ಕನ್ನಡಪರ ಸರ್ಕಾರ ಬರುವ ತನಕ ಹೋರಾಟ ನಿರಂತರ


Team Udayavani, Nov 22, 2021, 1:30 PM IST

14kannada

ಆಲಮೇಲ: ಕರ್ನಾಟಕದಲ್ಲಿ ಕನ್ನಡ ಪರವಾಗಿ ಯಾವುದೆ ಸರ್ಕಾರಗಳು ಕೆಲಸ ಮಾಡುತ್ತಿಲ್ಲ. ರಾಷ್ಟ್ರೀಯ ಪಕ್ಷಗಳು ರಾಷ್ಟ್ರೀಯವಾದಿಗಳಂತೆ ವರ್ತಿಸುತ್ತಿಸುವ ಮೂಲಕ ಕನ್ನಡ ಬೆಳವಣಿಗೆ ನಿರ್ಲಕ್ಷಸಿವೆ. ಕನ್ನಡ ಪರವಾಗಿ ಕೆಲಸ ಮಾಡುವ ಸರ್ಕಾರ ಬರುವತನಕ ನಿರಂತರ ಹೋರಾಟ ಮಾಡುತ್ತೇವೆ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಶೆಟ್ಟಿ ಹೇಳಿದರು.

ಪಟ್ಟಣದ ಫೀರ ಗಾಲಿಬ ಸಾಬ ಉರೂಸ್‌ ನಿಮಿತ್ತ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಆಲಮೇಲ ತಾಲೂಕು ಘಟಕ ಸಹಯೋಗದಲ್ಲಿ ನಡೆದ ಕನ್ನಡ ಉತ್ಸವ ಮತ್ತು ಪುನೀತ್‌ರಾಜಕುಮಾರ ನುಡಿ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ವಿವಿದ ರಾಜ್ಯಗಳು ರಾಜಕಾರಣಿಗಳು ತಮ್ಮ ರಾಜ್ಯದ ಹಿತಾಸಕ್ತಿಗಳು ಕಾಪಾಡುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ರಾಷ್ಟೀಯ ಪಕ್ಷಗಳು ಆಳ್ವಿಕೆ ಮಾಡುತ್ತಿದ್ದು ಕನ್ನಡದ ಎಲ್ಲ ರಂಗದ ಬೆಳವಣಿಗೆ ನಿರ್ಲಕ್ಷಿಸುತ್ತಿದೆ. ಕನ್ನಡ ಪರವಾಗಿ ಕೆಲಸ ಮಾಡುವಂತ ಸರ್ಕಾರ ಬರುವಂತೆ ಮಾಡಲು ಕನ್ನಡಪರ ಸಂಘಟನೆ ನಿರಂತರ ಹೋರಾಟ ಮಾಡಲಿದೆ ಎಂದರು.

ಕನ್ನಡ ಭಾಷೆ, ನೆಲ, ಜಲ ಸಮಗ್ರ ಕರ್ನಾಟಕದ ರಕ್ಷಣೆಗಾಗಿ ಕನ್ನಡಪರ ಸಂಘಟನೆ ಹೋರಾಟ ಮಾಡುತ್ತಿದ್ದರೆ ನಮ್ಮ ಸಂಘಟನೆಯನ್ನು ಹತ್ತಿಕಲು ಅನೇಕ ಪ್ರಕರಣಗಳು ದಾಖಲಿಸಿ ಮೂಲೆಗುಂಪು ಮಾಡುವ ಹುನ್ನಾರ ನಡೆದಿದೆ. ರಾಷ್ಟ್ರೀಯ ರಾಜಕೀಯ ಪಕ್ಷಗಳು ಕನ್ನಡಪರ ಸಂಘಟನೆ ಕಾರ್ಯಕರ್ತರ ಮೇಲೆ ಎಷ್ಟೇ ಪ್ರಕರಣ ದಾಖಲಿಸಿದರು ಹೋರಾಟ ನಿಲ್ಲಿಸುವುದಿಲ್ಲ. ರೈತ ಸಂಘ ಸೇರಿದಂತೆ ಕೆಲವು ಸಂಘಟನೆಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಸರ್ಕಾರ ಹಿಂಪಡೆಯುತ್ತಿದೆ. ಆದರೆ ಕನ್ನಡಪರ ಸಂಘಟನೆಗಳ ಮೇಲೆ ದಾಖಲಿಸಿರುವ ಯಾವುದೇ ಪ್ರಕರಣಗಳು ಹಿಂಪಡೆಯುತ್ತಿಲ್ಲ ಎಂದರು.

ಕನ್ನಡದ ಬಗ್ಗೆ ಅಗೌರವದಿಂದ ಮಾತನಾಡುವ ಯಾರನ್ನೂ ಸುಮ್ಮನೆ ಬಿಡುವುದಿಲ್ಲ. ಕನ್ನಡದ ಬಗ್ಗೆ ಅಗೌರವ ತೋರಿದ ಗೂಗಲ್‌ ವಿರುದ್ಧ ಹೋರಾಟ ಮಾಡಿದ ಫಲದಿಂದ ಕ್ಷಮೆ ಕೇಳಿದೆ. ಅದು ಕನ್ನಡಪರ ಸಂಘಟನೆ ಹೋರಾಟದಿಂದ. ಹಾಗೆ ರೈಲ್ವೆ ಡಿ ದರ್ಜೆ ನೌಕರರಿಗೆ ಕನ್ನಡದಲ್ಲಿಯೆ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದ್ದು ಕನ್ನಡಪರ ಸಂಘಟನೆ ಹೋರಾಟದಿಂದ ಎಂದರು.

ನಮ್ಮ ಜೊತೆಯಲ್ಲಿದ್ದು ತಾನು ಮಾಡಿದ ಸಹಾಯ ಯಾರಿಗೂ ಗೊತ್ತಾಗದ ರೀತಿಯಲ್ಲಿ ಅನೇಕ ಬಡವರಿಗೆ, ಅನಾಥರಿಗೆ ಆಶ್ರಯದಾತನಾಗಿದ್ದ ಕನ್ನಡದ ಶ್ರೇಷ್ಠ ನಟ ಪುನೀತ್‌ ರಾಜಕುಮಾರ ಅವರ ನಡೆ ಅನೇಕ ನಟರಿಗೆ, ಶ್ರೀಮಂತರಿಗೆ ಪ್ರೇರಣೆಯಾಗಿದೆ. ಅವರ ಮಾಡುವ ಕೆಲಸ ವಿದೇಶಗಳಲ್ಲಿಯೂ ಪ್ರೇರಣೆಯಾಗಿದೆ. ಅವರು ಮೃತರಾಗಿರಬಹುದು ಅವರು ಮಾಡಿರುವ ಸಹಾಯ, ಸಾಧನೆಗಳು ಜನರ ಮನಸಿನಲ್ಲಿ ಶಾಶ್ವತವಾಗಿ ಜೀವಂತವಾಗಿರಲಿವೆ ಎಂದರು.

ಸಾನ್ನಿಧ್ಯ ವಹಿಸಿದ್ದ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ಕಾನಿಪ ತಾಲೂಕಾಧ್ಯಕ್ಷ ಸೈಯದ್‌ ದೇವರಮನಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಮಾತನಾಡಿದರು. ತಾಲೂಕು ಸರಕಾರಿ ನೌಕರ ಸಂಘದ ಅಧ್ಯಕ್ಷ ಆನಂದ ಭೂಸನೂರ, ಕರವೇ ತಾಲೂಕಾಧ್ಯಕ್ಷ ಅಶೋಕ ಭೂಸನೂರ, ಗುಂಡು ಕರುಟೆ, ಈರಣ್ಣ ತೆಲ್ಲೂರ, ಸಂತೋಷ ಉಪ್ಪಿನ ಇದ್ದರು. ನಂತರ ವಿವಿಧ ಕಲಾವಿದರಿಂದ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.