ಕಮಲನಗರದಲ್ಲಿ ಸಚಿವರ ಸಂಚಾರ: ಧನ ಸಹಾಯ
Team Udayavani, Apr 28, 2022, 1:32 PM IST
ಬೀದರ: ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರು ಕಮಲನಗರದಲ್ಲಿ ಸಂಚಾರದ ವೇಳೆ ಸಂಕಷ್ಟದಲ್ಲಿರುವ ಬಡ ಜನತೆಯ ಮನೆಗಳಿಗೆ ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ಮಾಡಿದರು.
ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಸಂಗೀತಾ ಸುರೇಶ ಅವರ ಮನೆಗೆ ಭೇಟಿ ನೀಡಿ, ಆಸ್ಪತ್ರೆಯ ಖರ್ಚಿಗಾಗಿ ಧನ ಸಹಾಯ ಮಾಡಿದರು. ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೊಳಗಾದ ದಿ| ಯುವರಾಜ ಮುಳೆ ಅವರ ಕುಟುಂಬವು ತೀವ್ರ ಸಂಕಷ್ಟದಲ್ಲಿದೆ ಎನ್ನುವುದು ತಿಳಿಯುತ್ತಿದ್ದಂತೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರಲ್ಲದೇ ವಯಕ್ತಿಕ ಧನ ಸಹಾಯ ನೀಡಿದರು.
ಇದೇ ವೇಳೆ ಸಾಮಾಜಿಕ ಕಾರ್ಯಕರ್ತ ವೈಜಿನಾಥ ವಡ್ಡೆ ಅವರು ಕಾಲು ಮುರಿತದಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಕಾರ್ಯಕರ್ತರು ಮಾಹಿತಿ ನೀಡಿದಾಗ ತಕ್ಷಣ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಏನಾದರೂ ಸಮಸ್ಯೆಯಿದ್ದಲ್ಲಿ ನನ್ನನ್ನು ನೇರವಾಗಿ ಸಂಪರ್ಕಿಸಿ. ಯಾವುದೇ ಕಾರಣಕ್ಕೂ ಆತಂಕ ಪಡಬೇಡಿ ಎಂದು ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಗ್ರಾಪಂ ಅಧ್ಯಕ್ಷ ಶಿವು ಜುಲೆ, ತಾಪಂ ಮಾಜಿ ಅಧ್ಯಕ್ಷ ಗಿರೀಶ ಒಡೆಯರ್, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಂಟಿ ರಾಂಪೂರೆ, ಮುಖಂಡರಾದ ಬಸವರಾಜ ಪಾಟೀಲ, ಶಿವಾನಂದ ವಡ್ಡೆ, ನಾಗೇಶ ಪತ್ರೆ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !