ಕ್ಷಯರೋಗ ಪತ್ತೆ ಆಂದೋಲನ


Team Udayavani, Nov 19, 2019, 12:39 PM IST

bidar-tdy-2

ಬೀದರ: ಜಿಲ್ಲೆಯಲ್ಲಿ ನ. 25ರಿಂದ ಡಿ.10ರ ವರೆಗೆ ನಡೆಯಲಿರುವ ಕ್ಷಯರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮ ನಿಮಿತ್ತ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಯಿತು.

ಈ ವೇಳೆ ಸಿಇಒ ಅವರು ಮಾತನಾಡಿ, ಹೆಚ್ಚು ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇರುವುದರಿಂದ ಇವರ ಮಾಹಿತಿ ಪಡೆಯಬೇಕು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಶಿಕ್ಷಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ತಾಲೂಕು, ಹೋಬಳಿ ಮತ್ತು ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಈ ಅಭಿಯಾನದಲ್ಲಿ ಜಿಲ್ಲೆಯ 410010 ಜನರನ್ನು ಸಮೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದಕ್ಕಾಗಿ 607 ತಂಡಗಳು ರಚಿಸಲಾಗಿದ್ದು, 1,214 ಸದಸ್ಯರ ಅವಶ್ಯಕತೆಯಿದೆ. 366 ಮೇಲ್ವಿಚಾರಕರು, 685 ಆಶಾ ಕಾರ್ಯಕರ್ತೆಯರು, 250 ಸ್ವಯಂ ಸೇವಕರು ಭಾಗವಹಿಸುವರು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ|ದೀಪಾ ಖಂಡ್ರೆ ಮಾತನಾಡಿ, ಕ್ಷಯರೋಗವು ಮೈಕ್ರೋಬ್ಯಾಕ್ಟಿರಿಯಂ ಟ್ಯೂಬರಕ್ಯುಲೋಸಿಸ್‌ಎಂಬ ರೋಗಾಣುವಿನಿಂದ ಬರುತ್ತದೆ. ಸೋಂಕಿತ ವ್ಯಕ್ತಿ ಸೀನುವುದು ಮತ್ತು ಕೆಮ್ಮಿದಾಗ ಹೊರಬರುವ ರೋಗಾಣುಗಳು ಗಾಳಿಯಲ್ಲಿ ಸೇರಿಕೊಂಡು ಒಬ್ಬರಿಂದೊಬ್ಬರಿಗೆ ಹರಡುತ್ತವೆ. ಈ ಕಾಯಿಲೆಗೆ ಹೆದರಬೇಕಾಗಿಲ್ಲ. ರೋಗ ಪೀಡಿತರು ಕಾಯಿಲೆಯನ್ನು ಗುಪ್ತವಾಗಿಡದೇ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆರು, ಹಾಗೂ ಸ್ವಯಂ ಸೇವಕರ ಗಮನಕ್ಕೆ ತಂದು ಪ್ರಾರಂಭಿಕ ಹಂತದಲ್ಲೆ ಪತ್ತೆ ಹಚಿದಲ್ಲಿ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸ ಬಹುದಾಗಿದೆ. ಯಾವುದೇ ವ್ಯಕ್ತಿ ಕ್ಷಯರೋಗದಿಂದ ಬಳಲುತ್ತಿದ್ದಲ್ಲಿ ಅವರನ್ನು ಗುಣಪಡಿಸಲು ಸಹಕರಿಸುವ ವಾತಾವರಣ ನಿರ್ಮಿಸಬೇಕಿದೆ ಎಂದು ಹೇಳಿದರು.

ಬ್ರಿಮ್ಸ್‌ ವೈದ್ಯಕೀಯ ಆಸ್ಪತ್ರೆಯ ಡಾ| ಮಹೇಶ ತೊಂಡಾರೆ ಅವರು ಕ್ಷಯರೋಗದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ|ಇಂದುಮತಿ ಪಾಟೀಲ, ಡಾ|ರವೀಂದ್ರ ಸಿರಸಗೆ, ಡಾ|ರಾಜಶೇಖರ ಪಾಟೀಲ, ಡಾ| ಕೃಷ್ಣಾ ರೆಡ್ಡಿ, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ|ಶರಣಯ್ಯ ಸ್ವಾಮಿ, ಡಾ| ಶಿವಕುಮಾರ ಸಿದ್ದೇಶ್ವರ, ಡಾ|ಶರಣಪ್ಪಾ ಮುಡಬಿ, ಡಾ|ವೈಜಿನಾಥ ತುಗಾಂವೆ, ಗೌತಮ ಜ್ಯೋತಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.