ಧಾರಾಕಾರ ಮಳೆಯಾಗಿ ನದಿ ತುಂಬಿ ಹರಿಯುತ್ತಿದ್ದರೂ, ಸೇತುವೆ ಮೇಲಿಂದ ಜಿಗಿದು ಯುವಕರ ಹುಚ್ಚಾಟ !
Team Udayavani, Oct 16, 2020, 6:43 PM IST
ಬೀದರ್: ಮೈದುಂಬಿಕೊಂಡು ಹರಿಯುತ್ತಿರುವ ಔರಾದ ತಾಲೂಕಿನ ಕೌಠಾ (ಬಿ) ಮಾಂಜ್ರಾ ಬಾಂದಾರ ಸೇತುವೆ ಮೇಲಿಂದ ಜಿಗಿದು ಯುವಕರು ಹುಚ್ಚಾಟ ಪ್ರದರ್ಶಿಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ವಾಯುಭಾರ ಕುಸಿತದಿಂದಾಗಿ ಧಾರಾಕಾರ ಮಳೆಯಾಗಿ ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಜೀವನದಿ ಮಾಂಜ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ವೇಳೆ ಬೀದರ-ನಾಂದೇಡ ಹೆದ್ದಾರಿಯಲ್ಲಿರುವ ಕೌಠಾ ಸೇತುವೆಯಲ್ಲಿ ೫೦ ಅಡಿ ಎತ್ತರದ ಮೇಲಿಂದ ಯುವಕರ ಗುಂಪು ನದಿಗೆ ಹಾರಿ ಈಜಾಡುವ ದುಸ್ಸಾಹಸ ಪ್ರದರ್ಶಿಸಿ ಅಪಾಯವನ್ನು ತಂದುಕೊಳ್ಳುತ್ತಿದೆ.
ಪ್ರವಾಹ ಸ್ಥಿತಿಯಿಂದ ರೈತರು ಬೆಳೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದರೆ ಇತ್ತ ಕಿಡಿಗೇಡಿ ಯುವಕರು ಹುಚ್ಚಾಟ ತೋರುತ್ತಿದ್ದಾರೆ. ಹಲವು ಯುವಕರ ಗುಂಪು ಸೇತುವೆ ಮೇಲೆ ಜಮಾಯಿಸಿ ನೀರಿಗೆ ಹಾರುತ್ತಿದ್ದ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ನದಿಗಳು, ಕೆರೆಗಳು ತುಂಬಿ ಹರಿಯುತ್ತಿರುವುದರಿಂದ ಕಳೆದೆರಡು ದಿನಗಳ ಹಿಂದೆಯೇ ಜಿಲ್ಲಾಧಿಕಾರಿ ರಾಮಚಂದ್ರನ್ ಅವರು, ಯಾರೂ ಅಪಾಯದ ಸಾಹಸ ಮಾಡದಂತೆ ಮನವಿ ಮಾಡಿದ್ದರೂ ಅದಕ್ಕೆ ಕ್ಯಾರೆ ಎನ್ನುತ್ತಿಲ್ಲ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…