ವೀರಭದ್ರೇಶ್ವರ ಜಾತ್ರೆಗೂ ಕೋವಿಡ್ ಛಾಯೆ

ಈ ವರ್ಷ ಶಾಲು ಹೊದಿಸುವ ಕಾರ್ಯಕ್ಕೂ ನಿಷೇಧಿಸಲಾಗಿದೆ.

Team Udayavani, Jan 26, 2021, 4:49 PM IST

ವೀರಭದ್ರೇಶ್ವರ ಜಾತ್ರೆಗೂ ಕೋವಿಡ್ ಛಾಯೆ

ಹುಮನಾಬಾದ: ಪ್ರತಿ ವರ್ಷ ಲಕ್ಷಾಂತರ ಭಕ್ತರ ಮಧ್ಯೆ ನಡೆಯುತ್ತಿದ್ದ ಕುಲದೇವ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ
ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಹೀಗಾಗಿ ಜಾತ್ರೆ ಕಳೆ ಕಳೆದುಕೊಂಡಂತಾಗಿದೆ. ನಿಜಾಮ್‌ ಆಳ್ವಿಕೆಯಲ್ಲಿಯೂ ವೈಭವದಿಂದ ನಡೆದ ಇಲ್ಲಿನ ಜಾತ್ರೆ ಈ ವರ್ಷ ಕಣ್ಣಿಗೆ ಕಾಣದ ವೈರಸ್‌ನಿಂದ ಭಕ್ತರ ಭಕ್ತಿಗೆ ಭಂಗ ತಂದಿದೆ.

ಕೋವಿಡ್  ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ವೀರಭದ್ರೇಶ್ವರ ಜಾತ್ರೆ ಆಚರಣೆ ರದ್ದು ಮಾಡಿ ಆದೇಶ ಹೊರಡಿಸಿದ್ದು, ಸಾರ್ವಜನಿಕರ ಭಕ್ತಿಗೆ ಮಂಕು ಬಡಿದಂತಾಗಿದೆ. ಶಾಸಕ ರಾಜಶೇಖರ ಪಾಟೀಲ ಮುಂದಾಳತ್ವದಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕಲ್ಪಿಸಬೇಕೆಂಬ ಒತ್ತಾಯ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ ಎಂದು ಭಕ್ತರು ಹೇಳುತ್ತಿದ್ದಾರೆ.

ಜ.14ರಿಂದ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಅತೀ ಸರಳವಾಗಿ ವೀರಭದ್ರೇಶ್ವರ ಪಲ್ಲಕ್ಕಿ ಉತ್ಸವ ನಡೆಸಲಾಗುತ್ತಿದ್ದು, ಪಟ್ಟಣದಲ್ಲಿ ಜಾತ್ರೆಯ ಕಳೆ ಎಲ್ಲಿಯೂ ಕಂಡು ಬಂದಿಲ್ಲ. ಪ್ರತಿ ವರ್ಷ ಪಟ್ಟಣದ ಎಲ್ಲೆಡೆ ಹತ್ತಾರು ಕಮಾನು ಹಾಕಿ ಭಕ್ತರಿಗೆ ಸ್ವಾಗತ ಕೋರಲಾಗುತ್ತಿತ್ತು. ಅಲ್ಲದೇ ಪಟ್ಟಣಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ವಿವಿಧೆಡೆ ಅನ್ನ ದಾಸೋಹ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ, ಈ ವರ್ಷ ಯಾವುದೇ ಕಾರ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲದ ಕಾರಣ ಕೇವಲ ಧಾರ್ಮಿಕ ಆಚರಣೆಗಳು ನಡೆಯಲಿವೆ. ಅದೂ ಸರಳವಾಗಿ ಆಚರಣೆ ಮಾಡಿ ಪರಂಪರೆ ಉಳಿಸುವ ಕೆಲಸ ನಡೆದಿದೆ.

ಜಾತ್ರೆ ನಿಮಿತ್ತ ವೀರಭದ್ರೇಶ್ವರ ಉತ್ಸವ ಮೂರ್ತಿಗೆ ಭಕ್ತರು ಶಾಲು ಹೊದಿಸಿ, ನೈವೇದ್ಯ ಅರ್ಪಿಸುವ ವಾಡಿಕೆ ಬೆಳೆದು ಬಂದಿದ್ದು, ಪಟ್ಟಣದ ಪ್ರತಿಯೊಂದು ಮನೆಯವರು ಅಲ್ಲದೇ, ರಾಜ್ಯ-ಹೊರ ರಾಜ್ಯದ ಸಾವಿರಾರು ಸಂಖ್ಯೆಯ ಕುಟುಂಬಗಳ ಜನರು ಕಡ್ಡಾಯವಾಗಿ ಶಾಲು ಹೊದಿಸುವ ಪ್ರತೀತಿ ಇದೆ. ಈ ವರ್ಷ ಶಾಲು ಹೊದಿಸುವ ಕಾರ್ಯಕ್ಕೂ ನಿಷೇಧಿಸಲಾಗಿದೆ. ದೇವಸ್ಥಾನ ಸುತ್ತಲಿನ ಪ್ರದೇಶದಲ್ಲಿನ ತೆಂಗಿನಕಾಯಿ ಅಂಗಡಿಗಳು ಮುಚ್ಚಿಸಲಾಗಿದೆ. ಆಟಿಕೆಗಳು ಸೇರಿದಂತೆ ಯಾವುದೇ ತರಹದ ಅಂಗಡಿ ಹಾಕದಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ಬಂದ ಬೀದಿ ವ್ಯಾಪಾರಿಗಳು ನಿರಾಸೆಯಿಂದ ಮರಳಿ ಊರಿನತ್ತ
ತೆರಳಿರುವುದು ಕಂಡು ಬಂತು.

ಸೂಕ್ತ ಬಂದೋಬಸ್ತ್
ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತವಾಗಿ ಜಿಲ್ಲಾ ಪೊಲೀಸ್‌ ವತಿಯಿಂದ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. 7 ಸಿಪಿಐ, 22 ಪಿಎಸ್‌ಐ, 47 ಎಎಸ್‌ಐ ಸೇರಿದಂತೆ 500ಕ್ಕೂ ಅಧಿಕ ಸಿಬ್ಬಂದಿ ನೇಮಕ ಮಾಡಲಾಗಿದೆ.

ವಾಹನ ಪ್ರವೇಶ ನಿಷೇಧ
ಪಟ್ಟಣದಲ್ಲಿ ಜ.26 ರಾತ್ರಿವರೆಗೆ ಬೇರೆ ಕಡೆಗಳಿಂದ ಬರುವ ವಾಹನಗಳಿಗೆ ಪಟ್ಟಣದಲ್ಲಿ ಪ್ರವೇಶಕ್ಕೆ ನಿಷೇಧಿ ಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ
ನೀಡಿದ್ದಾರೆ.

*ಧುರ್ಯೋಧನ ಹೂಗಾರ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.