![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
Bidar: ಮೋದಿ ಸರ್ಕಾರದಲ್ಲಿ ಪಾರದರ್ಶಕತೆ ಆಡಳಿತ; ದೇಶದ ಅಭಿವೃದ್ಧಿಗೆ ಮೋದಿ ಅನಿವಾರ್ಯ
ದೇಶದಲ್ಲಿ 54 ಕೋಟಿಗೂ ಹೆಚ್ಚು ಉದ್ಯೋಗ ಸೃಷ್ಟಿ ಮಾಡಲಾಗಿದೆ
Team Udayavani, Apr 3, 2024, 2:22 PM IST
![Bidar: ಮೋದಿ ಸರ್ಕಾರದಲ್ಲಿ ಪಾರದರ್ಶಕತೆ ಆಡಳಿತ; ದೇಶದ ಅಭಿವೃದ್ಧಿಗೆ ಮೋದಿ ಅನಿವಾರ್ಯ](https://www.udayavani.com/wp-content/uploads/2024/04/Khoba-620x385.jpg)
ಉದಯವಾಣಿ ಸಮಾಚಾರ
ಬೀದರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ 10 ವರ್ಷಗಳ ಅವ ಧಿಯಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದು, ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ಆಶಾಭಾವ ಮೂಡಿಸಿದೆ.ಹೀಗಾಗಿ ಅಭಿವೃದ್ಧಿ ದೃಷ್ಟಿಯಿಂದ ದೇಶಕ್ಕೆ ಮೋದಿ ಮತ್ತೂಮ್ಮೆ ಅನಿವಾರ್ಯವಾಗಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ವರ್ಗಗಳಿಗೆ ಸಾಮಾಜಿಕ ಸುರಕ್ಷತಾ ಯೋಜನೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಒತ್ತು ಕೊಟ್ಟ ಪರಿಣಾಮ ದೇಶದ ಜನರ ಜೀವನದಲ್ಲಿ ಬದಲಾವಣೆ ಕಾಣುತ್ತಿದ್ದೇವೆ.
2014ರ ಮೊದಲು ಯೋಜನೆಗಳು ರೂಪುಗೊಂಡರೂ ಭ್ರಷ್ಟಾಚಾರ, ಪಾರದರ್ಶಕವಾಗಿ ಅನುಷ್ಠಾನ ಆಗುತ್ತಿರಲಿಲ್ಲ. ಆದರೆ, ಮೋದಿ ಸರ್ಕಾರದಲ್ಲಿ ಪಾರದರ್ಶಕತೆ ಆಡಳಿತದಿಂದಾಗಿ ಇಂದು ಗುರಿ ಸಾಧಿಸಲು ಸಾಧ್ಯವಾಗಿದೆ. ಗತಿ ಶಕ್ತಿ ಯೋಜನೆಯಿಂದಾಗಿ
ಪ್ರಧಾನಿಗಳು ಯೋಜನೆಗಳನ್ನು ಶಂಕುಸ್ಥಾಪನೆ ನೆರವೇರಿಸಿದ ಎರಡು ವರ್ಷದಲ್ಲೇ ಲೋಕಾರ್ಪಣೆ ಆಗಿದ್ದು, ಇದು ಯಾವ
ಕಾಲದಲ್ಲಿಯೂ ನಡೆದಿರಲಿಲ್ಲ ಎಂದರು.
ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆದು ಆರ್ಥಿಕವಾಗಿ ಬೆಳವಣಿಗೆ ಹೊಂದಿದ್ದು, ಇದರಿಂದ ದೇಶದಲ್ಲಿ 25 ಕೋಟಿ ಜನರು ಬಡತನ ರೇಖೆಗಿಂತ ಕೆಳಗೆ ಬಂದಿದ್ದಾರೆ. ಮುದ್ರಾ ಯೋಜನೆಯಡಿ 46 ಕೋಟಿ ಜನರಿಗೆ 27 ಲಕ್ಷ ಕೋಟಿ ರೂ. ಸೌಲಭ್ಯ ನೀಡಲಾಗಿದ್ದು, ಈ ಮೂಲಕ ದೇಶದಲ್ಲಿ 54 ಕೋಟಿಗೂ ಹೆಚ್ಚು ಉದ್ಯೋಗ ಸೃಷ್ಟಿ ಮಾಡಲಾಗಿದೆ. ಕಾಂಗ್ರೆಸ್ ಟೀಕಿಸಿದ್ದ ಜನ-ಧನ ಖಾತೆಯನ್ನು 50 ಕೋಟಿ ಜನರು ತೆರೆದು ಸುಮಾರು 2.05 ಲಕ್ಷ ಕೋಟಿ ಹಣ ಜಮಾ ಮಾಡಿದ್ದಾರೆ. ಡಿಬಿಡಿ ಮೂಲಕ ನೇರವಾಗಿ ಫಲಾನುಭವಿಗಳಿಗೆ ಹಣ ಜಮೆಯಿಂದ 2 ಲಕ್ಷ ಕೋಟಿ ರೂ. ಸರ್ಕಾರಕ್ಕೆ ಉಳಿತಾಯವಾಗಿದೆ ಎಂದು ಮಾಹಿತಿ ನೀಡಿದರು.
ದೇಶದಲ್ಲಿ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ಬಡವರಿಗಾಗಿ ಕೇವಲ 71 ಲಕ್ಷ ಮನೆ ನಿರ್ಮಾಣ ಆಗಿದ್ದರೆ, ಎನ್ಡಿಎ ಸರ್ಕಾರದ ಕಾಲಾವ ಧಿಯಲ್ಲಿ 4 ಕೋಟಿ ಮನೆಗಳು ಆಗಿವೆ. ಜೆಜೆಎಂ ಅಡಿ 14 ಕೋಟಿ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, 12 ಕೋಟಿ ಮನೆಗಳಿಗೆ ಶೌಚಾಲಯಗಳು ನಿರ್ಮಾಣ ಆಗಿದೆ. ಬೇಟಿ ಬಚಾವೋ- ಬೇಟಿ ಪಡಾವೋ ಕಾರ್ಯಕ್ರಮದಿಂದ ಲಿಂಗಾನುಪಾತ ಹೆಚ್ಚಳವಾಗಿದೆ. ಕೇವಲ 355 ಇದ್ದ ಸ್ಟಾರ್ಟ್ ಅಪ್ಗಳ ಸಂಖ್ಯೆ ಈಗ 1.25 ಲಕ್ಷಕ್ಕೆ ತಲುಪಿದೆ. 723 ಇದ್ದ ವಿಶ್ವವಿದ್ಯಾಲಯಗಳ ಸಂಖ್ಯೆ 1,113ಕ್ಕೆ ಹೆಚ್ಚಳವಾಗಿದೆ.
ಇದರಿಂದ ವಿಶ್ವದ ಅತಿ ದೊಡ್ಡ ಆರ್ಥಿಕತೆ ದೇಶಗಳ ಪಟ್ಟಿಯಲ್ಲಿ ಭಾರತ ಈಗ 11 ರಿಂದ 5ನೇ ಸ್ಥಾನಕ್ಕೆ ಬಂದಿದೆ ಎಂದು ಸರ್ಕಾರದ
ಸಾಧನೆ ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಶರಣು ಸಲಗರ, ಸಿದ್ದು ಪಾಟೀಲ, ಎಂಎಲ್ಸಿ ರಘುನಾಥರಾವ್ ಮಲ್ಕಾಪುರೆ, ಬೀದರ ಕ್ಷೇತ್ರದ ಪ್ರಭಾರಿ ರಾಜಕುಮಾರ ಪಾಟೀಲ ತೇಲ್ಕೂರ್, ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಪ್ರಮುಖರಾದ ಶಶಿ ಹೊಸಳ್ಳಿ, ಜಯಕುಮಾರ ಡಾಂಗೆ, ಕಿರಣ ಪಾಟೀಲ, ಪೀರಪ್ಪ ಯರನಳ್ಳಿ ಇತರರಿದ್ದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.