“ಸಹಕಾರಿ’ಗಳು ರೈತರ ಆಶಾಕಿರಣ


Team Udayavani, Dec 13, 2020, 4:16 PM IST

“ಸಹಕಾರಿ’ಗಳು ರೈತರ ಆಶಾಕಿರಣ

ಬೀದರ: ಸಹಕಾರ ಕ್ಷೇತ್ರವು ಸಮಾಜಕ್ಕೆ ಸೇವೆ ಸಲ್ಲಿಸಬೇಕೆಂದು ಅಭಿಲಾಷೆ ಇರುವ ಜನರಿಗೆ ಅತ್ಯುತ್ತಮ ಅವಕಾಶ ಒದಗಿಸುವ ಕ್ಷೇತ್ರವಾಗಿದೆ. ಜನರಿಗೆ ಆರ್ಥಿಕ ಪ್ರಗತಿ ಜೊತೆಗೆ ಸಾಮಾಜಿಕ ಪ್ರಗತಿ ಸಾಧಿ ಸಲು ನೆರವಾಗುವ ಸಹಕಾರಿ ಸಂಘಗಳು ಗ್ರಾಮೀಣರೈತರ ಆಶಾಕಿರಣಗಳಾಗಿವೆ ಎಂದು ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಸಂಗಮ ಬಾಬುರಾವ ಹೇಳಿದರು.

ನಗರದ ಸಹಾರ್ದ ತರಬೇತಿ ಸಂಸ್ಥೆಯಲ್ಲಿಕಲಬುರ್ಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಪ್ಯಾಕ್ಸಗಳ ಆಡಳಿತ ಮಂಡಳಿ ಸದಸ್ಯರಿಗಾಗಿ ಆಯೋಜಿಸಿರುವ 3 ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಅವರು, ಸಂಘಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರಿಗೆ ಸಹಕಾರಿ ತತ್ವಗಳಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ. ಸಂಘದಿಂದ ಅದರ ಸದಸ್ಯರಿಗೆ ಆರ್ಥಿಕ ಅನುಕೂಲಗಳನ್ನು ಒದಗಿಸಿಕೊಡಲು ವಿಶ್ವಾಸ ಉಳಿಸಿಕೊಳ್ಳುವುದು ಮುಖ್ಯವಾಗಿದೆ ಎಂದರು.

ಸಹಕಾರಿ ಬ್ಯಾಂಕ್‌ಗಳ ಮೇಲಿನ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತಿರುವಇಂದಿನ ದಿನಗಳಲ್ಲಿ ಸಂಘಗಳು ಯಶಸ್ವಿಯಾಗಬೇಕಾದರೆ ಆಡಳಿತ ಮಂಡಳಿ ಸದಸ್ಯರಲ್ಲಿ ವಿಶಾಲ ಮನೋಭಾವ,ಪ್ರಾಮಾಣಿಕತೆ ಮತ್ತು ಜನಸೇವೆ ಮಾಡುವ ಇಚ್ಚೆಯಿರಬೇಕು. ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಕಾರ್ಯತತ್ಪರತೆ ಇರಬೇಕು. ಆಡಳಿತ ಮಂಡಳಿಯು ಸೂಕ್ತ ನಿರ್ವಹಣೆ ಮಾಡಬೇಕು, ಉತ್ತಮ ಆಡಳಿತ ನಿರ್ವಹಣೆ ರೂಢಿಸಿಕೊಂಡ ಸದಸ್ಯರು ಸಂಘದ ಬೆಳವಣಿಗೆಗೆ ಕಾರಣರಾಗುತ್ತಾರೆ. ನೂತನ ವ್ಯವಹಾರಿಕ ನಿರ್ವಹಣೆ ಸೂತ್ರಗಳನ್ನು ಕಲಿಯಲು ತರಬೇತಿಗಳಲ್ಲಿ ಭಾಗವಹಿಸುವುದು ಅವಶ್ಯಕವಾಗಿದೆ ಎಂದರು.

ಸಹಕಾರಿ ಸಂಘಗಳಲ್ಲಿ ಸಾಲ ತೆಗೆದುಕೊಂಡು ಕಟ್ಟದೇ ಇದ್ದಲ್ಲಿ ಅವ್ಯವಹಾರ ನಡೆಸಿದಲ್ಲಿ ಆಡಳಿತ ಮಂಡಳಿಯೇ ಜವಾಬ್ದಾರಿ ಯಾಗುತ್ತದೆ. ಆದ್ದರಿಂದ ಸಾಲ ಮಂಜೂರಾಗುವ ಸದಸ್ಯರಿಗೆ ಸಾಲ ಮರುಪಾವತಿ ಪ್ರಶಿಕ್ಷಣ ನೀಡಿದ ಬಳಿಕ ಸಾಲ ನೀಡುವ ವ್ಯವಸ್ಥೆ ತರಬೇಕಾಗಿದೆ ಎಂದು ಹೇಳಿದರು. ಡಿಸಿಸಿ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ವಿಠಲ ರೆಡ್ಡಿ ಮಾತನಾಡಿ, ಸಹಕಾರಿ ಸಂಘಗಳು ವ್ಯವಹಾರ ಅಭಿವೃದ್ಧಿ ಮೂಲಕ ಸ್ವಾವಲಂಬಿಗಳಾಗಬೇಕು. ಊರಿನ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಸದಸ್ಯರು ದೂರದೃಷ್ಠಿ ಯೋಜನೆ ಹೊಂದಿರಬೇಕು. ಸಾಲ ಮರುಪಾವತಿಯಾಗದೇ ಇದ್ದಲ್ಲಿ ಸಹಕಾರಿ ಸಂಘಗಳ ಕಾಯ್ದೆ ಕಲಂ 70ರ ಪ್ರಕಾರ ನಿಬಂಧಕರಲ್ಲಿ ಕೇಸ್‌ ದಾಖಲಿಸುವ ಮೂಲಕ ವಸೂಲಿ ಮಾಡಬಹುದಾಗಿದೆ.  ಸರಕಾರ ನೀಡಿರುವ ಕಾನೂನು ಸೌಲಭ್ಯವನ್ನು ಸಂಘಗಳು ಬಳಸಿಕೊಳ್ಳಬೇಕು. ಉತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕ ರೈತರಿಗೆ ನೆರವಾಗಬೇಕು. ಸಮಾಜದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದರು.

ಬಸವರಾಜ ಕಲ್ಯಾಣ ಮಾತನಾಡಿದರು. ಕಲಬುರ್ಗಿ ಗಾರೆಂಪಳ್ಳಿ ಸಂಘದ ಅಧ್ಯಕ್ಷ ತುಕ್ಕಪ್ಪಾ, ಚಿಂಚೋಳಿಯ ಜಗದೇವಪ್ಪಾ ಇದ್ದರು. ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನಿಲ ಪರೇಶ್ಯಾನೆ, ಮಹಾಲಿಂಗ ಕಟಗಿ, ಅಪ್ಪಣ್ಣಾ ಕಾರ್ಯಕ್ರಮ ನಿರ್ವಹಿಸಿದರು. ಎಸ್‌.ಜಿ. ಪಾಟೀಲ ವಂದಿಸಿದರು

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.