20 ವರ್ಷ ಅಧಿಕಾರದ ಬಹುಮತ ಸಿಗಲಿ¨


Team Udayavani, Feb 27, 2018, 1:05 PM IST

bid-5.jpg

ಬಸವಕಲ್ಯಾಣ (ಬೀದರ): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ ಗೆಲುವು ಸಾ ಧಿಸುವುದಷ್ಟೇ ಅಲ್ಲ, ಮುಂದಿನ 20 ವರ್ಷಗಳ ಕಾಲ ಸರ್ಕಾರವನ್ನು ಅಲುಗಾಡಿಸಲಾಗದಂತಹ ಪ್ರಚಂಡ ಬಹುಮತದಿಂದ ಜಯಭೇರಿ ಬಾರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದರು.

ಬಸವಕಲ್ಯಾಣದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಸೋಮವಾರ ನಡೆದ ನವಶಕ್ತಿ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಬೇರು ಸಮೇತ ಕಿತ್ತು ಹಾಕಬೇಕಿದೆ. ರಾಜ್ಯದ ಜನರು ಮೋದಿ ಜತೆಗೆ ಇದ್ದಾರೆ ಎಂದರು. 

ಕೇಂದ್ರದ ಯೋಜನೆಗಳನ್ನು ರಾಜ್ಯಗಳಲ್ಲಿ ಜಾರಿಗೆ ತಂದರೆ ಪ್ರಧಾನಿ ಮೋದಿ ಜನಪ್ರಿಯತೆ ಹೆಚ್ಚುತ್ತದೆ ಎಂದು ಅದರ ಲಾಭವನ್ನು ಜನರಿಗೆ ಮುಟ್ಟಿಸುತ್ತಿಲ್ಲ. ಸಿಎಂ ಸಿದ್ಧರಾಮಯ್ಯ ಅರ್ಧ ಸಮಯವನ್ನು ಪ್ರಧಾನಿ ಜತೆ ಜಗಳ ಆಡುವುದರಲ್ಲೇ ಕಳೆಯುತ್ತಿದ್ದಾರೆ. ಒಂದು ವೇಳೆ ಬಿಎಸ್‌ವೈ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕರ್ನಾಟಕದ ವಿಕಾಸ ಯಾತ್ರೆ ಮುನ್ನಡೆಯಲು ಸಾಧ್ಯ. ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಕರೆ ನೀಡಿದರು.

ದೇಶದಲ್ಲಿ 1,650 ಪಕ್ಷಗಳಿದ್ದು, ಅದರಲ್ಲಿ ಬಿಜೆಪಿ ವಿಭಿನ್ನವಾಗಿದೆ. ಬೂತ್‌ ಮಟ್ಟದ ಅಧ್ಯಕ್ಷ ಸಹ ರಾಷ್ಟ್ರೀಯ ಪಕ್ಷದ ಅಧ್ಯಕ್ಷನಾಗಲು ಸಾಧ್ಯವಿದ್ದು, ಅದಕ್ಕೆ ಹಿಂದೆ ವಾಲ್‌ ಪೇಂಟ್‌ ಹಾಕುತ್ತಿದ್ದ ನಾನೇ ಸಾಕ್ಷಿ. ಜನ ಸಂಘ ಸ್ಥಾಪನೆಯಾದಾಗ ಸ್ಥಳೀಯ ಸಂಸ್ಥೆಯಲ್ಲೂ ಗೆಲ್ಲಲು ಸಶಕ್ತನಾಗಿರದಿದ್ದ ಬಿಜೆಪಿ ಇಂದು 1,480 ಶಾಸಕರು, 303 ಸಂಸದರು ಮತ್ತು 19 ರಾಜ್ಯಗಳಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ. ಇದಕ್ಕೆ ಕಾರ್ಯಕರ್ತರ ಪರಿಶ್ರಮವೇ ಕಾರಣ. 4 ವರ್ಷಗಳಲ್ಲಿ ಕಾಂಗ್ರೆಸ್‌ ಅಧಿ ಕಾರದಲ್ಲಿ ಹಲವು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿ ಸಿದೆ. ಈಗ ತ್ರಿಪುರಾ ಮತ್ತು ಕರ್ನಾಟಕದ ಸರದಿ. ಇಲ್ಲಿಯೂ ಸಹ ಬಿಜೆಪಿ ಜಯಭೇರಿ ಬಾರಿಸಿ ಅಧಿಕಾರ ಗಿಟ್ಟಿಸಲಿದೆ ಎಂದು ಭವಿಷ್ಯ ನುಡಿದರು.

ಸಮಾವೇಶದಲ್ಲಿಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ರಾಜ್ಯ ಪ್ರಭಾರಿ ಮುರಳಿಧರರಾವ್‌, ಸಹ ಪ್ರಭಾರಿ ಪುರಂದೇಶ್ವರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ, ಜಿಲ್ಲಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಸಂಸದ ಭಗವಂತ ಖೂಬಾ, ಶಾಸಕ ಪ್ರಭು ಚವ್ಹಾಣ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಸೂರ್ಯಕಾಂತ ನಾಗಮಾರಪಳ್ಳಿ, ಶಿವರಾಜ ಗಂದಗೆ, ಕೊಳ್ಳೂರ ಗುರುನಾಥ, ಲಿಂಗರಾಜ ಪಾಟೀಲ ಅಟ್ಟೂರ ಮತ್ತಿತರರು ಇದ್ದರು. 

ಅಮಿತ ಶಾರನ್ನು ಸನ್ಮಾನಿಸಿದ ಖೂಬಾ 
ಬಸವಕಲ್ಯಾಣ: ನಗರಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಅವರ ಸಮ್ಮುಖದಲ್ಲಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್‌ ತೊರೆದು ಬಿಜೆಪಿ ಸೇರಲಿದ್ದಾರೆ ಎನ್ನುವ ಬಗ್ಗೆ ಗುಸು, ಗುಸು ಚರ್ಚೆಗಳು ಕೇಳಿ ಬಂದವಾದರೂ ಎಲ್ಲರ ನಿರೀಕ್ಷೆ ಹುಸಿಯಾದವು. ಅಮಿತ ಶಾ ಅವರು ಅನುಭವ ಮಂಟಪಕಕ್ಕೆ ಭೇಟಿ ನೀಡಿದಾಗ ತಮ್ಮ ಬೆಂಬಲಿಗರೊಂದಿಗೆ ಅಲ್ಲಿಗೆ ಬಂದ ಶಾಸಕ ಖೂಬಾ, ಅಮಿತ ಶಾ ಅವರನ್ನು ಭೇಟಿ ಮಾಡಿ ಸನ್ಮಾನಿಸಿ, ವೇದಿಕೆ ಹಂಚಿಕೊಂಡರು. ನಂತರ ಅಮಿತ ಶಾ ಅವರು ಮುಖ್ಯರಸ್ತೆ ಮಾರ್ಗವಾಗಿ ನಗರಕ್ಕೆ ಆಗಮಿಸುವ ವೇಳೆ ರಸ್ತೆ ಬದಿಯಲ್ಲಿರುವ ತಮ್ಮ ನಿವಾಸದ ಹತ್ತಿರ ಅಮಿತ ಶಾ ಅವರ ವಾಹನ ನಿಲ್ಲಿಸಿ ಮತ್ತೆ ಸನ್ಮಾನಿಸಿದರು.

ಬಿಎಸ್‌ವೈ ಜತೆ ಖೂಬಾ ಗುಪ್ತ ಚರ್ಚೆ 
ಬಸವಕಲ್ಯಾಣ: ಜೆಡಿಎಸ್‌ ತೊರೆದು ಬಿಜೆಪಿ ಸೇರಲು ಸಿದ್ಧವಾಗಿರುವ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು, ನಗರದ ಅನುಭವ ಮಂಟಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಜತೆಗೆ ಗುಪ್ತವಾಗಿ ಚರ್ಚಿಸಿದ್ದು ಗಮನ ಸೆಳೆಯಿತು. ಅನುಭವ ಮಂಟಪಕಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಅವರನ್ನು ಶ್ರೀಗಳು, ಪ್ರಮುಖರು ಸನ್ಮಾನಿಸುವ ವೇಳೆ, ಬಿಎಸ್‌ವೈ ಅವರನ್ನು ಮಂಟಪದ ಮೂಲೆಯೊಂದರಲ್ಲಿ ಕರೆದುಕೊಂಡು ಹೋದ ಖೂಬಾ, ಕೆಲ ಕಾಲ ಬಿಎಸ್‌ವೈ ಅವರೊಂದಿಗೆ ಚರ್ಚಿಸುತ್ತಿರುವುದು ಕಂಡು ಬಂದಿತು. ಆದರೆ ಇಬ್ಬರ ಮಧ್ಯೆ ಏನು ಚರ್ಚೆ ನಡೆಯಿತು ಎನ್ನುವುದು ತಿಳಿದು ಬಂದಿಲ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.