ಪಾಳುಬಿದ್ದ ತಹಶೀಲ್ದಾರ್‌ ವಸತಿಗೃಹ


Team Udayavani, Dec 21, 2019, 12:24 PM IST

bidar-tdy-1

ಹುಮನಾಬಾದ: ಪಟ್ಟಣದ ತಹಶೀಲ್ದಾರ್‌ ವಾಸ್ತವ್ಯದ ವಸತಿಗೃಹ ನಿರ್ವಹಣೆ ಕೊರತೆಯಿಂದ ಕಳೆದ ಒಂದು ವರ್ಷದಿಂದ ಬಳಕೆ ಇಲ್ಲದೇ ಪಾಳು ಬಿದ್ದಿದೆ.

ಕಳೆದ 3 ದಶಕದ ಹಿಂದೆ ನಿರ್ಮಿಸಲಾದ ಕಟ್ಟಡದಲ್ಲಿ ಕಳೆದೊಂದು ವರ್ಷದ ಹಿಂದಿನವರೆಗೆ ಅಂದರೆ ಮೂರು ವರ್ಷಕ್ಕೂ ಅಧಿಕ ಅವಧಿ ಯವರೆಗೆ ಸೇವೆ ಸಲ್ಲಿಸಿದ್ದ ತಹಶೀಲ್ದಾರ್‌ ಡಿ.ಎಂ. ಪಾಣಿ ಹಳೆಯ ಗೋಡೆಗಳಿಗೆ ಪಿಒಪಿ ಮಾಡಿಸಿ, ಹೊಸ ಬಣ್ಣ ಬಳಿಸಿದ್ದಾರೆ. ತಮ್ಮ ಇತಿಮಿತಿಯಲ್ಲಿ ಸಾಧ್ಯವಾದಷ್ಟು ದುರಸ್ತಿ ಕೈಗೊಂಡು ಈ ಕಟ್ಟಡದಲ್ಲೇ ಉಳಿದುಕೊಂಡಿದ್ದರು.

ಆದರೆ ಡಿ.ಎಂ. ಪಾಣಿ ಇಲ್ಲಿಂದ ಚಿತ್ತಾಪುರಕ್ಕೆ ವರ್ಗವಾಗಿ ಹೋದ ನಂತರ ಆ ಸ್ಥಾನಕ್ಕೆ ಬಂದಿರುವ ತಹಶೀಲ್ದಾರ್‌ ನಾಗಯ್ಯಸ್ವಾಮಿ ಹಿರೇಮಠ ಆ ಕಟ್ಟಡ ಬಳಕೆಗೆ ಯೋಗ್ಯವಿಲ್ಲವೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದ ಪಕ್ಕದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ಉಳಿದುಕೊಂಡಿದ್ದಾರೆ.

ಉಂಡಾಡಿಗಳ ತಾಣ: ತಹಶೀಲ್ದಾರ್‌ ಇದ್ದಾಗಲೇ ರಾತ್ರಿ ಸಮಯದಲ್ಲಿ ಆ ಕಟ್ಟಡದ ಆಸುಪಾಸು ಉಂಡಾಡಿಗಳು ಕುಳಿತು ಜೂಜು ಆಡುವುದು, ಮದ್ಯ ಸೇವಿಸುವುದು ಸೇರಿದಂತೆ ವ್ಯರ್ಥ ಕಾಲಹರಣ ಮಾಡುತ್ತಿದ್ದರು. ಈಗ ಯಾರೂ ಇಲ್ಲದಿರುವುದು ಉಂಡಾಡಿಗಳಿಗೆ ಅನುಕೂಲವಾಗಿದೆ. ಹಗಲು-ರಾತ್ರಿ ಎನ್ನದೇ ನಿತ್ಯ ಅನೇಕರು ವಸತಿಗೃಹ ಬಾಗಿಲು, ಕಿಟಕಿ ಸಂಪೂರ್ಣ ಮುರಿದು ದುಶ್ಚಟಗಳನ್ನು ಮಾಡುವ ಅಡ್ಡೆಯನ್ನಾಗಿ ಮಾಡಿಕೊಂಡಿದ್ದಾರೆ.

ಮುರಿದ ಪರಿಕರ: ವಸತಿಗೃಹದಲ್ಲಿನ ಸ್ನಾನ ಕೋಣೆಯಲ್ಲಿ ನಲ್ಲಿ, ವಿವಿಧ ಪರಿಕರ ಅಲ್ಲದೇ ವಿದ್ಯುತ್‌ ವೈರಿಂಗ್‌ ಕಿತ್ತು ಬಲ್ಬ್ಗಳನ್ನು ಒಡೆದಿದ್ದಾರೆ. ಶೌಚಾಲಯದಲ್ಲಿ ಅಳವಡಿಸಿದ್ದ ಎಲ್ಲ ಪರಿಕರಗಳು ಒಡೆದು ಹಾಳಾಗಿವೆ. ಕೋಣೆಯಲ್ಲಿ ನೋಡಿದಲ್ಲೆಲ್ಲ ಸಿಗರೇಟ್‌ ಪ್ಯಾಕೆಟ್‌, ಮದ್ಯದ ಬಾಟಲ್‌ಗ‌ಳು ಸೇರಿದಂತೆ ಇತರೆ ನಿರುಪಯುಕ್ತ ವಸ್ತುಗಳೇ ರಾರಾಜಿಸುತ್ತವೆ.

ವಿಷಜಂತುಗಳ ಹಾವಳಿ: ವಸತಿಗೃಹ ಪ್ರಾಂಗಣದಲ್ಲಿ ಗಿಡಗಂಟಿ ಬೆಳೆದ ಹಿನ್ನೆಲೆಯಲ್ಲಿ ಆಗಾಗ ವಿಷ ಜಂತುಗಳು-ಹಂದಿಗಳು ಕಾಣಿಸಿಕೊಳ್ಳುತ್ತವೆ ಸಾರ್ವಜನಿಕರು ಹೇಳುತ್ತಾರೆ. ನಸುಕಿನ ಜಾವ ಮತ್ತು ರಾತ್ರಿ ಸಮಯದಲ್ಲಿ ತಾಲೂಕು ದಂಡಾಧಿಕಾರಿಗಳ ವಸತಿಗೃಹ ಪ್ರಾಂಗಣ ಸಾರ್ವಜನಿಕ ಶೌಚಾಲಯವಾಗಿ ಬಳಕೆಯಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈವರೆಗಿನ ಅನೇಕ ತಹಶೀಲ್ದಾರ್‌ಗೆ ಆಶ್ರಯತಾಣವಾಗಿದ್ದ ವಸತಿಗೃಹವೀಗ ನಿರ್ವಹಣೆ ಕೊರತೆಯಿಂದ ಹಾಳಾಗಿದೆ.

ಈಗಿರುವ ಸ್ಥಿತಿಯಲ್ಲಿ ದುರಸ್ತಿ ಕೈಗೊಳ್ಳದಿದ್ದರೆ ವರ್ಷದೊಳಗೆ ಸಂಪೂರ್ಣ ಶಿಥಿಲಾವಸ್ಥೆ ತಲುಪುತ್ತದೆ. ಆದ್ದರಿಂದ ಕಟ್ಟಡ ನೆಲ ಕಚ್ಚುವ ಮುನ್ನ ಬಳಕೆ ಅನುಕೂಲ ಮಾಡಿಕೊಡಬೇಕೆಂಬುದು ಸಾರ್ವಜನಿಕರ ಒತ್ತಾಸೆ.

 

-ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.