ಎರಡು ಜಿಂಕೆ ಬೇಟೆ; 60 ಗುಂಡು-ವಾಹನ ವಶ
Team Udayavani, Feb 2, 2019, 7:36 AM IST
ಬಸವಕಲ್ಯಾಣ: ಬೇಲೂರು ಹಾಗೂ ಮಿರಖಲ ತಾಂಡಾದ ಮಧ್ಯ ಶುಕ್ರವಾರ ನಸುಕಿನ ವೇಳೆ ಎರಡು ಜಿಂಕೆಗಳನ್ನು ಬೇಟೆ ಆಡಿ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ವಾಹನವನ್ನು ಹಿಡಿಯುವಲ್ಲಿ ಹುಸಲೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹುಲಸೂರು ಪೊಲೀಸ್ ಠಾಣೆಯ ಪ್ರೋಫೇಶನರಿ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಅವರು ರಾತ್ರಿ ಸಮಯದಲ್ಲಿ ಗಸ್ತು ತಿರುಗುವಾಗ, ಪೊಲೀಸರ ವಾಹನ ಕಂಡು ಬೇಟೆಗಾರರು ಟವೇರಾ ವಾಹನ ಹಿಂತಿರುಗಿಸಿ ಹೋಗುವಾಗ ಅನುಮಾದಿಂದ ಪೊಲೀಸರು ಬೆನ್ನು ಹತ್ತಿದ್ದಾರೆ. ಆಗ ವಾಹನದ ಒಳಗೆ ಇದ್ದ ಐದಾರು ಜನ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ನಂತರ ಕಾರನ್ನು ಪೊಲೀಸ್ ಠಾಣೆಗೆ ತಂದು ತನಿಖೆ ಮಾಡಿದಾಗ, ಕಾರಿನಲ್ಲಿ ಒಂದು ಗಂಡು- ಒಂದು ಹೆಣ್ಣು ಜಿಂಕೆಗಳ ಮೃತ ದೇಹ, 60 ಜೀವಂತ ಗುಂಡುಗಳು ಮತ್ತು ಎರಡು ಫೋಕಸ್ ಬ್ಯಾಟರಿಗಳು ಪತ್ತೆಯಾಗಿವೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಬಸವಕಲ್ಯಾಣ ಸಿಪಿಐ ಮಲ್ಲಿಕಾರ್ಜುನ ಯಾತನೂರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಪಂ ಇಒ ಮಡೋಳಪ್ಪಾ ಪಿ.ಎಸ್., ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಆನಂದ ಪಾಟೀಲ ಇದ್ದರು. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು
Bidar; ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ
ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್
Bidar; 15 ಕೋಟಿ ರೂ. ಮೌಲ್ಯದ ಗಾಂಜಾ ಪೊಲೀಸರಿಂದ ಜಪ್ತಿ: ಇಬ್ಬರ ಬಂಧನ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Ramanagara: ತಂದೆಯಿಂದಲೇ ಮಗನ ಕೊಲೆ.!
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು