ಯುಜಿಡಿ; ದಾಖಲೆಯಲ್ಲೂ ಗೋಲ್‌ಮಾಲ್‌

ಪುರಸಭೆಗೆ ಯಾವುದೇ ದಾಖಲೆಗಳು ಸಲ್ಲಿಸಿಲ್ಲ ಎಂದು ಪುರಸಭೆ ಅಧಿ ಕಾರಿ ಮಾಹಿತಿ ನೀಡಿದ್ದಾರೆ.

Team Udayavani, Feb 12, 2021, 5:50 PM IST

ಯುಜಿಡಿ; ದಾಖಲೆಯಲ್ಲೂ ಗೋಲ್‌ಮಾಲ್‌

ಹುಮನಾಬಾದ: ಕರ್ನಾಟಕ ಪೌರ ಸುಧಾರಣಾ ಯೋಜನೆಯಡಿ ಹುಮನಾಬಾದ ಪಟ್ಟಣದಲ್ಲಿ ಬಹು ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ಒಳಚರಂಡಿ ವ್ಯವಸ್ಥೆ ಕಾಮಗಾರಿ (ಯುಜಿಡಿ)ಗೆ ಸಂಬಂಧಿ ಸಿದ ಉಳಿದ ಹಣ ಪಾವತಿ ಮಾಡುವಂತೆ ಗುತ್ತೆದಾರ ಪುರಸಭೆಗೆ ಪತ್ರ ಬರೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಡಿಸೆಂಬರ್‌ ತಿಂಗಳಲ್ಲಿ ಪುರಸಭೆ ಮುಖ್ಯಾಧಿ ಕಾರಿಗೆ ಪತ್ರ ಬರೆದಿರುವ ಗುತ್ತಿಗೆ ಪಡೆದ ಗುತ್ತೆದಾರ, ಯುಜಿಡಿ ಕಾಮಗಾರಿಗಾಗಿ ಇರಿಸಿದ ಬ್ಯಾಂಕ್‌ ಖಾತರಿ ಹಣ ಹಾಗೂ ಕಾಮಗಾರಿಯ ಉಳಿದ ಹಣ ನಿಯಮ ಅನುಸಾರ ಪಾವತಿ ಮಾಡುವಂತೆ ಪತ್ರ ಬರೆದಿದ್ದಾರೆ. ಹಣ ಪಾವತಿ ತಡವಾದರೆ ವರ್ಷಕ್ಕೆ ಶೇ.18 ಬಡ್ಡಿ ಪಾವತಿ ಮಾಡಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ. ಕಾಮಗಾರಿಯ ಬಾಕಿ ಹಣ 83.71 ಲಕ್ಷ ರೂ. ಹಾಗೂ ಬ್ಯಾಂಕ್‌ ಖಾತರಿ ಹಣ ಪಾವತಿ
ಮಾಡಬೇಕು ಎಂದು ವಿವರಿಸಿದ್ದಾರೆ.

ಲಭ್ಯವಿಲ್ಲ ದಾಖಲೆ: ಬಹು ಕೋಟಿ ವೆಚ್ಚದಲ್ಲಿ ಪಟ್ಟಣದಲ್ಲಿ ನಡೆದ ಯುಜಿಡಿ ಕಾಮಗಾರಿಗೆ ಸಂಬಂಧಿಸಿದಂತೆ ಯಾವ ದಾಖಲೆಗಳು ಕೂಡ ಸ್ಥಳೀಯ ಪುರಸಭೆಯಲ್ಲಿ ಲಭ್ಯ ಇಲ್ಲ ಎಂಬ ಮಾಹಿತಿ ಬಹಿರಂಗಗೊಂಡಿದೆ. ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಹಾಗೂ ಪುರಸಭೆ ಅ ಧಿಕಾರಿಗಳ ಮಧ್ಯೆ ನಡೆಯುತ್ತಿರುವ ಪತ್ರ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಬಿಟ್ಟರೆ ಯುಜಿಡಿ ಕಾಮಗಾರಿಯ ಸ್ಕೋಪ್‌ ಆಫ್‌ ವರ್ಕ್‌, ಕಾಮಗಾರಿಯ ಕ್ರಿಯಾ ಯೋಜನೆ, ಕಾರ್ಯ ನಿರ್ವಹಣೆ ವಿವರ, ಕಾಮಗಾರಿಯ ವಸ್ತುಗಳ ವಿವರ, ಕಾಮಗಾರಿಯ ಪೂರ್ಣ ವಿವರದ ಯಾವ ದಾಖಲೆಗಳು ಕೂಡ ಪುರಸಭೆಯಲ್ಲಿ ಲಭ್ಯವಿಲ್ಲ. ಕಾಮಗಾರಿ ಮಾಡಿದ ಗುತ್ತೆದಾರರು ಸಂಬಂಧಿಸಿದ ಇಂಜಿನಿಯರ್‌ ಅಥವಾ ಪುರಸಭೆಗೆ ಯಾವುದೇ ದಾಖಲೆಗಳು ಸಲ್ಲಿಸಿಲ್ಲ
ಎಂದು ಪುರಸಭೆ ಅಧಿ ಕಾರಿ ಮಾಹಿತಿ ನೀಡಿದ್ದಾರೆ.

ಉನ್ನತ ತನಿಖೆ ನಡೆಸಿ: ಕಳೆದ ಅನೇಕ ವರ್ಷಗಳಿಂದ ಪಟ್ಟಣದಲ್ಲಿ ಯುಜಿಡಿ ಕಾಮಗಾರಿ ನಡೆಯುತ್ತಲೇ ಇದೆ. ಇಂದಿಗೂ ಕೂಡ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಮುಗಿದಿಲ್ಲ. ಪಟ್ಟಣದ ವಿವಿಧ ಬಡಾವಣೆಗಳಲ್ಲಿನ ಕೊಳಚೆ ನೀರು ಹರಿದು ಎಸ್‌ಟಿಪಿಗೆ ಸೇರುವ ಪ್ರಾಯೋಗಿಕ ಪರೀಕ್ಷೆ ನಡೆದಿಲ್ಲ.

ಪುರಸಭೆಯಲ್ಲಿ ಇದಕ್ಕೆ ಸಂಬಂಧಿಸಿದ ದಾಖಲೆಗಳು ದೊರೆಯುತ್ತಿಲ್ಲ. ಕಾಮಗಾರಿ ಮಾಡಿದ ಗುತ್ತೆದಾರ ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ಪುರಸಭೆಗೆ
ದಾಖಲೆಗಳು ಸಲ್ಲಿಸುವ ಬದಲಿಗೆ ನೇರವಾಗಿ ಕೆಯುಐಡಿಎಫ್‌ಸಿ ಇಲಾಖೆಗೆ ದಾಖಲೆಗಳು ಸಲ್ಲಿಸಿರುವುದು ಅನೇಕ ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು
ಉನ್ನತ ತನಿಖೆ ನಡೆಸುವ ಅವಶ್ಯಕತೆ ಹೆಚ್ಚಿದೆ.

15-10-2019ರಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಎಂದು ಗುತ್ತೆದಾರ ಕೆಯುಐಡಿಎಫ್‌ಸಿ ಇಲಾಖೆಗೆ ಪೂರ್ಣ ದಾಖಲೆ ಸಲ್ಲಿಸಿದ್ದು, ಆ ದಾಖಲೆಗಳಲ್ಲಿ ಕಾಮಗಾರಿ ಪೂರ್ಣಗೊಂಡಿರುವ ಕುರಿತು ವಿವಿಧ ಚಿತ್ರಗಳು ಕೂಡ ಲಗತ್ತಿಸಲಾಗಿದೆ. ಗುತ್ತೆದಾರ ಹಾಗೂ ಪುರಸಭೆ ಮುಖ್ಯಾಧಿ ಕಾರಿಗಳು ಚಿತ್ರಗಳಲ್ಲಿ ಕಂಡು ಬರುತ್ತಿದ್ದು, ಆ ಚಿತ್ರಗಳು ಕಾಮಗಾರಿ ಪೂರ್ಣಗೊಂಡ ಸಂದರ್ಭದಲ್ಲಿ ತೆಗೆದ ಚಿತ್ರಗಳು ಅಲ್ಲ.
ಶಂಭುಲಿಂಗ ದೇಸಾಯಿ, ಪುರಸಭೆ ಮುಖ್ಯಾಧಿಕಾರಿ

ಯುಜಿಡಿ ಕಾಮಗಾರಿ ಕುರಿತು ಗುತ್ತೆದಾರರು ಪುರಸಭೆಗೆ ಯಾವುದೇ ದಾಖಲೆ ಸಲ್ಲಿಸಿಲ್ಲ. ಕೂಡಲೇ ಕಾಮಗಾರಿಗೆ ಸಂಬಂಧಿಸಿದ ಎಲ್ಲ ದಾಖಲೆ ಪತ್ರಗಳು ಸಲ್ಲಿಸುವಂತೆ ಸೂಚಿಸಲಾಗಿದೆ. ಮುಂದಿನ ಕೆಲ ದಿನಗಳಲ್ಲಿ ಖುದ್ದು ಬಂದು ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ. ಈವರೆಗೆ ಕಾಮಗಾರಿ ಹಸ್ತಾಂತರಿಸಿಕೊಂಡಿಲ್ಲ. ಕಾಮಗಾರಿ ಸಂದರ್ಭದಲ್ಲಿ ಭೇಟಿ ನೀಡಿದ ಸಮಯದಲ್ಲಿ ಗುತ್ತೆದಾರರು ವಿವಿಧ ಚಿತ್ರಗಳು ತೆಗೆದುಕೊಂಡಿದ್ದು, ಆ ಚಿತ್ರಗಳು ಬಳಸಿಕೊಂಡು ಕಾಮಗಾರಿ ಪೂರ್ಣಗೊಂಡಿದೆ ಎಂದು ದಾಖಲೆ ಸೃಷ್ಟಿಸಿಕೊಂಡಿದ್ದಾರೆ. ಕಾಮಗಾರಿ ಕುರಿತು ಪೂರ್ಣ ವಿವರ ನೀಡಿ ಹಾಗೂ ಶಾಸಕರ ಸಮುಖ್ಯದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಿದ ನಂತರ ಹಸ್ತಾಂತರ ಮಾಡಿಕೊಳ್ಳುವುದಾಗಿ ತಿಳಿಸಲಾಗಿದೆ.
ಮಲ್ಲಿಕಾರ್ಜುನ ಸೀಗಿ, ಪುರಸಭೆ ಮಾಜಿ ಉಪಾಧ್ಯಕ್ಷ

*ದುರ್ಯೋಧನ ಹೂಗಾರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.