ಆತ್ಮ-ಪರಮಾತ್ಮನ ಅರಿತವ ನಿಜಶರಣ


Team Udayavani, Sep 10, 2018, 12:58 PM IST

bid-3.jpg

ಭಾಲ್ಕಿ: ನಮ್ಮ ಜನ್ಮ, ಮರಣ ದುಃಖಗಳ ನಿವಾರಣೆಗಾಗಿ ಸೋಹಂ, ಶಿವೋಹಂ ಎನ್ನುವ ಪರಿಜ್ಞಾನ ಹೊಂದಿರುವ
ಮಹಾತ್ಮರ ಚರಣ ಆಶ್ರಯ ಹೊಂದಬೇಕು ಎಂದು ಬೀದರ ಗುರುದೇವಾಶ್ರಮದ ಶ್ರೀ ಗಣೇಶಾನಂದ ಮಹಾರಾಜರು
ಹೇಳಿದರು.

ಬ್ಯಾಲಹಳ್ಳಿ(ಕೆ) ಗ್ರಾಮದ ಶ್ರೀ ಶಿವಾನಂದ ಕೈಲಾಸ ಆಶ್ರಮದಲ್ಲಿ ರವಿವಾರ ನಡೆದ ಶ್ರಾವಣ ಮಾಸದ ಸತ್ಸಂಗ ಪ್ರವಚನ ಸಮಾರೋಪ ಸಮಾರಂಭದ ನೇತೃತ್ವ ವಹಿಸಿ ಮಾತನಾಡಿದ ಅವರು, ಸದ್ಗುರುಗಳ ಕೃಪೆ ಆಗಲು ಅದಕ್ಕೆ ತಕ್ಕ ಪುಣ್ಯ ಗಳಿಸಬೇಕು. 

ಸಂಸಾರದ ದುಃಖದಿಂದ ಮುಕ್ತಿ ಹೊಂದಲು ಸದಾ ಸದ್ಗುರುಗಳ ಚಿಂತನೆ ಮಾಡುತ್ತಿರಬೇಕು. ಆತ್ಮ, ಪರಮಾತ್ಮನನ್ನು ಅರಿತುಕೊಂಡಾತನೇ ನಿಜಶರಣ. ಅದಕ್ಕಾಗಿ ಅಂದಿನ ಶರಣರು ತಮ್ಮ ವಚನಗಳಲ್ಲಿ ಅರಿದೊಡೆ ಶರಣ, ಮರೆತೊಡೆ ಮಾನವ ಎಂದು ತಿಳಿಸಿದ್ದಾರೆ. ಜೀವ ಪರಮಾತ್ಮನ ಪರಿಪೂರ್ಣ ಜ್ಞಾನ ಇರುವಾತನೆ ಶರಣ.

ಪರಮಾತ್ಮನನ್ನು ಅರಿಯುವುದೇ ಜೀವನದ ಅತಿ ದೊಡ್ಡ ಸಾಧನವಾಗಿದೆ. ಎಲ್ಲ ಜ್ಞಾನಗಳಿಗಿಂತಲೂ ಆತ್ಮ, ಪರಮಾತ್ಮನನ್ನು ತಿಳಿದುಕೊಳ್ಳುವುದೆ ನಿಜವಾದ ಜ್ಞಾನವಾಗಿದೆ. ಕಾರಣ ಸಂಸಾರದಲ್ಲಿದ್ದುಕೊಂಡು ಸದ್ಗತಿ
ಕಾಣಬೇಕಾದರೆ ಇಂತಹ ಸತ್ಸಂಗಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದರು. 

ಸಾನ್ನಿಧ್ಯ ವಹಿಸಿದ್ದ ಶ್ರೀ ಗುರುಲಿಂಗ ಮಹಾಸ್ವಾಮಿಗಳು ಮಾತನಾಡಿ, ಜ್ಞಾನದಿಂದ ಮೋಕ್ಷ ಸಂಪಾದಿಸುವುದಕ್ಕೆ
ವಿವೇಕ ಒಂದೇ ಸಾಕು. ವಿವೇಕ ಸಾಧಿಸಲು ವೈರಾಗ್ಯ ಬೇಕು. ನಿಜವಾದ ವೈರಾಗಿಗಳಿಗೆ ಸ್ವರ್ಗಭೋಗ ಸಿಗುವುದು. ಅದನ್ನು ದಾಟಿ ಮುಕ್ತಿ ಪಡೆಯಲು ಸಾಧನೆ ಮಾಡಬೇಕು ಎಂದು ಹೇಳಿದರು.

ಗ್ರಾಪಂ ಉಪಾಧ್ಯಕ್ಷ ಅನೀಲಕುಮಾರ ಪಸರ್ಗೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರಾವಣ ಸತ್ಸಂಗ ಸಮಾರೋಪ
ಸಮಾರಂಭಕ್ಕೆ ಸಂಸದ ಭಗವಂತ ಖೂಬಾ ಆಗಮಿಸಬೇಕಿತ್ತು. ಕಾರಣಾಂತರಗಳಿಂದ ಅವರಿಗೆ ಈ ಸಮಾರಂಭದಲ್ಲಿ ಭಾಗವಹಿಸಲು ಆಗಲಿಲ್ಲ. ಶ್ರೀ ಶಿವಾನಂದ ಕೈಲಾಸ ಆಶ್ರಮದ ಪ್ರತಿಯೊಂದು ಕಾರ್ಯಕ್ರಮಗಳಿಗೆ ರಾಜ್ಯ
ಮತ್ತು ಪರ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಇವರ ತಂಗುವಿಕೆಗಾಗಿ ಯಾತ್ರಾ ನಿವಾಸ ಮತ್ತು ಅನ್ನಪೂರ್ಣೇಶ್ವರಿ ಪ್ರಸಾದ ನಿಲಯದ ಬೇಡಿಕೆ ಇದೆ. ಸಂಸದರ ನಿಧಿಯಿಂದ ಈ ಬೇಡಿಕೆಗಳನ್ನು ಪೂರ್ಣಗೊಳಿಸಲು
ಸಹಕರಿಸಲಾಗುವುದು ಎಂದು ಹೇಳಿದರು.

ಕುರುಬಖೇಳಗಿಯ ಶರಣಪ್ಪ ಬೆಟ್ಟದ ಪ್ರಾಸ್ತಾವಿಕವಾಗಿ ಮಾತನಾಡಿದು. ಗ್ರಾಮದ ಪ್ರಮುಖರಾದ ಸಂಜಿವಕುಮಾರ ಪಾಟೀಲ, ಭೀಮರಾವ್‌ ಹೊಸದೊಡ್ಡಿ, ಸಂಗಪ್ಪಾ ಹೊಸದೊಡ್ಡಿ, ಬಸವರಾಜ ಪಾಟೀಲ ಕಮಲಾಪೂರ, ಬಾಬುರಾವ್‌ ಪಾಟೀಲ ಬ್ಯಾಲಹಳ್ಳಿ(ಕೆ), ಪಿಕೆಪಿಎಸ್‌ ಸದಸ್ಯ ಶಿವಕುಮಾರ ಪಾಟೀಲ, ವೈಜಿನಾಥಪ್ಪ ದಾಬಶೆಟ್ಟಿ, ಡಾ| ಸುಭಾಷ ಅಂಬೆಸಿಂಗಿ, ವೈಜಿನಾಥಪ್ಪ ಕನಕಟ್ಟೆ, ಅಣ್ಣಪ್ಪಾ ಹೊಸಮನಿ ಇದ್ದರು. ಓಂಶೆಟ್ಟಿ ಮರಕಲ ಬ್ಯಾಲಹಳ್ಳಿ(ಕೆ) ಸ್ವಾಗತಿಸಿದರು. ರಮೇಶ ಶ್ರೀಮಂಡಲ ನಿರೂಪಿಸಿದರು. ವಿಜಯಕುಮಾರ ಗೌಡಗಾವೆ ವಂದಿಸಿದರು. 

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.