ಅನುಭವ ಮಂಟಪ ಸೈದ್ಧಾಂತಿಕ ಸಂಸತ್ತು


Team Udayavani, Dec 11, 2017, 12:30 PM IST

bid-2.jpg

ಬೀದರ: ಬಸವಾದಿ ಶರಣರು ಪ್ರಜಾಸತ್ತೆಯ ಹರಿಕಾರರಾಗಿದ್ದು, ಅವರು ಸ್ಥಾಪಿಸಿದ ಅನುಭವ ಮಂಟಪವೆಂದರೆ ಸೈದ್ಧಾಂತಿಕ ಪಾರ್ಲಿಮೆಂಟ್‌. ಮಹಿಳೆಯರಿಗೆ ಮೀಸಲಾತಿ ನೀಡಿದ ಪಾರ್ಲಿಮೆಂಟ್‌ ಎಂದರೆ ಅದು ಅನುಭವ ಮಂಟಪ ಎಂದು ಚಿತ್ರದುರ್ಗ ಮುರುಘಾಮಠದ ಡಾ| ಶಿವಮೂರ್ತಿ ಶರಣರು ನುಡಿದರು.

ನಗರದ ಕರ್ನಾಟಕ ಫಾರ್ಮಸಿ ಕಾಲೇಜು ಆವರಣದಲ್ಲಿ ಬಸವ ದರ್ಶನ ಪ್ರವಚನ ಸಮಿತಿ ಆಯೋಜಿಸಿದ್ದ ಪ್ರವಚನ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ವೈದಿಕರ ಜಪ ದೇವಸ್ಥಾನವಾದರೆ, ಶ್ರೀಮಂತರ ಜಪ ಶಾಂತಿ, ಸಹನೆ ಸಮಾಧಾನ.

ದಲಿತರು, ಶೋಷಿತರ ಜಪ ಸಾಮಾಜಿಕ ನ್ಯಾಯದ ಸಮತೆಯ ಸ್ಥಾನ. ಲಿಂಗಾಯತರ ಜಪ ಸ್ವತಂತ್ರ ಧರ್ಮದ ಸ್ಥಾನಮಾನ ಎಂದು ಹೇಳಿದರು. ಭಾರತದಲ್ಲಿ ಶೋಷಿತರು, ದಲಿತರು, ನಿಮ್ನ ವರ್ಗದವರು ಹೆಚ್ಚು ಸಂಖ್ಯೆಯಲ್ಲಿದ್ದಾರೆ.
 
ಅವರೆಲ್ಲರಿಗೂ ಸಾಮಾಜಿಕ ಸ್ಥಾನಮಾನ ಬೇಕಿದೆ. ಅಂಬೇಡ್ಕರ ಸಾಮಾಜಿಕ ನ್ಯಾಯಕ್ಕೆ ಹೋರಾಡಿದರೂ ಅದು ಇವತ್ತಿಗೂ ಸಾಧ್ಯವಾಗುತ್ತಿಲ್ಲ. ಬಸವಣ್ಣನಂತಹ ಮೇಧಾವಿಗಳು 900 ವರ್ಷಗಳ ಹಿಂದೆಯೇ ಇಂತಹ ಕಾರ್ಯಕ್ಕೆ ಮುಂದಾಗಿದ್ದರು ಎಂದರು.

ಶ್ರೀ ನಿಜಗುಣಾನಂದ ಮಹಾಸ್ವಾಮೀಜಿ ಮಾತನಾಡಿ, ದೇಶದಲ್ಲಿ ಧರ್ಮ ರಾಜಕಾರಣ ನಡೆಯುತ್ತಿದೆ. ಈ ಕುರಿತು ಗಂಭೀರ ಚಿಂತನೆ ಮಾಡಬೇಕು ಎಂದರು. ಭಾಲ್ಕಿಯ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ನಮ್ಮದು ನಡೆ ನುಡಿ ಸಿದ್ಧಾಂತದ ತತ್ವ, ವಚನ ಸಾಹಿತ್ಯದೊಂದಿಗೆ,
ಅಂತರಂಗದೊಂದಿಗೆ ಸಂಬಂಧ ಬೆಳೆಸಿಕೊಳ್ಳಬೇಕು ಎಂದು ನುಡಿದರು. 

ಹುಲಸೂರಿನ ಶಿವಾನಂದ ಶ್ರೀಗಳು ಮಾತನಾಡಿ, ಒಳಸುಖ ನಡುಸುಖ, ಹೊರಸುಖ, ಪರಿಪೂರ್ಣ ಎನ್ನುವ ನಾಲ್ಕು ಸುಖಗಳಿದ್ದು, ನಿಜಗುಣಾನಂದ ಸ್ವಾಮಿಗಳ ಪ್ರವಚನ ಕೇಳಿ ಆನಂದಿಸಿದವರು ಪರಿಪೂರ್ಣ ಸುಖೀಗಳು. ಲಿಂಗಾಯತ ಧರ್ಮ ಸ್ವತಂತ್ರತೆಗಾಗಿ ಬಸವ ಲಿಂಗಾಯತ ಸ್ವಾಮಿಗಳ ಸಂಖ್ಯೆ ಕಡಿಮೆ ಇದ್ದರೂ ಬಸವ ತತ್ವನಿಷ್ಟ ಲಿಂಗಾಯತ ಜನರ ಸಂಖ್ಯೆ ಜಾಸ್ತಿಯಿದೆ. ಬೀದರಗೆ ಬಸವ ಜಿಲ್ಲೆ ಎಂದು ನಾಮಕರಣ ಮಾಡಬೇಕು ಎಂದರು.

ಅಥಣಿಯ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ವಿಚಾರವೆಂದರೆ ಎಲ್ಲರಿಗೂ ಇಷ್ಟ, ಆಚರಣೆಗೆ ತರುವುದು ಕಷ್ಟ. ಬಸವಣ್ಣ ಪರಿಪೂರ್ಣ ವ್ಯಕ್ತಿತ್ವ ಹೊಂದಿದವರಾಗಿದ್ದು, ಅವರು ಮೊಟ್ಟಮೊದಲ ಸ್ವತಂತ್ರ ವಿಚಾರಧಾರೆಯವರು. ಯುವಕರಿಗೆ ಸೇವೆ ಸಲ್ಲಿಸಲು ಪ್ರೋತ್ಸಾಹ ನೀಡಿದರೆ ಹುಲಿಗಳಾತ್ತಾರೆ. ಇಲ್ಲವಾದಲ್ಲಿ ನರಿಗಳಾಗುತ್ತಾರೆ ಎಂದು ಹೇಳಿದರು.

ಅಕ್ಕ ಅನ್ನಪೂರ್ಣ ತಾಯಿ ಮಾತನಾಡಿ, ಕಲ್ಯಾಣ ರಾಜ್ಯದ ಜ್ಯೋತಿ ಪ್ರಜ್ವಲಿಸುತ್ತಿದೆ. ವಚನಗಳ ಮಳೆಯಿಂದ ನಮ್ಮೆಲ್ಲರ ಮನದ ಕೊಳೆ ತೊಳೆಯಬೇಕು. ಮಗು ಹುಟ್ಟಿದಾಗಿ ನಿಂದ ಸಾಯುವತನಕ ಲಿಂಗಾಯತ ಧರ್ಮದ ಆಚಾರ ವಿಚಾರ ಮೈಗೂಡಿಸಿಕೊಳ್ಳಬೇಕು. ಜೀವನದಲ್ಲಿ ಗಟ್ಟಿ ನಿರ್ಧಾರ ಮಾಡಿ ಬಸವ ತತ್ವ ಪಾಲನೆ ಮಾಡಬೇಕು ಎಂದು ಕರೆ ನೀಡಿದರು.

ಡಾ| ಗಂಗಾಂಬಿಕಾ ಅಕ್ಕ ಮಾತನಾಡಿ, ಶರಣ ಸಂಸ್ಕೃತಿಯ ಉಳಿವು ಮಹಿಳೆಯರ ಕೈಯಲ್ಲಿದೆ. ಮಹಿಳೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂದರು. ಅಧ್ಯಕ್ಷತೆ ವಹಿಸಿದ್ದ ಬಸವರಾಜ ಧನ್ನೂರ ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮ. ಈ ಪ್ರವಚನದಲ್ಲಿ ಎಲ್ಲ ಧರ್ಮದವರು ಪಾಲ್ಗೊಂಡಿದ್ದಾರೆ. ಧರ್ಮಾಧಿಕಾರಿಗಳು ಯಾರ ಹಂಗಿನಲ್ಲಿಯೂ ಇರಬಾರದು. ನಮ್ಮ ಧರ್ಮ ಆ ಕಡೆ ಈ ಕಡೆ ಚೆಲ್ಲಾಪಿಲ್ಲಿಯಾಗಿದೆ. ಇನ್ನು ಮುಂದೆ ನಾವು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಬೇಕು. ಸ್ವತಂತ್ರ ಧರ್ಮಕ್ಕಾಗಿ ಪ್ರತಿಯೊಬ್ಬರೂ ಹೋರಾಡಬೇಕು. ಬಸವಣ್ಣನವರ ತತ್ವವನ್ನು ಎಲ್ಲರೂ ಅಳವಡಿಸಿಕೊಳ್ಳೋಣ. ಬಸವ ಕಾಯಕಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.

ಶಾಸಕ ರಹೀಮ್‌ ಖಾನ್‌, ಸೂರ್ಯಕಾಂತ ನಾಗಮಾರಪಳ್ಳಿ, ಬಿ.ನಾರಾಯಣ, ಬಸವರಾಜ ಬುಳ್ಳಾ ಹಾಗೂ ಸಂಗೀತ ಸೇವೆ ನೀಡಿದ ವೈಜಿನಾಥ ಸಜ್ಜನಶೆಟ್ಟಿ, ಚನ್ನಬಸಪ್ಪ ನೌಬಾದೆ ಅವರನ್ನು ಸನ್ಮಾನಿಸಲಾಯಿತು. ಮಲ್ಲಿಕಾರ್ಜುನ ಸ್ವಾಮೀಜಿ ಬರೆದ “ಕಿನ್ನರಿ ಬೊಮ್ಮಯ್ಯನ ವಚನಗಳ ವ್ಯಾಖ್ಯಾನ’ ಪುಸ್ತಕವನ್ನು ಮತ್ತು ಕಲಾವಿದ ಚ.ಭೀ. ಸೋಮಶೆಟ್ಟಿ ರಚಿಸಿರುವ ಬಸವಣ್ಣನವರ ಭಾವಚಿತ್ರವನ್ನು ಚಿತ್ರದುರ್ಗ ಶ್ರೀಗಳು ಬಿಡುಗಡೆ ಮಾಡಿದರು. ಪ್ರಭುರಾವ್‌ ವಸಮತೆ ಸ್ವಾಗತಿಸಿದರು, ಸುರೇಶ ಚನಶೆಟ್ಟಿ ನಿರೂಪಿಸಿದರು, ಶರಣಪ್ಪ ಮಿಠಾರೆ ವಂದಿಸಿದರು.

ಸಂವಿಧಾನ ಧರ್ಮ ಗ್ರಂಥವಾಗಲಿ ಕರ್ನಾಟಕದಲ್ಲಿ ಧರ್ಮ ಸಂಸತ್‌ ನಡೆದು, ಅಸ್ಪ್ರಶ್ಯತೆ ನಿವಾರಣೆ ಆಗಬೇಕೆಂಬ ಕುರಿತು ಚರ್ಚೆಯಾಯಿತು. ಆದರೆ, ಈ ನೆಲದಲ್ಲಿ ಬಸವಾದಿ ಪ್ರಥಮರು ಅಸ್ಪ್ರಶ್ಯತೆ ನಿವಾರಣೆ ಮಾಡಿ ಸಮಾನತೆ ಧಾರಿತ ಧರ್ಮ ಕಟ್ಟಿದ ಕುರಿತು ಮಾತೆತ್ತಿಲ್ಲ. ವೈದಿಕ ಪರಂಪರೆಯವರು ದೇಶದೊಳಗೆ ಸಂವಿಧಾನ ಬದಲಾವಣೆ ಮಾಡಲು ಬಯಸುತ್ತಿದ್ದಾರೆ. 

ಪುರೋಹಿತರು ಆರ್ಯ, ವಿಪ್ರ, ಹಿಂದೂ ಎನ್ನುವ ತಳಹದಿ ಮೇಲೆ ಆಳುತ್ತಿದ್ದಾರೆ. ಹಿಂದೂ ಎನ್ನುವ ಶಬ್ದದ ಧರ್ಮವಾದರೆ ನಾವು ಒಪ್ಪುವುದಿಲ್ಲ. ರಾಜಕಾರಣಿಗಳು ಪಕ್ಷಾತೀತವಾಗಿ ಬಸವಣ್ಣನ ಕಾರ್ಯಕ್ಕೆ ಕೈ ಜೋಡಿಸಬೇಕು. ಸಂವಿಧಾನ ಧರ್ಮ ಗ್ರಂಥವಾಗಬೇಕು. ಈ ದೇಶವನ್ನು ಉಳಿಸಿದವರು ಬುದ್ಧ-ಬಸವ-ಅಂಬೇಡ್ಕರ ಎನ್ನುವ ಸತ್ಯ ಅರಿಯಬೇಕು.
ಶ್ರೀ ನಿಜಗುಣಾನಂದ ಸ್ವಾಮಿಜಿ 

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.