ಗುಳೆ ತಪ್ಪಿಸಲು ನೆರವಾದ ಉದ್ಯೋಗ ಖಾತ್ರಿ


Team Udayavani, May 14, 2022, 6:01 PM IST

24job

ಮುದಗಲ್ಲ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದ್ದರಿಂದ ಬೇಸಿಗೆ ಕಾರಣ ಊರು ತೊರೆಯಲು ಸಿದ್ಧರಾಗಿದ್ದ ಕೂಲಿ ಕಾರ್ಮಿಕರಿಗೆ ಒಂದಿಷ್ಟು ನರೇಗಾ ಕಾಮಗಾರಿ ನೆರವಾಗಿದೆ.

ಮುದಗಲ್ಲ ಸಮೀಪದ ಕನ್ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವ್ಯಾಸನಂದಿಹಾಳ ಕೆರೆ ಅಭಿವೃದ್ಧಿ ಕಾವåಗಾರಿಯಲ್ಲಿ ತಿಮ್ಮಾಪೂರ 425 ಜನ, ವ್ಯಾಸನಂದಿಹಾಳ 300 ಜನ, ಕನ್ನಾಳ ಗ್ರಾಮದ 300 ಜನ ಇದರಲ್ಲಿ 350 ಜನ ಪುರುಷರು, 675 ಜನ ಮಹಿಳೆಯರು ಒಟ್ಟು 1025 ಜನ ಕೂಲಿ ಕೆಲಸ ನಿರ್ವಹಿಸಿದ್ದಾರೆ. ಈ ಬಾರಿ ಅಂಗವಿಕಲ ಕೂಲಿಕಾರರಿಗೂ ಕೆಲಸ ನೀಡಿರುವುದು ವಿಶೇಷ.

ಒಟ್ಟು 6,88,380 ರೂ.ಗಳನ್ನು ಕೂಲಿ ರೂಪದಲ್ಲಿ ಪಾವತಿಸಲಾಗಿದೆ. 9 ಎಕರೆ ವಿಸ್ತೀರ್ಣ ಹೊಂದಿರುವ ಕೆರೆಯಲ್ಲಿ ನೀರು ಸಂಗ್ರವಾದರೆ, ಅಂತರ್ಜಲಮಟ್ಟ ಹೆಚ್ಚುವುದಲ್ಲದೇ, ರೈತರ ಕೊಳವೆಬಾವಿಗೆ ಜಲ ಮರುಪೂರಣವಾಗುವುದಲ್ಲದೆ ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಉಪಯೋಗವಾಗಲಿದೆ.

ಸರಕಾರಿ ಜಾಲಿ ಮುಳ್ಳುಗಳಿಂದ ಕೆರೆಯ ದಂಡೆಗಳು ಮುಚ್ಚಿದ್ದವು. ಕೆರೆಯ ದಡಕ್ಕೆ ಇಲಿಗಳು, ಹೆಗ್ಗಣಗಳು, ರಂಧ್ರ ಹಾಕಿದ್ದರಿಂದ ಕೆರೆಯಲ್ಲಿ ಸಂಗ್ರಹವಾದ ನೀರು ಸೋರಿ ಹೋಗುತ್ತಿತ್ತು. ಆದರೆ ಈಗ ಮಣ್ಣು ಹಾಕಿದ್ದರಿಂದ ಕೆರೆಯ ಚಿತ್ರಣವೇ ಬದಲಾಗಿದೆ. 10 ಫೀಟ್‌ ಉದ್ದ, 5 ಫೀಟ್‌ ಅಗಲ ಹಾಗೂ ಒಂದೂವರೆ ಫೀಟ್‌ ಆಳದಂತೆ ಜೋಡಿಗೆ ಅಳತೆಯಂತೆ ಕೆಲಸ ಮಾಡಲು ತಿಳಿಸಲಾಗಿದೆ.

7 ದಿನ 220 ಜನ ಕೆಲಸಕ್ಕೆ ಹಾಜರಾಗಿದ್ದು ಕೂಲಿ ಕಾರ್ಮಿಕರಿಗೆ ಬ್ಯಾಂಕ್‌ ಖಾತೆಯ ಮೂಲಕ ಆಧಾರ ಬೇಸಡ್‌ ಕೂಲಿ ಪಾವತಿಸಲಾಗುತ್ತಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜೆ. ಮಲ್ಲಿಕಾರ್ಜುನ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕೆರೆ ಹೂಳು ತೆಗೆಯುವ ಕೆಲಸ ಕೊಟ್ಟಿದ್ದರಿಂದ ಬೇರೆ ಕಡೆ ಕೆಲಸ ಹುಡುಕಿಕೊಂಡು ಗುಳೆ ಹೋಗುವುದು ತಪ್ಪಿದ ಜತೆಗೆ ಮಕ್ಕಳ ಪಾಲನೆ-ಪೋಷಣೆಗೆ ಅನುಕೂಲವಾಗಿದೆ. -ಗೌರಮ್ಮ ಬುದ್ದಿನ್ನಿ,ಕೂಲಿಯಾಳು

ಕೂಲಿ ಪಾವತಿಯಲ್ಲಿ ತಾಂತ್ರಿಕ ತೊಂದರೆ ಬಿಟ್ಟರೆ ನಿಗದಿತ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ಕೂಲಿ ಪಾವತಿಯಾಗುತ್ತಿದೆ. -ದುರುಗಪ್ಪ ಬಿಂಗಿ, ಗ್ರಾಕೂಸ ಸಂಘಟನೆ ಮುಖ್ಯಸ್ಥ

ನೆಲ-ಜಲಸಂರಕ್ಷಣೆಗೆ ಕೆರೆ ಕಾಮಗಾರಿ ನಡೆಯುತ್ತಿದೆ. ಗ್ರಾಮಕ್ಕೆ ಒಂದು ಆಸ್ತಿಯೂ ನಿರ್ಮಾಣವಾಗುತ್ತಿದೆ. -ಅಮರೇಶ ಯಾದವ್‌, ಇಒ ತಾಪಂ ಮಸ್ಕಿ

-ದೇವಪ್ಪ ರಾಠೊಡ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.