿಗೆ
ಸಂಪರ್ಕ ಮಾಡಿ ವರದಿಗಳು, ಸಂಬಂಧಿ ಸಿದ ದಾಖಲೆಗಳು ಸಲ್ಲಿಸಿ ಕಾಮಗಾರಿ ಪೂರ್ಣಗೊಂಡಿದೆ ಎಂದು ವರದಿ ಪಡೆದಿದ್ದಾರೆ. ಮೊದಲು ಎಲ್ಲ ವಾರ್ಡ್‌ಗಳಿಂದ ಪ್ರಾಯೋಗಿಕ ಪರೀಕ್ಷೆ ನಡೆಸಿ ಪರೀಕ್ಷೆ ವಿಫಲಗೊಂಡರೆ 2013ರಿಂದ ಈವರೆಗೆ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮವಹಿಸಬೇಕು.
ಎಸ್‌.ಎ. ಬಾಸಿದ್‌, ಪುರಸಭೆ ಸದಸ್ಯ

ಒಳಚರಂಡಿ ಕಾಮಗಾರಿ ಪಟ್ಟಣದ ಜನರಿಗೆ ಅನುಕೂಲ ಆಗಬೇಕಿತ್ತು. ಆದರೆ ವಿವಿಧೆಡೆ ನಡೆದಿರುವ ಕಾಮಗಾರಿ ನೋಡಿದರೆ ಪೂರ್ಣ ಪ್ರಮಾಣದಲ್ಲಿ ಯೋಜನೆ ಯಶಸ್ವಿಯಾಗುವುದು ಬಹುತೇಕ ಅನುಮಾನ. ಕಾಮಗಾರಿ ಸಂದರ್ಭದಲ್ಲಿ ಸಂಬಂಧಪಟ್ಟವರು ನಿಗಾ ವಹಿಸಿದರೆ ಇಂದು ಯೋಜನೆ ಆರಂಭಗೊಂಡು ಜನರಿಗೆ
ಲಾಭವಾಗುತ್ತಿತ್ತು. ಇದೀಗ ಯುಜಿಡಿ ಎಸ್‌ಟಿಪಿ   ಘಟಕ ಸಂಪೂರ್ಣ ಹಾಳಾದಂತೆ ಕಂಡು ಬರುತ್ತಿದೆ. ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಹಿರಿಯ ಅಧಿ ಕಾರಿಗಳು
ಮುಂದಾಗಬೇಕು.

ಗಿರೀಶ ಮಾಲಿಪಾಟೀಲ, ಪುರಸಭೆ ಮಾಜಿ ಸದಸ್ಯರು ಹಾಗೂ ಬಿಜೆಪಿ ನಗರ ಅಧ್ಯಕ್ಷರು

ಪಟ್ಟಣದಲ್ಲಿ ನಡೆದ 28 ಕೋಟಿಗೂ ಅಧಿಕ ಮೊತ್ತದ ಯುಜಿಡಿ ಕಾಮಗಾರಿ 2019ರಲ್ಲಿ ಪೂರ್ಣಗೊಂಡಿದ್ದು, ಒಂದು ವರ್ಷದ ನಿರ್ವಹಣೆ ಅಧಿವ  ಕೂಡಮುಗಿದಿದೆ ಎಂದು ಗುತ್ತಿದಾರರು ಹೇಳುತ್ತಿದ್ದಾರೆ. ಕಾಮಗಾರಿ ಪೂರ್ಣಗೊಂಡಿರುವ ಕುರಿತು ಪುರಸಭೆ ಅಧಿಕಾರಿ ದಾಖಲೆಗಳಿಗೆ ಸಹಿ ಹಾಗೂ ಚಿತ್ರಗಳು ಇರುವ ಬಗ್ಗೆ ಕೆಯುಐಡಿಎಫ್‌ಸಿ ಇಲಾಖೆ ದಾಖಲೆಗಳು ಹೇಳುತ್ತಿವೆ. ಜಿಲ್ಲಾಧಿಕಾರಿಗಳು ಈ ಕುರಿತು ಸಮಗ್ರ ತನಿಖೆ ನಡೆಸಬೇಕು.
ಮಹೇಶ ಅಗಡಿ, ಪುರಸಭೆ ಮಾಜಿ
ಸದಸ್ಯರು ಹಾಗೂ ಜೆಡಿಎಸ್‌ ತಾಲೂಕು ಅಧ್ಯಕ್ಷ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.