ಜಿಲ್ಲೆಯಲ್ಲಿ ಪ್ರತಿಭೆಗಿಲ್ಲ ಕೊರತೆ


Team Udayavani, Oct 1, 2019, 3:26 PM IST

uk-tdy-1

ಬೀದರ: ಬೀದರ ಜಿಲ್ಲೆಯಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಆದರೆ, ಕಲಾವಿದರಿಗೆ ಸೂಕ್ತವಾದ ಪ್ರೋತ್ಸಾಹ ಹಾಗೂ ವೇದಿಕೆ ಸಿಗುತ್ತಿಲ್ಲ ಎಂದು ಪತ್ರಕರ್ತ ಸದಾನಂದ ಜೋಶಿ ಹೇಳಿದರು. ನಗರದ ಜಿಲ್ಲಾ ರಂಗಮಂದಿರದಲ್ಲಿ ಬೆಳಗು ಸಾಂಸ್ಕೃತಿಕ ಮತ್ತು ಸಾಮಾಜಿಕ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೆಳಗು ಸಂಸ್ಥೆ ಬೀದರ ಜಿಲ್ಲೆಯ ಉದಯೋನ್ಮುಖ ಕಲಾವಿದರಿಗೆ ವೇದಿಕೆ ಒದಗಿಸಿಕೊಡುವ ಜತೆ ಜತೆಯಲ್ಲೇ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿದೆ. ಹೊಸ ಗಾಯಕರು, ಕಲಾವಿದರನ್ನು ಪರಿಚಯಿಸಿ ವೇದಿಕೆ ಒದಗಿಸುವ ಮಹತ್ವದ ಕೆಲಸ ಮಾಡುತ್ತಿದೆ. ವಿವಿಧ ವೃತ್ತಿಯಲ್ಲಿ ತೊಡಗಿದವರಿಗೆ ಸಂಗೀತದತ್ತ ಸೆಳೆದು ಹಾಡಲು ಪ್ರೇರಣೆ ನೀಡುತ್ತಿದೆ. ಮೇಲಿಂದ ಮೇಲೆ ರಸಮಂಜರಿ ಆಯೋಜಿಸಿ ಜನತೆಗೆ ಸಂಗೀತದ ರಸದೌತಣವನ್ನೇ ಉಣಬಡಿಸುತ್ತಿದೆ ಎಂದು ಬಣ್ಣಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಬೆಳಗು ಟ್ರಸ್ಟ್ ಅಧ್ಯಕ ಅನೀಲಕುಮಾರ ದೇಶಮುಖ, ಟ್ರಸ್ಟ್‌ನಿಂದ ನಿರಂತರ ವಿವಿಧ ಕಾರ್ಯಕ್ರಮ ನಡೆಸಲಾಗುತ್ತಿದೆ. ಅನೇಕ ಕಲಾವಿದರಿಗೆ ವೇದಿಕೆ ಒದಗಿಸಲಾಗುತ್ತಿದೆ.

ಬರುವ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ರಾಷ್ಟ್ರೀಯ ಸಂಗೀತ ಕಚೇರಿ ಇಲ್ಲಿ ನಡೆಸುವ ಉದ್ದೇಶವನ್ನು ಟ್ರಸ್ಟ್‌ ಹೊಂದಿದೆ ಎಂದು ಹೇಳಿದರು. ಬೆಳಗು ಸಂಸ್ಥೆ ಮುಖ್ಯಸ್ಥ ಹಾಗೂ ಬಿಜೆಪಿ ಮುಖಂಡ ಗುರುನಾಥ ಕೊಳ್ಳುರ, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ| ವಿ.ವಿ. ನಾಗರಾಜ, ಅಸೋಸಿಯೇಷನ್‌ ಆಫ್‌ ಕನ್ಸಲ್ಟಿಂಗ್‌ ಇಂಜಿನಿಯರ್‌ ಅಧ್ಯಕ್ಷ ರವಿ ಮೂಲಗೆ, ಟ್ರಸ್ಟ್‌ ಉಪಾಧ್ಯಕ್ಷೆ ಮಂಜುಳಾ ರವಿ ಮೂಲಗೆ, ಕಲಾವಿದರಾದ ಗುರುದೇವ, ಆಬೇದ್‌ ಅಲಿ ಖಾನ್‌, ಅರುಣ ಕರ್ನಾಡ, ಮಲ್ಲಿಕಾರ್ಜುನ ಶೀಲವಂತ, ಡಾ| ನಾಗರಾಜ, ರವಿ ಮೂಲಗೆ, ನಾಗಶೆಟ್ಟಿ ಲಕೋಟಿ, ಮಹೇಶ್ವರಿ ಪಾಂಚಾಳ, ಪ್ರಿಯಾಂಕಾ ಗುರುದೇವ ಸಂಗೀತ ರಸಮಂಜರಿ ನಡೆಸಿಕೊಟ್ಟರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.