ಕುಸಿದ ಬೆಲೆ; ರೈತರ ಚಿತ್ತ ಹೋರಾಟದತ್ತ


Team Udayavani, Dec 30, 2021, 9:28 PM IST

ಬಹಗ್ದ

ಸಿಂಧನೂರು: ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬೆಲೆಗಿಂತಲೂ ಕಡಿಮೆ ಬೆಲೆಗೆ ಜೋಳ ಕೇಳುತ್ತಿರುವುದರಿಂದ ನೊಂದ ರೈತರು ಕೊನೆಗೂ ಹೋರಾಟದ ಮಾರ್ಗ ತುಳಿದಿದ್ದಾರೆ. 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ನಿಗದಿಪಡಿಸಿದ ಪ್ರತಿ ಎಕರೆಗೆ 20 ಕ್ವಿಂಟಲ್‌ ಜೋಳ ಖರೀದಿ ಎಂಬ ಷರತ್ತು ತೆಗೆಯುವಂತೆ ಆಡಳಿತದ ವರ್ಗದ ದುಂಬಾಲು ಬಿದ್ದಿದ್ದಾರೆ.

ಕಳೆದ ವರ್ಷ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಸದುಪಯೋಗ ಪಡೆದಿದ್ದ ರೈತರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವರ್ಷ ರೈತರ ಖಾತೆಗಳಿಗೆ 110 ಕೋಟಿ ರೂ. ಮೊತ್ತ ಜಮೆಯಾಗಿತ್ತು. ಮುಕ್ತ ಮಾರುಕಟ್ಟೆಯ ಬದಲು ಸರ್ಕಾರದಿಂದಲೇ ತೆಗೆದ ಖರೀದಿ ಕೇಂದ್ರಕ್ಕೆ ಜೋಳ ಮಾರಾಟ ಮಾಡಿ, ಹಣ ವಿಳಂಬವಾದರೂ ಉತ್ತಮ ಬೆಲೆಗಾಗಿ ಸಹಿಸಿಕೊಂಡಿದ್ದರು.

ಈ ವರ್ಷ ಮಾರುಕಟ್ಟೆಯಲ್ಲಿ ಕ್ವಿಂಟಲ್‌ಗೆ 1,200 ರೂ. ಕುಸಿತವಾದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಹೋರಾಟಕ್ಕೆ ಮುಂದಾಗಿದ್ದಾರೆ. ರೈತ ನಿಯೋಗ: ಬೂದಿಹಾಳ ವಿಎಸ್‌ಎಸ್‌ ಎನ್‌ ಅಧ್ಯಕ್ಷ ಮಲ್ಲಯ್ಯ ಮಾಡಸಿರವಾರ, ರೈತ ಮುಖಂಡ ಶ್ರೀನಿವಾಸ್‌ ಗೋಮರ್ಸಿ, ಬಸವರಾಜಗೌಡ ಮಾಡಸಿರವಾರ, ಮೌಲಾಸಾಬ್‌, ವೀರೇಶ, ಮಾತಾಂಗಪ್ಪ, ಸಿದ್ದಪ್ಪ, ಗ್ರಾಪಂ ಸದಸ್ಯ ನಿರುಪಾದೆಪ್ಪ ನೇತೃತ್ವದ ನಿಯೋಗ ಬುಧವಾರ ತಹಶೀಲ್ದಾರ್‌ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದೆ. ಮಾರುಕಟ್ಟೆಯಲ್ಲಿ 1,400ರಿಂದ 1,600 ರೂ.ಗೆ ಕೇಳುತ್ತಿದ್ದಾರೆ. ಬೆಂಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್‌ಗೆ 2,738 ರೂ. ದರವಿದೆ. ಪ್ರತಿ ಕ್ವಿಂಟಲ್‌ಗೆ 1,300 ರೂ.ಗಿಂತಲೂ ಕಡಿಮೆ ದರಕ್ಕೆ ಜೋಳ ಕೇಳುತ್ತಿರುವುದರಿಂದ ರೈತರ ನೆರವಿಗೆ ಧಾವಿಸುವಂತೆ ಸರ್ಕಾರದ ಮೊರೆ ಇಟ್ಟಿದ್ದಾರೆ.

ದಿನದಿಂದ ದಿನಕ್ಕೆ ಬೆಲೆ ಕುಸಿತ: ಬೆಂಬೆಲೆ ಯೋಜನೆಯಡಿ ಖರೀದಿ ಕೇಂದ್ರ ತೆರೆದಾಗ ಮಾರುಕಟ್ಟೆಯಲ್ಲಿ ಬೆಲೆ ಜಿಗಿತ ಸಾಮಾನ್ಯ. ಜೋಳದ ವಿಷಯಕ್ಕೆ ಬಂದಾಗ ಕಳೆದ 10 ದಿನಗಳಿಂದಲೂ ಬೆಲೆ ಕುಸಿತದ ಹಾದಿ ಹಿಡಿದಿದ್ದು, ಇದು ರೈತರನ್ನು ಕಂಗೆಡಿಸಿದೆ. 1,600ರಿಂದ 1,700 ರೂ. ಇದ್ದ ಬೆಲೆ ಕೂಡ 500 ರೂ. ತಗ್ಗಿಸಲಾಗಿದೆ. ಜೋಳ ಕೊಯ್ಲು ಮಾಡಿ ಬೆಲೆ ನಿರೀಕ್ಷೆಯಲ್ಲಿದ್ದ ರೈತರು ಮಾರುಕಟ್ಟೆ ಸ್ಥಿತಿ ಕಂಡು ಆಕ್ರೋಶಭರಿತರಾಗಿದ್ದು, ಈಗಾಗಲೇ ಜನಪ್ರತಿನಿಧಿ ಗಳ ದುಂಬಾಲು ಬಿದ್ದಿದ್ದಾರೆ. ಮುಂದುವರಿದ ಭಾಗವಾಗಿ ಸರ್ಕಾರದ ಗಮನ ಸೆಳೆಯಲು ಹೋರಾಟಕ್ಕೆ ಮುಂದಾಗಿದ್ದಾರೆ. ರೈತರು ತಾಲೂಕು ಆಡಳಿತಕ್ಕೆ ಆಗಮಿಸಲಾರಂಭಿಸಿದ್ದು, ಈ ಬಗ್ಗೆ ಸರ್ಕಾರದ ಗಮನ ಸೆಳೆಯುವಂತೆ ತಾಲೂಕು ದಂಡಾಧಿ  ಕಾರಿಯನ್ನು ಒತ್ತಾಯಿಸುತ್ತಿದ್ದಾರೆ. ಮನವಿ ಸ್ವೀಕರಿಸಿದ ಅ ಧಿಕಾರಿಗಳು ರಾಜ್ಯ ಸರ್ಕಾರಕ್ಕೆ ರವಾನೆ ಮಾಡುವುದಾಗಿ ಹೇಳುತ್ತಿದ್ದು, ಜಿಲ್ಲಾ ಧಿಕಾರಿಗೆ ವರದಿ ಒಪ್ಪಿಸುತ್ತಿದ್ದಾರೆ

 

ಟಾಪ್ ನ್ಯೂಸ್

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.