ದಶಕ ಹಿಂದೆಯೇ ಆತ್ಮನಿರ್ಭರ್‌ ಅನುಷ್ಠಾನ


Team Udayavani, Nov 20, 2020, 3:22 PM IST

ದಶಕ ಹಿಂದೆಯೇ ಆತ್ಮನಿರ್ಭರ್‌ ಅನುಷ್ಠಾನ

ಬೀದರ: ದೇಶದ ನಾಗರಿಕರನ್ನು ಆರ್ಥಿಕವಾಗಿಸಬಲರನ್ನಾಗಿ ಪ್ರಧಾನಿ ಮೋದಿ ಅನುಷ್ಠಾನಕ್ಕೆ ತಂದಿರುವ ಆತ್ಮ ನಿರ್ಭರ್‌ ಭಾರತ ಯೋಜನೆಯ ಕಲ್ಪನೆಯನ್ನು ಬೀದರ ಜಿಲ್ಲೆಯಲ್ಲಿ15 ವರ್ಷಗಳ ಹಿಂದೆಯೇ ಸಹಕಾರಿ ಧುರೀಣ ದಿ| ಗುರುಪಾದಪ್ಪ ನಾಗಮಾರಪಳ್ಳಿಯವರು ಜಾರಿಗೊಳಿಸಿದ್ದರು ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗ್ಮಾರಪಳ್ಳಿ ಹೇಳಿದರು.

ನಗರದ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆದ 67ನೇ ಅಖೀಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 1996ರಲ್ಲಿ ಸ್ವ-ಸಹಾಯ ಗುಂಪು ರಚಿಸಿ, ಮಹಿಳೆಯರಿಗೆ ಜೀವನ ನಡೆಸಲು ಮತ್ತು ಬದುಕು ಹಸನ ಮಾಡಿಕೊಳ್ಳಲು ದಿ| ನಾಗಮಾರಪಳ್ಳಿ ಅವರು ಡಿಸಿಸಿ ಬ್ಯಾಂಕಿನಿಂದ ಸಾಲ ಸೌಲಭ್ಯ ಕಲ್ಪಿಸಿದ್ದರು. ಎಸ್‌ಎಚ್‌ಜಿಗಳ ಮೂಲಕ ಜಿಲ್ಲೆಯ ಹೆಸರು ವಿಶ್ವದಲ್ಲಿ ರಾರಾಜಿಸುವಂತೆ ಮಾಡಿದ ಕೀರ್ತಿ ನಾಗಮಾರಪಳ್ಳಿಯವರಿಗೆ ಸಲ್ಲುತ್ತದೆ ಎಂದರು.

ಕೋವಿಡ್‌-19 ಸಂದರ್ಭದಲ್ಲಿ ದೇಶದ ಆರ್ಥಿಕತೆ ತತ್ತರಿಸಿದ ಹಿನ್ನಲೆ ಕೇಂದ್ರ ಸರ್ಕಾರ ಆತ್ಮನಿರ್ಭರ್‌ ಭಾರತ ಯೋಜನೆ ಮೂಲಕ ದೇಶದ ನಾಗರಿಕರನ್ನು ಆರ್ಥಿಕವಾಗಿ ಸಬರನ್ನಾಗಿ ಮಾಡುವ ಉದ್ದೇಶದಿಂದ ಧನ ಸಹಾಯ ನೀಡಿದಂತೆ ಸಿಎಂ ಬಿಎಸ್‌ವೈ ಸರ್ಕಾರ ಕೋವಿಡ್ ದಿಂದ ಸಂಕಷ್ಟದಲ್ಲಿರುವ ಜನರಿಗೆ ಸಹಕಾರ ಇಲಾಖೆಯಿಂದ ಸಹಾಯ ನೀಡಿದ್ದಾರೆ. ಬೀದರ ಸೇರಿ ಕಲ್ಬುರ್ಗಿ ವಿಭಾಗಕ್ಕೆ ಡಿಸಿಸಿ ಬ್ಯಾಂಕ್‌ಗಳ ಮೂಲಕ 1,857 ಕೋಟಿ ರೂ. ಆರ್ಥಿಕ ಸಹಾಯ ನೀಡಲಾಗಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮಹಮ್ಮದ್‌ ಸಲೀಮೊದ್ದೀನ್‌ ಮಾತನಾಡಿ, ಗುರುಪಾದಪ್ಪ ನಾಗಮಾರಪಳ್ಳಿಯವರು ಕಳೆದ ನಾಲ್ಕೈದು ದಶಕಗಳಿಂದ ನಡೆಸಿಕೊಂಡು ಬಂದಿದ್ದ ಡಿಸಿಸಿ ಬ್ಯಾಂಕ್‌ ಮತ್ತು ಎನ್‌ಎಸ್‌ಎಸ್‌ ಕೆಯನ್ನು ಉಮಾಕಾಂತ ನಾಗ್ಮಾರಪಳ್ಳಿಯವರು ಬಹಳ ಸಮರ್ಥವಾಗಿ ಮುನ್ನಡೆಸಿಕೊಂಡು ಬರುವ ಮೂಲಕ ತಂದೆಯ ಕನಸು ನನಸು ಮಾಡುತ್ತಿದ್ದಾರೆ. ನಿಸ್ವಾಥ ಮನೋಭಾವದಿಂದ ದುಡಿಯುತ್ತಿರುವ ಉಮಾಕಾಂತಗೆ ರಾಜ್ಯ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ, ಗೌರವಿಸಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ ಎಂದರು.

ಜಿಲ್ಲಾ ಸಹಕಾರ ಯುನಿಯನ್‌ ಅಧ್ಯಕ್ಷ ಪರಮೇಶ್ವರ ಮುಗಟೆ ಹಾಗೂ ಮಾಂಜರಾ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್‌ ಅಧ್ಯಕ್ಷೆಶಕುಂತಲಾ ಬೆಲ್ದಾಳೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಷ್ಕೃತ ಉಮಾಕಾಂತ ನಾಗಮಾರಪಳ್ಳಿ ಮತ್ತು ಪತ್ರಕರ್ತರಾದ ಗುರುರಾಜ ಕುಲಕರ್ಣಿ, ಶಶಿಕಾಂತ ಬಂಬುಳಗೆ ಅವರನ್ನು ಸನ್ಮಾನಿಸಲಾಯಿತು.

ಸಹಕಾರ ಸಂಘಗಳ ಸಹಾಯಕ ನಿಬಂಧಕ ಸಂಗಮ ಭೀಮರಾವ ಹೈಬತ್ತಿ, ಡಿಸಿಸಿ ಬ್ಯಾಂಕ್‌ ಸಿಇಒ ಮಲ್ಲಿಕಾರ್ಜುನ ಮಹಾಜನ, ಪ್ರಧಾನ ವ್ಯವಸ್ಥಾಪಕರಾದ ವಿಠuಲರೆಡ್ಡಿ ಎಡಮಲ್ಲೆ,ಚನ್ನಬಸಯ್ನಾ ಸ್ವಾಮಿ, ಬಸವರಾಜ ಹೆಬ್ಟಾಳೆ,ಶಿವಶರಣಪ್ಪ ತಗಾರೆ, ಬಗದಲ್‌ನ ಖಾದ್ರಿ ಮತ್ತು ನಿರ್ದೇಶಕರು ಇದ್ದರು. ಕಲ್ಯಾಣಿ ನಿರೂಪಿಸಿ ಉಮಾದೇವಿ ವಂದಿಸಿದರು.

ಅಧಿಕಾರದಾಸೆ ಇಲ್ಲ; ನಿರಾಶಾವಾದಿಯೂ ಅಲ್ಲ :  ದಿ| ನಾಗಮಾರಪಳ್ಳಿ ಅವರು ತೋರಿದ ಮಾರ್ಗದಲ್ಲಿ ಮುನ್ನಡೆದು ಅವರು ಕಟ್ಟಿ ಬೆಳೆಸಿದ ಡಿಸಿಸಿ ಬ್ಯಾಂಕ್‌ನ್ನು ಹೆಮ್ಮರವಾಗಿ ಬೆಳೆಸುವ ಕನಸು ನನ್ನದು. ಅಧಿಕಾರದ ಆಸೆ ನನಗಿಲ್ಲ. ಹಾಗಂತ ನಾನು ನಿರಾಶಾವಾದಿಯೂ ಇಲ್ಲ. ಒಂದು ವೇಳೆ ಅವಕಾಶ ಬಂದರೆ ಬಿಡುವುದೂ ಇಲ್ಲ. ಆದರೆ, ನನಗೆ ದುರಾಸೆ ಇಲ್ಲ. ಸಮಯ ಬಂದಾಗ ನೋಡೋಣ. ಇದಕ್ಕೆ ಎಲ್ಲರ ಸಹಾಯ-ಸಹಕಾರ ಬೇಕು. –ಉಮಾಕಾಂತ ನಾಗಮಾರಪಳ್ಳಿ, ಅಧ್ಯಕ್ಷರು, ಡಿಸಿಸಿ ಬ್ಯಾಂಕ್‌, ಬೀದರ

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.