ಬೌದ್ಧ ಮಹಾಸಭೆಯಲ್ಲಿ ಅವ್ಯವಹಾರ ನಡೆದಿಲ್ಲ
Team Udayavani, Jan 26, 2022, 1:36 PM IST
ಭಾಲ್ಕಿ: ಭಾರತೀಯ ಬೌದ್ಧ ಮಹಾಸಭೆಯಲ್ಲಿ ಯಾವುದೇ ತರಹದ ಅವ್ಯವಹಾರ ನಡೆದಿಲ್ಲ. ನಡೆಯುವುದಕ್ಕೆ ಆಸ್ಪದವೂ ಕೊಡುವುದಿಲ್ಲ ಎಂದು ಭಾರತೀಯ ಬೌದ್ಧ ಮಹಾಸಭಾ ಅಧ್ಯಕ್ಷ ವಿಜಯಕುಮಾರ ಗಾಯಕವಾಡ ಹೇಳಿದರು.
ಪಟ್ಟಣದ ಭಾರತೀಯ ಬೌದ್ಧ ಮಹಾಸಭೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಪಟ್ಟಭದ್ರ ಹಿತಾಸಕ್ತಿಯವರು ಬೌದ್ಧ ಮಹಾಸಭೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಸುಳ್ಳು ಆರೋಪ ಮಾಡಿ, ಬೌದ್ಧ ಮಹಾಸಭೆಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಅವರನ್ನು ಮಹಾಸಭೆ ಪದಾಧಿಕಾರಿಗಳ ಪಟ್ಟಿಯಿಂದ ತೆಗೆದು, ಸಮಾಜಕ್ಕಾಗಿ ಕೆಲಸ ಮಾಡುವ ಒಳ್ಳೆಯವರನ್ನು ಸೇರಿಸಿಕೊಳ್ಳಲಾಗುವುದು ಎಂದರು.
ಸಂಸ್ಥೆ ಪ್ರಧಾನ ಕಾರ್ಯದರ್ಶಿ ಓಂಕಾರ ಮೋರೆ ಮಾತನಾಡಿ, ಬೌದ್ಧ ಮಹಾಸಭೆ ಡಾ| ಬಿ.ಆರ್. ಅಂಬೇಡ್ಕರ್ ಕಟ್ಟಿ ಬೆಳೆಸಿದ ಸಂಸ್ಥೆ. ಇದರಲ್ಲಿ ಯಾವುದೇ ಅವ್ಯವಹಾರ ಆಗುವುದಕ್ಕೆ ನಾವು ಬಿಡುವುದಿಲ್ಲ. ಆದರೆ ಇಲ್ಲಿಯ ಉತ್ತಮ ಬೆಳವಣಿಗೆ ಸಹಿಸದ ಕೆಲವು ವ್ಯಕ್ತಿಗಳು ಇಲ್ಲ ಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ ಎಂದರು.
ಸಂಸ್ಥೆ ಮಾಜಿ ಅಧ್ಯಕ್ಷ ವಿಸಾಲ ಮೋರೆ ಮಾತನಾಡಿ, ಆದಷ್ಟು ಬೇಗ ಬೌದ್ಧ ವಿಹಾರದ ನಿರ್ಮಾಣ ಕಾರ್ಯ ಎಲ್ಲರೂ ಸೇರಿ ಮಾಡಬೇಕಿದೆ ಎಂದರು.
ಈ ಸಂದರ್ಭದಲ್ಲಿ ಸಂಜೀವಕುಮಾರ ಭಾವಿಕಟ್ಟೆ, ಶಿವಕುಮಾರ ಮೇತ್ರೆ, ಮಾರುತಿ ಭಾವಿಕಟ್ಟೆ, ಕೈಲಾಸ ಭಾವಿಕಟ್ಟೆ, ನಾರಾಯಣ ಮೋರೆ, ಸಂಜುಕುಮಾರ ಲಾಮಲೆ, ಅಶೋಕ ಗಾಯಕವಾಡ, ಅಶೋಕ ಭಾವಿಕಟ್ಟೆ, ಜೈಪಾಲ ಬೋರಾಳೆ, ಅನೀಲಕುಮಾರ ಸೂರ್ಯವಂಶಿ, ಉದಯ ಕುಂದೆ, ರಾಜಕುಮಾರ ದಂಡೆ, ರಾಜಕುಮಾರ ಬೌದ್ಧೆ, ಸುನೀಲ ನಾಟೇಕರ, ಪುಟ್ಟರಾಜ ಡಿ, ಭರತ ನಾಟೇಕರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಗುಂಡ್ಲುಪೇಟೆ: ಅಪರಿಚಿತ ವಾಹನ ಢಿಕ್ಕಿಯಾಗಿ ಇಬ್ಬರು ಸಾವು
ತಪ್ಪಿಸಿಕೊಳ್ಳಬಾರದೆಂದು ಮಕ್ಕಳನ್ನು ಸರಪಳಿಯಲ್ಲಿ ಕಟ್ಟಿದ ಮದರಸಾದ ಮೌಲಾನಾ
ಮುಂದುವರೆದ ಮಳೆ: ಶಾಲಾ ಆವರಣಕ್ಕೆ ನುಗ್ಗಿದ ನೀರು, ಮರದ ಕೆಳಗೆ ಪಾಠ
ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ