ಬೌದ್ಧ ಮಹಾಸಭೆಯಲ್ಲಿ ಅವ್ಯವಹಾರ ನಡೆದಿಲ್ಲ
Team Udayavani, Jan 26, 2022, 1:36 PM IST
ಭಾಲ್ಕಿ: ಭಾರತೀಯ ಬೌದ್ಧ ಮಹಾಸಭೆಯಲ್ಲಿ ಯಾವುದೇ ತರಹದ ಅವ್ಯವಹಾರ ನಡೆದಿಲ್ಲ. ನಡೆಯುವುದಕ್ಕೆ ಆಸ್ಪದವೂ ಕೊಡುವುದಿಲ್ಲ ಎಂದು ಭಾರತೀಯ ಬೌದ್ಧ ಮಹಾಸಭಾ ಅಧ್ಯಕ್ಷ ವಿಜಯಕುಮಾರ ಗಾಯಕವಾಡ ಹೇಳಿದರು.
ಪಟ್ಟಣದ ಭಾರತೀಯ ಬೌದ್ಧ ಮಹಾಸಭೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಪಟ್ಟಭದ್ರ ಹಿತಾಸಕ್ತಿಯವರು ಬೌದ್ಧ ಮಹಾಸಭೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಸುಳ್ಳು ಆರೋಪ ಮಾಡಿ, ಬೌದ್ಧ ಮಹಾಸಭೆಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಅವರನ್ನು ಮಹಾಸಭೆ ಪದಾಧಿಕಾರಿಗಳ ಪಟ್ಟಿಯಿಂದ ತೆಗೆದು, ಸಮಾಜಕ್ಕಾಗಿ ಕೆಲಸ ಮಾಡುವ ಒಳ್ಳೆಯವರನ್ನು ಸೇರಿಸಿಕೊಳ್ಳಲಾಗುವುದು ಎಂದರು.
ಸಂಸ್ಥೆ ಪ್ರಧಾನ ಕಾರ್ಯದರ್ಶಿ ಓಂಕಾರ ಮೋರೆ ಮಾತನಾಡಿ, ಬೌದ್ಧ ಮಹಾಸಭೆ ಡಾ| ಬಿ.ಆರ್. ಅಂಬೇಡ್ಕರ್ ಕಟ್ಟಿ ಬೆಳೆಸಿದ ಸಂಸ್ಥೆ. ಇದರಲ್ಲಿ ಯಾವುದೇ ಅವ್ಯವಹಾರ ಆಗುವುದಕ್ಕೆ ನಾವು ಬಿಡುವುದಿಲ್ಲ. ಆದರೆ ಇಲ್ಲಿಯ ಉತ್ತಮ ಬೆಳವಣಿಗೆ ಸಹಿಸದ ಕೆಲವು ವ್ಯಕ್ತಿಗಳು ಇಲ್ಲ ಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ ಎಂದರು.
ಸಂಸ್ಥೆ ಮಾಜಿ ಅಧ್ಯಕ್ಷ ವಿಸಾಲ ಮೋರೆ ಮಾತನಾಡಿ, ಆದಷ್ಟು ಬೇಗ ಬೌದ್ಧ ವಿಹಾರದ ನಿರ್ಮಾಣ ಕಾರ್ಯ ಎಲ್ಲರೂ ಸೇರಿ ಮಾಡಬೇಕಿದೆ ಎಂದರು.
ಈ ಸಂದರ್ಭದಲ್ಲಿ ಸಂಜೀವಕುಮಾರ ಭಾವಿಕಟ್ಟೆ, ಶಿವಕುಮಾರ ಮೇತ್ರೆ, ಮಾರುತಿ ಭಾವಿಕಟ್ಟೆ, ಕೈಲಾಸ ಭಾವಿಕಟ್ಟೆ, ನಾರಾಯಣ ಮೋರೆ, ಸಂಜುಕುಮಾರ ಲಾಮಲೆ, ಅಶೋಕ ಗಾಯಕವಾಡ, ಅಶೋಕ ಭಾವಿಕಟ್ಟೆ, ಜೈಪಾಲ ಬೋರಾಳೆ, ಅನೀಲಕುಮಾರ ಸೂರ್ಯವಂಶಿ, ಉದಯ ಕುಂದೆ, ರಾಜಕುಮಾರ ದಂಡೆ, ರಾಜಕುಮಾರ ಬೌದ್ಧೆ, ಸುನೀಲ ನಾಟೇಕರ, ಪುಟ್ಟರಾಜ ಡಿ, ಭರತ ನಾಟೇಕರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ