ನಿಸ್ವಾರ್ಥ ದೇಶ ಸೇವೆ ಇಂದಿನ ತುರ್ತು ಅಗತ್ಯ: ಬಿದ್ರೆ


Team Udayavani, Feb 11, 2019, 9:02 AM IST

bid-6.jpg

ಭಾಲ್ಕಿ: ತಮ್ಮ ಜವಾಬ್ದಾರಿ ಅರಿತು ನಿಸ್ವಾರ್ಥ ದೇಶ ಸೇವೆ ಮಾಡುವುದು ಇಂದಿನ ತುರ್ತು ಅಗತ್ಯವಾಗಿದೆ. ಇದಕ್ಕಾಗಿ ಯುವಕರನ್ನು ಮಾನಸಿಕವಾಗಿ ಸಿದ್ದಗೊಳಿಸಬೇಕಾಗಿದೆ ಎಂದು ತುಮಕೂರಿನ ವಕ್ತಾರ ವಿನಯ ಬಿದ್ರೆ ಹೇಳಿದರು. ಪಟ್ಟಣದ ನೂತನ ಟೌನ್‌ಹಾಲ್‌ನಲ್ಲಿ ರವಿವಾರ ಮಂಥನ ಬೀದರ ಜಿಲ್ಲೆ ಕಾರ್ಯಕ್ರಮದಲ್ಲಿ ನಡೆದ ‘ರಾಷ್ಟ್ರ ನಿರ್ಮಾಣದಲ್ಲಿ ವೈಚಾರಿಕ ದಾಯಿತ್ವ, ಭವಿಷ್ಯದ ಭಾರತ’ ವಿಷಯ ಕುರಿತು ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಜಾತಿ, ಧರ್ಮ, ಲಿಂಗ ಭೇದವಿಲ್ಲದೇ, ಸರ್ಕಾರದ ಮೇಲೆ ಅತಿಯಾದ ಅವಲಂಬನೆ ಯಿಲ್ಲದೇ, ವಿದೇಶ ಮತ್ತು ಅಲ್ಲಿನ ಸರಕುಗಳ ವ್ಯಾಮೋಹ ಕಡಿಮೆ ಮಾಡಿಕೊಂಡು, ಸ್ವದೇಶ ಮತ್ತು ಇಲ್ಲಿ ಉತ್ಪಾದನೆಯಾಗುವ ವಸ್ತುಗಳ ಮೇಲೆ ಪ್ರೇಮ ವೃದ್ಧಿಸಿಕೊಳ್ಳುವ ಯುವಕರು ನಮಗೆ ಬೇಕಾಗಿದ್ದಾರೆ. ಪುಟ್ಟ ದೇಶಗಳಾದ ಜಪಾನ್‌, ದಕ್ಷಿಣ ಕೋರಿಯಾ, ಇಸ್ರೇಲ್‌ಗ‌ಳಂತೆ ಭಾರತದಲ್ಲೂ ಪ್ರತಿಯೊಬ್ಬ ನಾಗರಿಕನು ನಾನೊಬ್ಬ ಯೋಧ ಎಂದು ಭಾವಿಸಿ ದೇಶಸೇವೆ ಮಾಡುವ ಗುಣ ಬೆಳೆಸಿಕೊಳ್ಳಬೇಕಿದೆ. ಅದೇ ನಾವು ರಾಷ್ಟ್ರಕ್ಕೆ ಕೊಡುವ ಅತ್ಯಂತ ಶ್ರೇಷ್ಠ ಗೌರವ ಎಂದು ಹೇಳಿದರು.

ವಿಶ್ವ ಹಿಂದೂ ಪರಿಷತ್‌ನ ಸುಧಾಕರ ದೇಶಪಾಂಡೆ ಮಾತನಾಡಿ, ಶ್ರೀಮಂತ ಮತ್ತು ಬಡವರ ಮಧ್ಯ ಆರ್ಥಿಕ ಮತ್ತು ಸಾಮಾಜಿಕ ಅಂತರ ಹೆಚ್ಚಾಗಿದೆ. ಇದನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕು. ವಿಶ್ವದ ಬೇರೆ ಯಾವ ರಾಷ್ಟ್ರದಲ್ಲೂ ಇಲ್ಲದ ಪ್ರಾಕೃತಿಕ ಸಂಪನ್ಮೂಲ ಮತ್ತು ಮಾನವ ಸಂಪನ್ಮೂಲಗಳು ಭಾರತದಲ್ಲಿವೆ. ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಪ್ರತಿಷ್ಟಾನದ ತಾಲೂಕು ಅಧ್ಯಕ್ಷ ಶಿವಾಜಿರಾವ್‌ ಮಾನೆ ಮಾತನಾಡಿ, ಕೃಷಿಗೆ ಬೇಕಾದ ಎಲ್ಲವನ್ನೂ ಸರ್ಕಾರವೇ ಒದಗಿಸಿ ರೈತರು ಬೆಳೆದ ಬೆಳೆಯನ್ನು ಕೂಡ ಸರ್ಕಾರವೇ ನೇರವಾಗಿ ಖರೀದಿಸಬೇಕು. ಮಧ್ಯವರ್ತಿಗಳ ಹಾವಳಿಯಿಂದ ರೈತರನ್ನು ಮುಕ್ತಗೊಳಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ತಾಂಡವವಾಡುತ್ತಿರುವ ವೇತನ ತಾರತಮ್ಯ ಕಡಿಮೆ ಮಾಡಬೇಕು ಎಂದು ಹೇಳಿದರು.

ಎಬಿವಿಪಿ ಪ್ರಮುಖ ಈಶ್ವರ ರುಮ್ಮಾ ಮಾತನಾಡಿ, ಭಾರತ ಎಲ್ಲ ದೇಶಗಳಿಗಿಂತಲೂ ಮುಂಚೂಣಿಯಲ್ಲಿರಬೇಕು. ಸಂಪೂರ್ಣ ಸಾಕ್ಷರತಾ ರಾಷ್ಟ್ರವಾಗಬೇಕು. ಇಲ್ಲಿನ ಜನರ ಸೃಜನಶೀಲತೆ ಗುರುತಿಸಿ ಅದನ್ನು ಸರ್ಕಾರವೇ ಜಗತ್ತಿಗೆ ಪರಿಚಯಿಸಬೇಕು ಎಂದು ಹೇಳಿದರು.

ಪ್ರಜ್ಞಾಪ್ರವಾಹ ಜಿಲ್ಲಾ ಸಂಯೋಜಕ ಶಿವಾನಂದ ದಾಡಗೆ ಮಾತನಾಡಿ, ದೇಶದಲ್ಲಿ ಭಿಕ್ಷುಕರೆ ಇರಬಾರದು. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರನ್ನು ಕಾಯಿಸುವಂತಾಗಬಾರದು. ಶುಚಿತ್ವ, ಸಾಧನೆ, ಕಲೆ, ಸಾಹಿತ್ಯ, ಕ್ರೀಡೆಗಳಲ್ಲಿ ನಮ್ಮ ದೇಶ ವಿಶ್ವದಲ್ಲಿಯೇ ಮುಂದಿರಬೇಕು ಎಂದು ಹೇಳಿದರು.

ಪ್ರಕಾಶ ಮಾಶೆಟ್ಟೆ, ಬಿಜೆಪಿ ಪ್ರಮುಖ ಶಿವರಾಜ ಗಂದಗೆ ಮಾತನಾಡಿದರು. ಇದೇವೇಳೆ ಬೆಳಗ್ಗೆ ಯಿಂದ ಸಂಜೆ ವರೆಗೆ, ನಮ್ಮ ಸೈನ್ಯ ನಮ್ಮ ಹೆಮ್ಮೆ, ಸ್ವತಂತ್ರ ಸಮರ್ಥ ಭಾರತ, ವಿಶ್ವಮಾನ್ಯ ಭಾರತ ವಿಷಗಳ ಕುರಿತು ಗೋಷ್ಠಿಗಳು ನಡೆದವು. ಸಂಗಮೇಶ ಫುಲಾರಿ ಸ್ವಾಗತಿಸಿದರು. ರವಿಚಂದ್ರ ಬರದಾಪುರೆ ವಂದಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.