ಈ ವರ್ಷವೂ “ಬಿಎಸ್‌ಎಸ್‌ಕೆ’ ಆರಂಭ ಅನುಮಾನ

ಸಾಲದ ಸುಳಿಯಲ್ಲಿ ಸಿಲುಕಿ ಬಾಗಿಲು ಮುಚ್ಚಿಕೊಂಡ ಕಾರ್ಖಾನೆಗೆ ಸಿಗುವುದೇ ಪುನಶ್ಚೇತನ

Team Udayavani, Aug 20, 2021, 8:26 PM IST

ಈ ವರ್ಷವೂ “ಬಿಎಸ್‌ಎಸ್‌ಕೆ’ ಆರಂಭ ಅನುಮಾನ

ಹುಮನಾಬಾದ: ಸಾಲದ ಸುಳಿಯಲ್ಲಿ ಬಾಗಿಲು ಮುಚ್ಚಿಕೊಂಡ ಬೀದರ ಸಹಕಾರ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಕಾರ್ಯಕ್ಕೆ ಸೂಕ್ತ ಅನುದಾನ ದೊರೆತಿಲ್ಲವಾದ್ದರಿಂದ ಈ ವರ್ಷವೂ ಕೂಡ ಕಾರ್ಖಾನೆ ಆರಂಭವಾಗುವುದು ಬಹುತೇಕ ಅನುಮಾನವಾಗಿದೆ.

ಸಕ್ಕರೆ ಕಾರ್ಖಾನೆ ಕಾರ್ಯ ಚಟುವಟಿಕೆಗಳು ಕಳೆದ ಎರಡು ವರ್ಷಗಳಿಂದ ಸಂಪೂರ್ಣ ಬಂದ್‌ ಆಗಿವೆ. ನಾಲ್ಕು ತಿಂಗಳ ಹಿಂದೆ ಚುನಾವಣೆ ಎದುರಿಸಿ ಬಂದ ಹೊಸ ಆಡಳಿತ ಮಂಡಳಿ ಕಾರ್ಖಾನೆ ಆರಂಭಿಸಲು ಅನುದಾನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಸದ್ಯ ಕಾರ್ಖಾನೆಯಲ್ಲಿನ ಸಕ್ಕರೆ ಮಾರಾಟ ಮಾಡಲಾಗಿದ್ದು, ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾರ್ಯ ಮಾಡಿದ್ದಾರೆ. ಅನುದಾನಕ್ಕಾಗಿ ವಿವಿಧೆಡೆ ಭೇಟಿ ನೀಡುತ್ತಿರುವ ಆಡಳಿತ ಮಂಡಳಿಗೆ ಕಾರ್ಖಾನೆ ಮೇಲೆ ಹೆಚ್ಚಿದ ಸಾಲದ ಹೊರೆ ಹಾಗೂ ಬಂದ್‌ ಆಗಿದೆ ಎಂಬ ಕಾರಣಕ್ಕೆ ಹಿನ್ನಡೆ ಉಂಟಾಗುತ್ತಿದೆ.

ಕಾರ್ಖಾನೆ ಆರಂಭಿಸುವ ನಿಟ್ಟಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಸಹ ಉತ್ಸಾಹ ತೋರುತ್ತಿಲ್ಲ ಎಂಬ ಆರೋಪಗಳ ಮಧ್ಯೆಯೂ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವ ಕಾರಣ ಅನುದಾನ ತಂದು ಕಾರ್ಖಾನೆ ನಡೆಸುತ್ತೇವೆಂಬ ಸಜ್ಜಿನಲ್ಲಿದ್ದಾರೆ ಆಡಳಿತ ಮಂಡಳಿಯವರು.ಅದೂ ಅಲ್ಲದೇ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ನಿಗಮದ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ ಅವರು ಕಾರ್ಖಾನೆ ಉಪಾಧ್ಯಕ್ಷ ರಾಗಿದ್ದು, ಇದೀಗ ಆ ಸಂಸ್ಥೆಯಿಂದ ಅನುದಾನ ತರುವುದು ಸಾಧ್ಯವಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:ಅಫ್ಘಾನ್ ನಲ್ಲಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ ದಿನೇಶ್ ಗುಂಡೂರಾವ್

ಈಡೇರದ ಭರವಸೆ: 2018ರ ವಿಧಾನಸಭೆ ಚುನಾವಣೆ ಮುನ್ನ ಕೇಂದ್ರ ಸಚಿವ ಅಮಿತ್‌ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ
ಹಾಗೂ ಕುಮಾರಸ್ವಾಮಿ ಅವರು ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬೀದರ ಸಹಕಾರ ಸಕ್ಕರೆ ಕಾರ್ಖಾನೆಗೆ ಸೂಕ್ತ ಅನುದಾನ ಕಲ್ಪಿಸುವ ಮೂಲಕ ಕಾರ್ಖಾನೆ ಪುನಶ್ಚೇತನಗೊಳಿಸುವ ಭರವಸೆ ನೀಡಿದ್ದರು. ಕುಮಾರಸ್ವಾಮಿ ಮುಖ್ಯಮಂತ್ರಿ ಇರುವ ಅವಧಿಯಲ್ಲಿ 20 ಕೋಟಿ ಅನುದಾನ ತಂದು ಕಾರ್ಖಾನೆ ಆರಂಭಿಸಲಾಗಿತ್ತು. ನಂತರ ಕಾರ್ಖಾನೆಗೆ ಸೂಕ್ತ ಅನುದಾನ ಇಲ್ಲದೆ ಬಾಗಿಲು ಮುಚ್ಚಿಕೊಂಡಿದೆ. ಬಾಗಿಲು ತೆರೆಯುವ ಕಾರ್ಯವನ್ನು ಮಾತ್ರ ಯಾವ ರಾಜಕಾರಣಿಗಳೂ ಮಾಡುತ್ತಿಲ್ಲವೆಂದು ರೈತರು ದೂರಿದ್ದಾರೆ.

ಮತ್ತೆ ಹೊಸ ಭರವಸೆ: ಬಿಎಸ್‌ಎಸ್‌ಕೆ ಕಾರ್ಖಾನೆಗೆ ಇತ್ತೀಚೆಗೆ ಭೇಟಿ ನೀಡಿದ ಕೇಂದ್ರ ಸಚಿವ, ಜಿಲ್ಲಾ ಸಂಸದ ಭಗವಂತ ಖೂಬಾ ಕಾರ್ಖಾನೆ ಆರಂಭಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಹೊಸ ಭರವಸೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡುತ್ತೇನೆ. ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡುತ್ತೇನೆಂದು ತಿಳಿಸಿದ್ದಾರೆ.ಅನುದಾನ ಸಿಗದಿದ್ದರೆ ಖಾಸಗಿ ವ್ಯಕ್ತಿಗಳಿಗೆ ಲೀಸ್‌ ಆಧಾರದಲ್ಲಿ ನೀಡುವ ಚಿಂತನೆ ನಡೆಸುತ್ತಿದೆ. ಕಾರ್ಖಾನೆಯಲ್ಲಿನ ಚಟುವಟಿಕೆಗಳ ಕುರಿತು ಅಧ್ಯಕ್ಷರು ಗೌಪ್ಯತೆ ಕಾಪಾಡಿ ಕೊಳ್ಳುತ್ತಿದ್ದಾರೆ. ಹೇಗಾದರೂ ಮಾಡಿ ರೈತರ ಉಳಿವಿಗಾಗಿ ಈ ವರ್ಷ ಕಾರ್ಖಾನೆ ಆರಂಭ ಮಾಡಲೇಬೇಕೆಂದು ರೈತ ಸಂಘದ ಮುಖಂಡ ಸತೀಶ ನನೂರೆ ಒತ್ತಾಯಿಸಿದ್ದಾರೆ.

-ದುರ್ಯೋಧನ ಹೂಗಾರ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

Lok Sabha Election 2024: ಉತ್ತರ ಕರ್ನಾಟಕದತ್ತ ಸುಳಿಯದ ಸ್ಟಾರ್‌ ಪ್ರಚಾರಕರು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.