ಬರೋಬ್ಬರಿ 99.77 ಕೋಟಿ ರೂ. ಬಾಕಿ!ಸಂಕಷ್ಟದಲ್ಲಿರುವ ರೈತರಿಗೆ ಆರ್ಥಿಕ ಬರೆ

ಜಿಲ್ಲಾಡಳಿತ ಮಧ್ಯಸ್ಥಿಕೆ ವಹಿಸಿ ಕಬ್ಬಿನ ಹಣ ರೈತರ ಕೈಸೇರುವಂತೆ ಕ್ರಮ ವಹಿಸಬೇಕಿದೆ.

Team Udayavani, Apr 7, 2021, 7:05 PM IST

Factor

ಬೀದರ: ಹೆಮ್ಮಾರಿ ಕೋವಿಡ್‌ ಜತೆಗೆ ಪ್ರಾಕೃತಿಕ ವಿಕೋಪದಿಂದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಈ ವರ್ಷ ಸಿಹಿ ಕಬ್ಬು ಕಹಿ ಅನುಭವ ನೀಡುತ್ತಿದೆ. ಕ್ರಷಿಂಗ್‌ ಮುಗಿದು ತಿಂಗಳು ಕಳೆದರೂ ಜಿಲ್ಲೆಯ ಸಹಕಾರ ಮತ್ತು ಖಾಸಗಿ ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸಿದ ಕಬ್ಬಿಗೆ ಹಣ ಪಾವತಿಸದಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಸಕ್ತ ಸಾಲಿನಲ್ಲಿ ಕಾರ್ಖಾನೆಗಳು ಬರೋಬ್ಬರಿ 99.77 ಕೋಟಿ ರೂ. ಕಬ್ಬಿನ ಬಾಕಿ ಉಳಿಸಿಕೊಂಡಿವೆ.

ಜಿಲ್ಲೆಯ ಸಹಕಾರಿ ಕಾರ್ಖಾನೆಗಳಾದ ಬೀದರ ತಾಲೂಕಿನ ನಾರಂಜಾ ಸಹಕಾರ ಸಕ್ಕರೆ (ಎನ್‌ಎಸ್‌ಎಸ್‌ಕೆ), ಭಾಲ್ಕಿ ತಾಲೂಕಿನ ಮಹಾತ್ಮ ಗಾಂಧಿ  ಸಹಕಾರ ಸಕ್ಕರೆ ಕಾರ್ಖಾನೆ (ಎಂಜಿಎಸ್‌ಎಸ್‌ಕೆ), ಖಾಸಗಿ ಕಾರ್ಖಾನೆಗಳಾದ ಭಾಲ್ಕೇಶ್ವರ ಶುಗರ್ ಮತ್ತು ಬೀದರ ಕಿಸಾನ್‌ ಸಕ್ಕರೆ ಕಾರ್ಖಾನೆ (ಬಿಕೆಎಸ್‌ಕೆ)ಗಳು ಪ್ರಸಕ್ತ ಸಾಲಿನಲ್ಲಿ ಕಬ್ಬು ನುರಿಸಿದ್ದು, ನಾಲ್ಕು ಕಾರ್ಖಾನೆಗಳಿಗೆ ಕಬ್ಬು ಸಾಗಿಸಿದ ರೈತರಿಗೆ 99.77 ಕೋಟಿ ರೂ. ಪಾವತಿಸಬೇಕಿದೆ. ಕಬ್ಬಿನ ಹಣಕ್ಕಾಗಿ ರೈತರು ಎದುರು ನೋಡುವಂತಾಗಿದೆ.

ಕಬ್ಬಿನ ಬಿಲ್‌ಗಾಗಿ ರೈತರ ಅಲೆದಾಟ:
ಸಕ್ಕರೆ ಕಾರ್ಖಾನೆಗಳು ಕಬ್ಬು ಸಾಗಿಸಿದ 15 ದಿನದೊಳಗೆ ರೈತರ ಖಾತೆಗೆ ಹಣ ಜಮೆ ಮಾಡಬೇಕು ಎಂಬ ನಿಯಮವಿದೆ. ಆದರೆ, ಕಾರ್ಖಾನೆಗಳು ನಿಯಮ ಪಾಲಿಸಿದೇ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುತ್ತಿವೆ. ಬಿತ್ತನೆ, ಗೊಬ್ಬರ, ಔಷಧ ಸಿಂಪರಣೆ ಸೇರಿ ಸಾವಿರಾರು ರೂ. ಖರ್ಚು ಮಾಡಿ ವರ್ಷಪೂರ್ತಿ ಕಷ್ಟಪಟ್ಟು ಬೆಳೆ ಬೆಳೆದ ರೈತರು ಕಬ್ಬು ಸಾಗಿಸಿದ ಹಣಕ್ಕಾಗಿ ತಿಂಗಳುಗಟ್ಟಲೇ ಅಲೆದಾಡುವಂತಾಗಿದೆ. ಇದರಿಂದ ಮಕ್ಕಳ ಮದುವೆ ಸೇರಿ ಇತರ ಕಾರ್ಯಕ್ಕಾಗಿ ಸಾಲ ಮಾಡಬೇಕಾದ ಸ್ಥಿತಿ ಬಂದಿದೆ.

ಟನ್‌ ಕಬ್ಬಿಗೆ ಜಿಲ್ಲಾಡಳಿತ ನಿಗದಿಪಡಿಸಿದ ದರ ಬಿಡಿ ಕಾರ್ಖಾನೆ ನಿರ್ಧರಿಸಿರುವ ಹಣವೂ ಪಾವತಿಸಲು ವಿಳಂಬ ಮಾಡಲಾಗುತ್ತಿದೆ. ಕಳೆದ ಜ.2ರಂದು ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಸಹಕಾರ ಸೇರಿ ಎಲ್ಲ ಸಕ್ಕರೆ ಕಾರ್ಖಾನೆಗಳ ಮುಖ್ಯಸ್ಥರ ಸಭೆ ನಡೆಸಿ ಪ್ರಸಕ್ತ ಹಂಗಾಮಿಗೆ ಸಾಗಿಸುವ ಟನ್‌ ಕಬ್ಬಿಗೆ 2400 ರೂ. ದರ ನಿಗದಿ ಮಾಡಲಾಗಿತ್ತು. ಆದರೆ, ಈವರೆಗೆ ಯಾವ ಕಾರ್ಖಾನೆ ಸಹ ನಿಗದಿತ ಹಣ ನೀಡಿಲ್ಲ. ಎಫ್‌ಆರ್‌ಪಿಯಂತೆ ಟನ್‌ ಕಬ್ಬಿಗೆ 1900 ರೂ. (ಕಟಾವು ರಹಿತ) ಮತ್ತು 2708 (ಕಟಾವು ಸೇರಿ) ನೀಡಲಾಗುತ್ತಿದೆ.

ಕಾರ್ಖಾನೆಗಳಿಗೆ ನೋಟಿಸ್‌ ಜಾರಿ:
ಕಾರ್ಖಾನೆಗಳಲ್ಲಿ ಸಕ್ಕರೆ ದಾಸ್ತಾನು ಸಾಕಷ್ಟಿದ್ದರೂ ರೈತರಿಗೆ ಕೊಡಬೇಕಾದ ಹಣ ಮಾತ್ರ ಮಾತ್ರ ಬಾಕಿ ಉಳಿಸಿಕೊಳ್ಳಲಾಗುತ್ತಿದೆ. ಕಬ್ಬು ಸಾಗಿಸಿದ ರೈತರಿಗೆ ಬಾಕಿ ಹಣ ಶೀಘ್ರ ಪಾವತಿಸುವ ಕುರಿತು ಇತ್ತೀಚೆಗೆ ಸಕ್ಕರೆ ಆಯುಕ್ತರ ಕಚೇರಿ ನೋಟಿಸ್‌ ನೀಡಿದೆ. ಇದರಿಂದ ಎಚ್ಚೆತ್ತ ಕಾರ್ಖಾನೆಗಳು ಕೆಲ ರೈತರ ಹಣ ಜಮೆ ಮಾಡಿದ್ದು, ಇನ್ನೂ ಸಾವಿರಾರು ರೈತರ ಹಣ ಪಾವತಿಸಬೇಕಿದೆ. ಜಿಲ್ಲಾಡಳಿತ ಮಧ್ಯಸ್ಥಿಕೆ ವಹಿಸಿ ಕಬ್ಬಿನ ಹಣ ರೈತರ ಕೈಸೇರುವಂತೆ ಕ್ರಮ ವಹಿಸಬೇಕಿದೆ.

ಯಾವ ಕಾರ್ಖಾನೆಯಿಂದ ಎಷ್ಟು ಪಾವತಿ?
ಜಿಲ್ಲೆಯ ಎನ್‌ಎಸ್‌ಎಸ್‌ಕೆ ಕಾರ್ಖಾನೆ 3671 ರೈತರ 2.52 ಲಕ್ಷ ಮೆ. ಟನ್‌ ಕಬ್ಬು ನುರಿಸಿದ್ದು, ಎಫ್‌ಆರ್‌ಪಿ ದರದಂತೆ 68.44 ಕೋಟಿ ರೂ. ಪಾವತಿಸಬೇಕು. ಆದರೆ, ಈವರೆಗೆ 53.06 ಕೋಟಿ ಜಮೆ ಮಾಡಲಾಗಿದ್ದು, ಇನ್ನು 15.37 ಕೋಟಿ ರೂ. ಪಾವತಿಸಬೇಕಿದೆ. ಎಂಜಿಎಸ್‌ಎಸ್‌ಕೆ ಕಾರ್ಖಾನೆ 3859 ರೈತರ 3.23 ಲಕ್ಷ ಮೆ. ಟನ್ ಕಬ್ಬು ನುರಿಸಿದ್ದು, ಎಫ್‌ಆರ್‌ಪಿ ದರದಂತೆ 85.13 ಕೋಟಿ ರೂ. ಪಾವತಿಸಬೇ ಕು. ಆದರೆ, ಈವರೆಗೆ 81.64 ಕೋಟಿ ಜಮೆ ಮಾಡಲಾಗಿದ್ದು, ಇನ್ನು 3.49 ಕೋಟಿ ರೂ. ಪಾವತಿಸಬೇಕು. ಭಾಲ್ಕೇಶ್ವರ ಶುಗರ್ ಕಾರ್ಖಾನೆ 3.74 ಲಕ್ಷ ಮೆ. ಟನ್‌ ಕಬ್ಬು ನುರಿಸಿದ್ದು, 101 ಕೋಟಿ ರೂ. ಪಾವತಿಸಬೇಕು. ಆದರೆ, ಈವರೆಗೆ 54.43 ಕೋಟಿ ರೂ. ಜಮೆ ಮಾಡಿದ್ದು, ಇನ್ನು 46.84 ಕೋಟಿ ರೂ. ನೀಡಬೇಕಿದೆ. ಇನ್ನೂ 2.22 ಲಕ್ಷ ಮೆ. ಟನ್ ಕಬ್ಬು ನುರಿಸಿರುವ ಬಿಕೆಎಸ್‌ಕೆ ಕಾರ್ಖಾನೆ 60.12 ಕೋಟಿ ರೂ. ಪಾವತಿಸಬೇಕು. ಆದರೆ, ಈವರೆಗೆ 26.05 ಕೋಟಿ ರೂ. ಜಮೆ ಮಾಡಿದ್ದು, 34.7 ಕೋಟಿ ರೂ. ನೀಡಬೇಕಿದೆ.

ಕಬ್ಬು ಸಾಗಿಸಿದ ರೈತರಿಗೆ ಕಾರ್ಖಾನೆಗಳು ನಿಯಮದಂತೆ ಹಣ ಜಮೆ ಮಾಡಬೇಕು. ಜಿಲ್ಲೆಯಲ್ಲಿ ಕಬ್ಬು ನುರಿಸಿರುವ ಕಾರ್ಖಾನೆಗಳು ಎಷ್ಟು ಬಾಕಿ ಉಳಿಸಿಕೊಂಡಿವೆ ಎಂಬುದನ್ನು ಮಾಹಿತಿ ಪಡೆದು ನಂತರ ಕಬ್ಬು ಬೆಳೆಗಾರರಿಗೆ ಹಣ ಪಾವತಿಗೆ ಕ್ರಮ ವಹಿಸುತ್ತೇನೆ. ರೈತರು ಆತಂಕ ಪಡುವ ಅಗತ್ಯವಿಲ್ಲ.
ರಾಮಚಂದ್ರನ್‌ ಆರ್‌., ಜಿಲ್ಲಾಧಿಕಾರಿ, ಬೀದರ

*ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.