ಶರಣಬಸವ ಕಾಲೇಜಿನಲ್ಲಿ ತರಬೇತಿ ಶಿಬಿರ
Team Udayavani, Dec 7, 2021, 12:33 PM IST
ಸುರಪುರ: ಸ್ಪರ್ಧಾತ್ಮ ಯುಗದಲ್ಲಿ ಯಶಸ್ಸು ಗಳಿಸಬೇಕಾದರೆ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು. ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಉದ್ದೇಶದಿಂದ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪಾ ಹೇಳಿದರು.
ಹಸನಾಪುರ ಶರಣಬಸವ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ಪರ್ಧಾತ್ಮ ಪರೀಕ್ಷೆ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಮುಂದಾಲೋಚನೆ ಅಗತ್ಯ. ಉನ್ನತ ಹುದ್ದೆ ಪಡೆದುಕೊಂಡು ಕಲಿತ ಕಾಲೇಜಿಗೆ, ಗುರು-ಹಿರಿಯರಿಗೆ, ತಂದೆ-ತಾಯಿಗೆ ಹೆಸರು ತರಬೇಕು ಎಂದರು. ದೊಡ್ಡಪ್ಪ ಎಸ್. ನಿಷ್ಠಿ ಜಹಾಗೀರದಾರ ಮಾತನಾಡಿದರು.
ಇದೇ ವೇಳೆ ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹೂಗುಚ್ಚಿ ನೀಡಿ ಸ್ವಾಗತಿಸಲಾಯಿತು. ಪ್ರಾಚಾರ್ಯ ನಾನಾಗೌಡ ದೇಸಾಯಿ ಮಾತನಾಡಿದರು. ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ| ರವೀಂದ್ರಕುಮಾರ ನಾಗರಾಳೆ, ಪ್ರೊ| ಅನಿಲಕುಮಾರ ಪಾಟೀಲ, ಮುಖ್ಯೋಪಾಧ್ಯಾಯೆ ರತ್ನಾಮ್ಮ, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ