ವಿವಿಧೆಡೆ ಕಳ್ಳತನ: 2.20 ಲಕ್ಷ ಮೌಲ್ಯದ ವಸ್ತು-ಹಣ ಜಪ್ತಿ
Team Udayavani, Aug 9, 2022, 5:25 PM IST
ಭಾಲ್ಕಿ: ಪಟ್ಟಣದ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಒಟ್ಟು ಎಂಟು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಕಳ್ಳರನ್ನು ಬಂಸಿರುವ ಭಾಲ್ಕಿ ಪೊಲೀಸರು, ಒಟ್ಟು 2.20 ಲಕ್ಷ ರೂ. ಮೌಲ್ಯದ ವಸ್ತು, ಹಣ ಜಪ್ತಿ ಮಾಡಿದ್ದಾರೆ.
ಭಾಲ್ಕಿ ಹಿರೇಮಠ ಗಲ್ಲಿಯ ನಿವಾಸಿಗಳಾದ ಆರೋಪಿ ಬಸವರಾಜ ಶರಣಪ್ಪ ಮಾನೆ, ಪ್ರಕಾಶ ಮಾನೆ, ಅಂಕುಶ ತುಕಾರಾಮ ಅವರು ದಿಲೀಪ ಸಂಗಶೆಟ್ಟಿ ಕುಡತೆ ಅವರ ಹೊಲದಲ್ಲಿ ಮೇ ತಿಂಗಳಲ್ಲಿ ನಡೆದಿದ್ದ ಸುಮಾರು 1.07 ಲಕ್ಷ ರೂ. ಮೌಲ್ಯದ ಮೋಟಾರ್ ಕೇಬಲ್ ವೈರ್ ಸೇರಿದಂತೆ ಇತರೆ ವಸ್ತುಗಳನ್ನು ಕಳ್ಳತನ ಮಾಡಿರುವುದು ಸೇರಿ ಒಟ್ಟು ಎಂಟು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ.
ಬಂಧಿತ ಆರೋಪಿಗಳಿಂದ 52 ಸಾವಿರ ರೂ. ಮೌಲ್ಯದ 6 ನೀರೆತ್ತುವ ಮೋಟಾರ್, 1.29 ಲಕ್ಷ ರೂ. ಮೌಲ್ಯದ ಕೇಬಲ್ ವೈರ್, 2 ಗ್ಯಾಸ್ ಸಿಲಿಂಡರ್, ಟಿವಿಎಸ್ ಮೋಟಾರ್ ಸೈಕಲ್ ಸೇರಿದಂತೆ ಇತರ ವಸ್ತು, ಹಣ ಜಪ್ತಿ ಮಾಡಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಳ್ಳತನ ಪ್ರಕರಣ ಭೇದಿಸಲು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆ ಸಿಪಿಐ ಗುರಣ್ಣ ಹೆಬ್ಟಾಳ ನೇತೃತ್ವದಲ್ಲಿ ಪಿಎಸೈ ವಿಶ್ವಾರಾಧ್ಯ, ಸಿಬ್ಬಂದಿ ಸುಭಾಷ, ಉಮಾಕಾಂತ ದಾನಾ, ಲಕ್ಷ್ಮೀಪುತ್ರ, ಹಾವಣ್ಣ ಪೂಜಾರಿ, ವಿಕ್ರಮ ಶಾಮರಾಯ ಒಳಗೊಂಡ ತಂಡ ರಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ